ಆಸ್ತಿಗಾಗಿ ಪತ್ನಿಯನ್ನ ಕೊಂದು ಹಾವಿನ ದ್ವೇಷದ ಕಥೆ ಕಟ್ಟಿದ್ದ ಪತಿ ಅರೆಸ್ಟ್

Public TV
2 Min Read
Kerala uttara

– ಒಂದಲ್ಲ ಎರಡು ಬಾರಿ ಹಾವಿನಿಂದ ಪತ್ನಿಗೆ ಕಚ್ಚಿಸಿದ್ದ ಪಾಪಿ
– ಕೃತ್ಯಕ್ಕೆ ಸಹಕರಿಸಿದ್ದ ಹಾವಾಡಿಗನ ಬಂಧನ

ತಿರುವನಂತಪುರಂ: ಆಸ್ತಿಗಾಗಿ ಪತ್ನಿಯನ್ನ ಕೊಂದು ಹಾವಿನ ದ್ವೇಷದ ಕಥೆ ಕಟ್ಟಿದ್ದ ಪತಿ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಹಾವಾಡಿಗನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಕೊಲ್ಲಂ ಜಿಲ್ಲೆಯ ಅಂಚಲ್ ನಿವಾಸಿ ಸೂರಜ್ (27) ಕೊಲೆಗೈದ ಪತಿ ಹಾಗೂ ಸುರೇಶ್ ಕೊಲೆಗೆ ಸಹಕರಿಸಿದ ಹಾವಾಡಿಗ. ಎಸ್.ಉತ್ತರ (25) ಕೊಲೆಯಾದ ಮಹಿಳೆ. ತಂದೆಯ ಹೇಯ ಕೃತ್ಯಕ್ಕೆ ಒಂದು ವರ್ಷದ ಗಂಡು ಮಗು ತಾಯಿಯನ್ನ ಕಳೆದುಕೊಂಡಿದೆ.

ಏನಿದು ಪ್ರಕರಣ?:
ಉತ್ತರಾಗೆ ಫೆಬ್ರವರಿಯಲ್ಲಿ ಹಾವು ಕಚ್ಚಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ಇದ್ದಾಗಲೇ ಅಂದ್ರೆ ಮೇ 7ರಂದು ಎರಡನೇ ಬಾರಿ ಹಾವು ಕಚ್ಚಿತ್ತು. ಆದರೆ ಉತ್ತರಾಳ ಪೋಷಕರು ಅಳಿಯನ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೆ ಸೂರಜ್ ವರದಕ್ಷಿಣೆಗಾಗಿ ನಮ್ಮ ಮಗಳಿಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದ. ಮದುವೆಯ ಸಮಯದಲ್ಲಿ ನೀಡಿದ್ದ ಕೆಲವು ಆಭರಣಗಳು ಲಾಕರ್ ನಿಂದ ಕಾಣೆಯಾಗಿವೆ ಎಂದು ದೂರಿದ್ದರು.

ಈ ಹಿನ್ನೆಲೆ ತನಿಖೆ ಆರಂಭಿಸಿದ ಪೊಲೀಸರಿಗೆ ಆಘಾತವೇ ಕಾದಿತ್ತು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೆಲ ಸತ್ಯಗಳು ಬೆಳಕಿಗೆ ಬಂದಿದ್ದವು. ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್ ಕಳೆದ ಐದು ತಿಂಗಳುಗಳಿಂದ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದ. ಈ ಕುರಿತು ಇಂಟರ್ನೆಟ್‍ನಲ್ಲಿ ವಿಡಿಯೋ ಕೂಡ ನೋಡಿದ್ದ.

uthra 1

ಸೂರಜ್ 10 ಸಾವಿರ ರೂ. ಪಾವತಿಸಿ ಕೊಲ್ಲಂ ಜಿಲ್ಲೆಯ ಹಾವಾಡಿಗ ಸುರೇಶ್‍ನಿಂದ ಹಾವನ್ನು ಖರೀದಿಸಿದ್ದ. ಬಳಿಕ ತನ್ನ ರೂಮ್‍ನಲ್ಲಿ ಹಾವನ್ನು ಬಿಟ್ಟು ಪತ್ನಿಗೆ ಕಚ್ಚುವಂತೆ ಮಾಡಿದ್ದ. ಮೊದಲ ಬಾರಿಗೆ ಹಾವು ಕಚ್ಚಿದಾಗಲೇ ಪತ್ನಿ ಸಾಯುತ್ತಾಳೆ ಎಂದು ಸೂರಜ್ ತಿಳಿಸಿದ್ದ. ಆದರೆ ಅದೃಷ್ಟವಶಾತ್ ಉತ್ತರ ಬದುಕುಳಿದಿದ್ದಳು. ಅಳಿಯನ ಮೇಲೆ ಆಗಲೇ ಅನುಮಾನ ವ್ಯಕ್ತಪಡಿಸಿದ್ದ ಉತ್ತರಾಳ ಪೋಷಕರು ಮಗಳನ್ನು ತಮ್ಮ ಊರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತಿದ್ದರು.

ಆರೋಪಿ ಮೇ 6ರಂದು ಮತ್ತೆ ಹಾವಿನಿಂದ ಪತ್ನಿಗೆ ಕಚ್ಚಿಸಿ ಕೊಲೆಗೈದಿದ್ದ. ಅಷ್ಟೇ ಅಲ್ಲದೆ ಹಾವನ್ನು ಕೊಂದು ಒಳ್ಳೆಯವನಂತೆ ನಾಟಕವಾಡಿದ್ದ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

snake 1 copy

ಪತ್ನಿಯನ್ನ ಕೊಂದರೆ ಆಕೆಯ ಹೆಸರಿನಲ್ಲಿದ್ದ ಆಸ್ತಿ ತನಗೆ ಬರುತ್ತದೆ ಎಂದು ಸೂರಜ್ ಕೃತ್ಯ ಎಸೆಗಿದ್ದಾನೆ. ಅಷ್ಟೇ ಅಲ್ಲದೆ ವರದಕ್ಷಿಣೆಗಾಗಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎನ್ನುವುದು ವಿಚಾರಣೆ ವೇಳೆ ಸ್ಪಷ್ಟವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *