– ಮೂರೇ ದಿನ ಬಾಕಿ ಇದ್ದ ಮದ್ವೆ, ಕೈಕಾಲು ಛಿಧ್ರ ಛಿಧ್ರ
ಚಿಕ್ಕಬಳ್ಳಾಪುರ: ಸಂಬಂಧಿಕರು ಮತ್ತು ಸ್ನೇಹಿತರಿಗೆ ವಿವಾಹ ಆಮಂತ್ರಣ ಪತ್ರಿಕೆ ಹಂಚಲು ಹೋಗಿದ್ದ ಮದುಮಗನೊರ್ವ ಅಪಘಾತದಲ್ಲಿ ಸಾವನ್ನಪ್ಪಿರುವ ಮನಕಲಕುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ತಡರಾತ್ರಿ ಚಿಕ್ಕಬಳ್ಳಾಪುರ ತಾಲೂಕು ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ, ರಾಷ್ಟ್ರೀಯ ಹೆದ್ದಾರಿ ನಾಗಾರ್ಜುನ ಕಾಲೇಜು ಬಳಿಯ ಸೇತುವೆ ಬಳಿ ಅಪಘಾತ ನಡೆದಿದೆ. ಟಿಪ್ಪರ್ ಹಾಗೂ ಬುಲೆಟ್ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ದೇವನಹಳ್ಳಿ ತಾಲೂಕು ಸೋಮತನಹಳ್ಳಿ ಗ್ರಾಮದ ಹನುಮಂತೇಗೌಡ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಮದುವೆಗೆ ಮೂರೇ ದಿನ ಬಾಕಿ ಇತ್ತು.
ಹಿಂಬದಿ ಕಿಶೋರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ನಂತರ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದು, ನಂದಿಗಿರಿಧಾಮ ಪೊಲೀಸರು ಟಿಪ್ಪರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕಾನೂನು ಕ್ರಮ ಕೈಗೊಂಡಿದ್ದಾರೆ. ಮದುವೆ ಸಂಭ್ರಮದ ಮನೆಯಲ್ಲಿ ಈಗ ಸೂತಕದ ವಾತಾವರಣ ನಿರ್ಮಾಣವಾಗಿದೆ.