Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಆರ್ಟಿಕಲ್ 370 ರದ್ದು ಭಾರತದ ಆಂತರಿಕ ವಿಚಾರ ಅಂತ ಒಪ್ಕೊಂಡ ಪಾಕ್

Public TV
Last updated: May 8, 2021 2:59 pm
Public TV
Share
2 Min Read
mohamd kureshi
SHARE

ಇಸ್ಲಾಮಾಬಾದ್: ಆರ್ಟಿಕಲ್ 370 ರದ್ದುಗೊಳಿಸಿದ್ದು ಭಾರತದ ಆಂತರಿಕ ವಿಚಾರ ಎಂದು 21 ತಿಂಗಳ ಬಳಿಕ ಪಾಕಿಸ್ತಾನ ಒಪ್ಪಿಕೊಂಡಿದೆ. ಪಾಕಿಸ್ತಾನದ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪಾಕ್ ವಿದೇಶಾಂಗ ಸಚಿವ ಮಹಮೂದ್ ಖುರೇಷಿ ಒಪ್ಪಿಕೊಂಡಿದ್ದಾರೆ.

Ind vs Pak

ಈ ಕುರಿತು ಪಾಕಿಸ್ತಾನದ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಖುರೇಷಿ, ಭಾರತದ ಕೇಂದ್ರ ಸರ್ಕಾರ ಜಮ್ಮು ಮತ್ತ ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ಈ ಪ್ರಕಾರ ಆರ್ಟಿಕಲ್ 370 ಮತ್ತು 35(ಎ) ಕೂಡ ರದ್ದು ಮಾಡಲಾಗಿದೆ. ಇದು ಭಾರತ ಆಂತರಿಕ ವಿಚಾರವಾಗಿದೆ. ಆದರೆ ಈ ವಿಷಯವಾಗಿ ಸುಪ್ರೀಂ ಕೋರ್ಟ್ ನಲ್ಲಿದ್ದು, ವಿಚಾರಣೆ ನಡೆಯುತ್ತಿದೆ.

After two years, foreign minister Qureshi has realised article 370 means nothing to Pakistan. "It is India's internal issue." pic.twitter.com/FFp2i7l7VT

— Naila Inayat (@nailainayat) May 7, 2021

370 ರದ್ದತಿಗೆ ನಾವು ಹೆಚ್ಚು ಪ್ರಾಮುಖ್ಯತೆ ನೀಡಲ್ಲ. 35 ಎ ರದ್ದುಗೊಂಡಿರುವ ಬಗ್ಗೆ ಚಿಂತಿತರಾಗಿದ್ದೇವೆ. ಕಾಶ್ಮೀರದ ಭೌಗೋಳಿಕ ಮತ್ತು ಜನಸಂಖ್ಯೆಯ ಸಮತೋಲನವನ್ನ ಬದಲಿಸುವ ಪ್ರಯತ್ನಗಳು ನಡೆದಿವೆ. 35ಎ ರದ್ದುಗೊಳಿಸಿದ್ದರಿಂದ ಭಾರತ ಪಡೆದುಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದು ಹೆಚ್ಚು ಅಂತ ಸಂದರ್ಶನದಲ್ಲಿ ಹೇಳಿದ್ದಾರೆ.

jammu kashmir

ಆರ್ಟಿಕಲ್ 370 ರದ್ದುಗೊಂಡ ನಂತರ ಜಮ್ಮು ಕಾಶ್ಮೀರ ಕೇಂದ್ರದ ಅಧೀನಕ್ಕೆ ಒಳಪಟಿದ್ದು. ಲಡಾಕ್ ಕೇಂದ್ರಾಡಳಿತ ಪ್ರದೇಶವಾಗಿದೆ. ಈ ನಿರ್ಧಾರ ಕೈಗೊಳ್ಳುತ್ತಿದ್ದಂತೆ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಸೇರಿದಂತೆ ಸ್ಥಳೀಯ ರಾಜಕೀಯ ನಾಯಕರಾದ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಸೇರಿ 6 ರಾಜಕೀಯ ಪಕ್ಷಗಳು ಕೈಜೋಡಿಸಿ ಆರ್ಟಿಕಲ್ 370ಗೆ ವಿರೋಧ ವ್ಯಕ್ತಪಡಿಸಿದ್ದರು ಎಂದು ತಿಳಿಸಿದ್ದಾರೆ.

ಪರಿಚ್ಛೇಧ 370, 35ಎ ಎಂದರೇನು?
35(ಎ) ಪ್ರಕಾರ, 1956ರಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಪ್ರತ್ಯೇಕ ಸಂವಿಧಾನವನ್ನು ರಚಿಸಲಾಗಿದ್ದು, ಇದು ರಾಜ್ಯದ ಶಾಶ್ವತ ನಿವಾಸಿಗಳನ್ನು ನಿರ್ಧರಿಸುತ್ತದೆ. ಈ ವಿಧಿಯ ಪ್ರಕಾರ 1954 ಮೇ 14ಕ್ಕೂ ಮುನ್ನ ರಾಜ್ಯದಲ್ಲಿ ನೆಲೆಸಿದವರು ಅಥವಾ ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿದ್ದು, ಕಾನೂನು ಬದ್ಧವಾಗಿ ಸ್ಥಿರಾಸ್ತಿ ಹೊಂದಿರುವವರಿಗಷ್ಟೇ ರಾಜ್ಯದ ಶಾಶ್ವತ ನಿವಾಸಿ ಹಕ್ಕು ದೊರೆಯುತ್ತದೆ.

Bhaderwah Jammu Kashmir

ಈ ವಿಧಿಯ ಪ್ರಕಾರ ಹೊರ ರಾಜ್ಯದವರು ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿಸಲು ಅಥವಾ ಸರ್ಕಾರಿ ಉದ್ಯೋಗ ಹೊಂದಲು ಅವಕಾಶವಿಲ್ಲ. 35 (ಎ) ವಿಧಿಯ ಮೂಲ ನಿಯಮವು ಮಹಿಳೆಯರ ವಿಚಾರದಲ್ಲಿ ತಾರತಮ್ಯ ಹೊಂದಿದ್ದು, ಅದರ ಪ್ರಕಾರ ಹೊರ ರಾಜ್ಯದ ವ್ಯಕ್ತಿಯನ್ನು ವಿವಾಹವಾಗುವ ಜಮ್ಮು-ಕಾಶ್ಮೀರ ಮಹಿಳೆ ಶಾಶ್ವತ ನಿವಾಸಿ ಹಕ್ಕನ್ನು ಕಳೆದುಕೊಳ್ಳುತ್ತಾಳೆ. ಆದರೆ ಪರುಷರು ಬೇರೆ ರಾಜ್ಯದ ಮಹಿಳೆಯನ್ನು ವಿವಾಹವಾದರೆ ಆ ಪುರಷನ ಹಕ್ಕಿಗೆ ಯಾವುದೇ ಧಕ್ಕೆ ಆಗುವುದಿಲ್ಲ. 2002 ರಲ್ಲಿ ಜಮ್ಮು-ಕಾಶ್ಮೀರ ಹೈಕೋರ್ಟ್ ಐತಿಹಾಸಿಕ ತೀರ್ಪಿನಲ್ಲಿ ಇಂತಹ ಹಕ್ಕನ್ನು ಮಹಿಳೆ ಕಳೆದುಕೊಳ್ಳುವುದಿಲ್ಲ. ಆದರೆ ಈ ದಂಪತಿಗೆ ಜನಿಸುವ ಮಕ್ಕಳಿಗೆ ಶಾಶ್ವತ ನಿವಾಸಿ ಹಕ್ಕು ಇರುವುದಿಲ್ಲ ಎಂದು ತೀರ್ಪು ನೀಡಿತ್ತು.

TAGGED:Article 370indiapakistanPublic TVShah Mehmood Qureshiಜಮ್ಮು ಕಾಶ್ಮೀರಪಬ್ಲಿಕ್ ಟಿವಿಪರಿಚ್ಛೇಧ 370ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
8 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
9 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
12 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
22 hours ago

You Might Also Like

Temba Bavuma Aiden Markram
Cricket

ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಆಗಲು ಆಫ್ರಿಕಾಗೆ ಬೇಕಿದೆ ಕೇವಲ 69 ರನ್‌!

Public TV
By Public TV
7 hours ago
Vijayapura Rain
Districts

ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Public TV
By Public TV
7 hours ago
ಸಾಂದರ್ಭಿಕ ಚಿತ್ರ
Belgaum

ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

Public TV
By Public TV
7 hours ago
Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
7 hours ago
Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
8 hours ago
Basavasagar dam
Districts

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?