ತುಮಕೂರು: ಆಸ್ತಿ ವಿವಾದದ ಹಿನ್ನೆಲೆ ಹಾಡಹಗಲೇ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಕಾಚೀಹಳ್ಳಿಯಲ್ಲಿ ನಡೆದಿದೆ.
ಶಶಿ ಕುಮಾರ್ (35) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಹರೀಶ್ ಕೊಲೆ ಮಾಡಿದ್ದಾನೆ. ಮನೆ ಬಳಿ ಬಂದು ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಲಾಗಿದೆ. ಆಸ್ತಿ ವಿವಾದದ ಹಿನ್ನೆಲೆ ಕಳೆದ ಅನೇಕ ವರ್ಷಗಳಿಂದ ವೈಷಮ್ಯ ಇತ್ತು. ಇಂಧು ಸಿಟ್ಟಿಗೆದ್ದ ಹರೀಶ್ ಶಶಿ ಕುಮಾರ್ ಮನೆ ಬಳಿ ಆಗಮಿಸಿ ಕೊಲೆ ಮಾಡಿದ್ದಾನೆ.
ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.