ಹಾಸನ: ಆ ನಿಂಬೆಹಣ್ಣಿನ ಶಕ್ತಿಯನ್ನು ಹೆದರಿಸುವ ಶಕ್ತಿ ಪ್ರೀತಂಗೌಡ ಅವರ ನಿಂಬೆಹಣ್ಣಿಗಿದೆ ಎಂದು ಸಚಿವ ಎಸ್ಟಿ.ಸೋಮಶೇಖರ್ ಪರೋಕ್ಷವಾಗಿ ರೇವಣ್ಣ ಅವರು ಬಗ್ಗೆ ವ್ಯಂಗ್ಯವಾಡಿದ್ದಾರೆ.
ಇಂದು ಹಾಸನದ ಚನ್ನರಾಯಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಪ್ರೀತಂಗೌಡ್ರೇ ಇರಬೇಕು. ನಿಂಬೆಹಣ್ಣಿಗೆ ಪ್ರತಿ ವಿರುದ್ಧ ನಿಂಬೆಹಣ್ಣು ತೋರಿಸುವಂತವರು ಪ್ರೀತಂಗೌಡ. ಹೀಗಾಗಿ ಹಾಸನ ಜಿಲ್ಲೆಗೆ ಅವರೇ ಸರಿ ಎಂದು ಪ್ರೀತಂಗೌಡರನ್ನು ಹಾಡಿಹೊಗಳಿದ್ದಾರೆ.
ಆ ನಿಂಬೆಹಣ್ಣು ತೋರಿಸಿದರೆ ರಾಜ್ಯದ ಎಂತೆಂತಹ ನಾಯಕರೇ ತತ್ತರಿಸಿ ಹೋಗುತ್ತಾರೆ. ಆದರೆ ಆ ನಿಂಬೆಹಣ್ಣಿಗೆ ಪ್ರತಿ ನಿಂಬೆಹಣ್ಣು ತೋರಿಸಿ ಕಂಟ್ರೋಲ್ ಮಾಡುವ ಶಕ್ತಿ ಇದ್ದರೆ ಅದು ಪ್ರೀತಂಗೌಡರಿಗೆ ಮಾತ್ರ. ಅವರಿಗೆ ಇನ್ನೂ ಹೆಚ್ಚಿನ ಶಕ್ತಿಯನ್ನು ನಾವು ನೀಡುತ್ತೇವೆ ಎಂದು ಮಾಜಿ ಸಚಿವ ಹೆಚ್ಡಿ.ರೇವಣ್ಣ ನಿಂಬೆಹಣ್ಣಿನ ಶಕ್ತಿ ವಿರುದ್ಧ ಪರೋಕ್ಷವಾಗಿ ಮಾತನಾಡಿದ್ದಾರೆ.