ಇಂದು ಸಂಜೆ ಸಭೆ, ಲಾಕ್‍ಡೌನ್ ಬಗ್ಗೆ ನಾಳೆ ನಿರ್ಧಾರ: ಬಿಎಸ್‍ವೈ

Public TV
1 Min Read
BSY 12

ಬೆಂಗಳೂರು: ಲಾಕ್ ಡೌನ್ ಬಗ್ಗೆ ನಾಳೆ ನಿರ್ಧಾರ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಗ್ರಾಮೀಣ ಭಾಗದಲ್ಲಿ ಹರಡುತ್ತಿರುವುದರಿಂದ ಬಹಳ ಆತಂಕ ಇದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕ್ರಮಕ್ಕೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

LOCKDOWN 2 1

ಲಾಕ್ ಡೌನ್ ಕುರಿತು ಇಂದು ಸಂಜೆ ಸಚಿವರ ಸಭೆ ಇದೆ. ಸಚಿವರ ಜೊತೆ ಕುಳಿತು ಚರ್ಚೆ ಮಾಡುತ್ತೇವೆ. ಹಾಗೆಯೇ ನಾಳೆ ಸರ್ಕಾರದ ನಿರ್ಧಾರ ತಿಳಿಸುವುದಾಗಿ ಸಿಎಂ ಹೇಳಿದರು.

ಈ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳ ಡಿಸಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದ ಪ್ರಧಾನಿ ಮೋದಿ, ಲಾಕ್ ಡೌನ್ ನಿರ್ಧಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಹೆಗಲಿಗೆ ಬಿಟ್ಟಿದ್ದರು. ನಿಮ್ಮ ನಿಮ್ಮ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದರು.

BSY 1 6

Share This Article
Leave a Comment

Leave a Reply

Your email address will not be published. Required fields are marked *