ಆಷಾಢ ಮಾಸದ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿಲ್ಲ – ಮೈಸೂರು ಜಿಲ್ಲಾಡಳಿತ ಆದೇಶ

Public TV
1 Min Read
Chamundeshwari Temple atop Chamundi Hills 20171007135340 e1597639651188

ಮೈಸೂರು : ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆಷಾಢ ಮಾಸದ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ.

MYS CHAMUNDI HILLS

ಕೊರೊನಾ ಎರಡನೇ ಅಲೆಯಿಂದಾಗಿ ಇಷ್ಟು ದಿನ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳನ್ನು ಮುಚ್ಚಲಾಗಿತ್ತು. ಇದೀಗ ಸರ್ಕಾರ ರಾಜ್ಯವನ್ನು ಹಂತ ಹಂತವಾಗಿ ಅನ್‍ಲಾಕ್ ಮಾಡುತ್ತಿದ್ದು, ಸೋಮವಾರದಿಂದ ದೇವಾಲಯಗಳನ್ನು ತರೆಯಲು ಅನುಮತಿ ನೀಡಿದೆ. ಸದ್ಯ ಭಕ್ತರು ಸೋಮವಾರದಿಂದ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.

mys no chamundi pooje

ಈ ಮಧ್ಯೆ ಸಾಂಸ್ಕೃತಿಕನಗರಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ಆಗಸ್ಟ್ ನಿಂದ ಆಷಾಢ ಮಾಸ ಆರಂಭವಾಗಲಿದ್ದು, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಮೂಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಈ ಆದೇಶ ಮಾಡಿದ್ದಾರೆ. ನಾಲ್ಕು ಆಷಾಢ ಶುಕ್ರವಾರ ಹಾಗೂ ಎರಡು ಅಮಾವಾಸ್ಯೆ ದಿನ ನಿರ್ಬಂಧ ಹಾಕಲಾಗಿದೆ.

Nandi statue on Chamundi Hills Mysore

09/07/2021 ಆಷಾಢ ಅಮಾವಾಸ್ಯೆ
16/07/2021 ಮೊದಲನೇ ಆಷಾಢ ಶುಕ್ರವಾರ
23/07/2021 2ನೇ ಆಷಾಢ ಶುಕ್ರವಾರ
30/07/2021 3ನೇ ಆಷಾಢ ಶುಕ್ರವಾರ, ಅಮ್ಮನವರ ವಧರ್ಂತಿ,
06/08/2021 4ನೇ ಆಷಾಢ ಶುಕ್ರವಾರ

08/08/2021 ಭೀಮನ ಅಮಾವಾಸ್ಯೆ ದಿನ ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ನಿಬರ್ಂಧ ಹೇರಲಾಗಿದೆ. ಆಷಾಢ ಮಾಸದ ಶನಿವಾರ ಭಾನುವಾರ ಮತ್ತು ಸರ್ಕಾರಿ ಸಾರ್ವತ್ರಿಕ ರಜಾ ದಿನಗಳಂದು ನಿರ್ಬಂಧ ಇದ್ದು, ಇಂದಿನಿಂದ ಪ್ರತಿದಿನ ಸಂಜೆ 6 00 ಗಂಟೆಯ ನಂತರವೂ ನಿರ್ಬಂಧವಿದೆ. ಇದನ್ನೂ ಓದಿ:ಚಿದಾನಂದ ಸವದಿ ಕಾರು ಚಾಲನೆ ಮಾಡ್ತಿರಲಿಲ್ಲ: ಎಸ್‍ಪಿ ಲೋಕೇಶ್ ಜಗಲಾಸರ್

Share This Article
Leave a Comment

Leave a Reply

Your email address will not be published. Required fields are marked *