Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಆರೋಗ್ಯ ಸೌಧದಲ್ಲಿ ಹುತಾತ್ಮ ವೈದ್ಯರ ಸ್ಮಾರಕ: ಡಾ.ಕೆ.ಸುಧಾಕರ್ ಘೋಷಣೆ

Public TV
Last updated: July 1, 2021 7:02 pm
Public TV
Share
2 Min Read
SUDHAKAR 1
SHARE

ಬೆಂಗಳೂರು: ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರನ್ನು ಪ್ರತಿವರ್ಷ ಸ್ಮರಿಸಲು ಆರೋಗ್ಯಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದರು.

ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮರು ಎಂದು ಕರೆಯಲಾಗುತ್ತದೆ. ದೇಶದಲ್ಲಿ 700ಕ್ಕೂ ಅಧಿಕ ವೈದ್ಯರು ಕೋವಿಡ್ ಕರ್ತವ್ಯದಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರು, ಆರೋಗ್ಯ ಸಿಬ್ಬಂದಿ ಕೋವಿಡ್ ವಿರುದ್ಧದ ಯುದ್ಧದಲ್ಲಿರುವುದರಿಂದ ಅವರನ್ನು ಯೋಧರು ಎಂದು ಕರೆಯಲಾಗಿದೆ. ಹಾಗೆಯೇ ಈ ಕಾರ್ಯದಲ್ಲಿ ಮೃತರಾದವರನ್ನು ಹುತಾತ್ಮರು ಎಂದು ಕರೆಯಲಾಗಿದೆ. ಈ ಹುತಾತ್ಮ ವೈದ್ಯರ ಸ್ಮರಣಾರ್ಥ ಆರೋಗ್ಯ ಸೌಧದ ಆವರಣದಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಉತ್ತಮ ವಿನ್ಯಾಸ ಮಾಡಿಸಿ ಸ್ಮಾರಕ ನಿರ್ಮಿಸಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು. ವೈದ್ಯರ ಕುಟುಂಬದವರು ಪ್ರತಿ ವರ್ಷದ ನಿಗದಿತ ದಿನ ಬಂದು ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ತಿಳಿಸಿದರು.

Sudhakar medium

ದೆಹಲಿಯಲ್ಲಿ ಸೈನಿಕ ಸ್ಮಾರಕವಿದ್ದು, ಅಲ್ಲಿ ಯೋಧರಿಗೆ ಎಲ್ಲರೂ ಗೌರವ ಸಲ್ಲಿಸುತ್ತಾರೆ. ಅದೇ ರೀತಿ ಇಲ್ಲಿ ಸ್ಮಾರಕ ನಿರ್ಮಿಸಿ ಯಾವಾಗಲೂ ಅವರನ್ನು ಸ್ಮರಿಸಬೇಕು. ಈ ಕಷ್ಟಕಾಲದಲ್ಲಿ ಶ್ರಮಿಸುತ್ತಿರುವ ಎಲ್ಲ ವೈದ್ಯರಿಗೆ ಸರ್ಕಾರದ ಪರವಾಗಿ ಧನ್ಯವಾದ ಎಂದರು.

ಅನೇಕ ವರ್ಷಗಳಿಂದ ಭತ್ಯೆಗೆ ಹೋರಾಟ ನಡೆದಿತ್ತು. ನಮ್ಮ ಸರ್ಕಾರ ಶೇ.30, 40 ರವರೆಗೂ ಭತ್ಯೆ ಹೆಚ್ಚಳ ಮಾಡಿದೆ. ಐತಿಹಾಸಿಕವಾಗಿ 1,763 ವೈದ್ಯರನ್ನು ನೇರ ನೇಮಕ ಮಾಡಲಾಗಿದೆ. ಜೊತೆಗೆ ಒಂದು ವರ್ಷ ಕಡ್ಡಾಯ ಸೇವೆಯಡಿ 2,050 ವೈದ್ಯರನ್ನು ನೇಮಿಸಲಾಗಿದೆ. 1 ಸಾವಿರಕ್ಕೂ ಅಧಿಕ ವೈದ್ಯರು ಮೆಡಿಕಲ್ ಕಾಲೇಜುಗಳಿಗೆ ನೇಮಕವಾಗಿದ್ದಾರೆ. ಎಲ್ಲ ಸೇರಿ 4 ಸಾವಿರ ವೈದ್ಯರ ನೇಮಕ ನಡೆದಿದೆ ಎಂದರು.

doctors medium

ಹಲ್ಲೆ, ಎಚ್ಚರಿಕೆ: ರೋಗಿಗಳ ಕಡೆಯವರು ವೈದ್ಯರು, ಆರೋಬ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದನ್ನು ಸರ್ಕಾರ ಉಗ್ರವಾಗಿ ಖಂಡಿಸುತ್ತದೆ. ಯಾವುದೇ ವೈದ್ಯ ಕೊನೆ ಗಳಿಗೆವರೆಗೆ ಜೀವ ಉಳಿಸಲು ಕೆಲಸ ಮಾಡುತ್ತಾರೆ. ರೋಗಿ ಸಾಯಲಿ ಎಂದು ಯಾರೂ ಬಯಸುವುದಿಲ್ಲ. ದುಃಖಕ್ಕೊಳಗಾದ ವೇಳೆ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಹಾಗೇನಾದರೂ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ವೈದ್ಯರ ಮೇಲೆ ಹಲ್ಲೆ ನಡೆಸಿದರೆ 5-7 ವರ್ಷ ಜೈಲುವಾಸದ ಶಿಕ್ಷೆ ಇದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

ಐಎಂಎನಲ್ಲಿ ನಡೆದ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಎಲ್ಲ ವೈದ್ಯರು ಐಎಂಎನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚು ಭತ್ಯೆ, ಬಡ್ತಿ ನೀಡುವ ಚಿಂತನೆ ಇದೆ ಎಂದರು.

Participated in the #DoctorsDay celebration organised by the Karnataka Chapter of IMA. Spoke about the immense contribution of legendary physician Bharat Ratna Dr.BC Roy and thanked the doctors for their invaluable service in fighting Covid19.#ThankYouDoctors #ವೈದ್ಯರಿಗೆಧನ್ಯವಾದ pic.twitter.com/kHNwNXRHIE

— Dr Sudhakar K (@mla_sudhakar) July 1, 2021

ಸಚಿವರು ಹೇಳಿದ ಇತರೆ ಅಂಶಗಳು: ಡಾ.ಬಿ.ಸಿ.ರಾಯ್ ರವರ ದೂರದೃಷ್ಟಿಯಿಂದಾಗಿ ಅನೇಕ ಆಸ್ಪತ್ರೆ ಮೂಲಸೌಕರ್ಯ ಸೃಷ್ಟಿಯಾಗಿದೆ. ಅವರು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಮೋಘ. ಹೆಚ್ಚು ವೈದ್ಯರು ಬರುವ ಜೊತೆಗೆ ಗ್ರಾಮೀಣ ಭಾಗದಲ್ಲಿ ಹೆಚ್ಚು ಸೇವೆ ನೀಡಬೇಕು. ಕಾನೂನು, ಕೋರ್ಟ್ ಆದೇಶದ ಮೂಲಕವೇ ಕಡ್ಡಾಯ ಗ್ರಾಮೀಣ ಸೇವೆ ಮಾಡುವುದಲ್ಲ. ಎಲ್ಲಕ್ಕಿಂತ ದೊಡ್ಡ ಕೋರ್ಟ್ ನಮ್ಮ ಅಂತಃಕರಣ.

ಇದೇ ವರ್ಷ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಲಸಿಕೆ ಕೊರತೆ ಇದ್ದಲ್ಲಿ ಎರಡೂಕಾಲು ಕೋಟಿ ಜನರಿಗೆ ಲಸಿಕೆ ನೀಡಲು ಹೇಗೆ ಸಾಧ್ಯ? ಕಾಂಗ್ರೆಸ್ ನವರು ಇದರಲ್ಲಾದರೂ ರಾಜಕೀಯ ಮಾಡುವುದು ನಿಲ್ಲಿಸಿ. ಅಂಕಿ ಅಂಶ ಇದ್ದರೆ ಮಾತ್ರ ಮಾತಾಡಿ. ಇಂದು ಕೋವಿಶೀಲ್ಡ್ 9 ಲಕ್ಷ ಲಸಿಕೆ ಕೇಂದ್ರದಿಂದ ಪೂರೈಕೆಯಾಗುತ್ತಿದೆ. ಉನ್ನತ ಶಿಕ್ಷಣ ತರಗತಿ ಆರಂಭಿಸಬೇಕಿದೆ. ಅದಕ್ಕಾಗಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು. ಸೋಮವಾರ ದೆಹಲಿಗೆ ತೆರಳಲಿದ್ದು, ಲಸಿಕೆ ಪೂರೈಕೆ ಬಗ್ಗೆ ಕೇಂದ್ರದ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

TAGGED:bengaluruCorona VirusCovid 19dr. k sudhakarPublic TVಕೊರೊನಾ ವೈರಸ್ಕೋವಿಡ್ 19ಡಾ ಕೆ ಸುಧಾಕರ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

Operation Sindoor
Latest

ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

Public TV
By Public TV
31 minutes ago
Mallikarjuna Kharge
Bengaluru City

ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

Public TV
By Public TV
40 minutes ago
Davanagere Tungabhadra River
Davanagere

ಮಲೆನಾಡು ಭಾಗದಲ್ಲಿ ನಿರಂತರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

Public TV
By Public TV
1 hour ago
Yathindra
Districts

ಮೈಸೂರಿಗೆ ನಾಲ್ವಡಿ ಬಿಟ್ಟರೆ ನಮ್ಮಪ್ಪನ ಕೊಡುಗೆಯೇ ಜಾಸ್ತಿ – ವಿಪಕ್ಷಗಳ ವಾಗ್ದಾಳಿ ಬೆನ್ನಲ್ಲೇ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

Public TV
By Public TV
1 hour ago
01 12
Big Bulletin

ಬಿಗ್‌ ಬುಲೆಟಿನ್‌ 27 July 2025 ಭಾಗ-1

Public TV
By Public TV
10 hours ago
02 14
Big Bulletin

ಬಿಗ್‌ ಬುಲೆಟಿನ್‌ 27 July 2025 ಭಾಗ-2

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?