– 382 ಸಾವು, 28,053 ಡಿಸ್ಚಾರ್ಜ್
ಬೆಂಗಳೂರು: ಇಂದು ರಾಜ್ಯದಲ್ಲಿ 20,378 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕು ಪಸರಿಸುವ ಪ್ರಮಾಣ ಶೇ.14.68ರಷ್ಟಿದೆ. ಇಂದು ಮಹಾಮಾರಿಗೆ 382 ಜನ ಸಾವನ್ನಪ್ಪಿದ್ದು, 28,053 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ 3,42,010 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೂ 25,87,827 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 28,679 ಜನ ಸಾವನ್ನಪ್ಪಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.87ಕ್ಕೆ ಇಳಿಕೆಯಾಗಿದೆ. ಇವತ್ತು 1,38,809 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ರಾಜಧಾನಿಯಲ್ಲಿ ಕೊರೊನಾ ಸಂಖ್ಯೆ ಇಳಿಕೆಯಾಗಿದ್ದು, 4,734 ಜನಕ್ಕೆ ಸೋಂಕು ತಗುಲಿದೆ. ಇವತ್ತು 213 ಜನರು ಸಾವನ್ನಪ್ಪಿದ್ದು, ಸದ್ಯ 1,62,625 ಸಕ್ರಿಯ ಪ್ರಕರಣಗಳಿವೆ. 6,078 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 193, ಬಳ್ಳಾರಿ 598, ಬೆಳಗಾವಿ 1,171, ಬೆಂಗಳೂರು ಗ್ರಾಮಾಂತರ 392, ಬೆಂಗಳೂರು ನಗರ 4,734, ಬೀದರ್ 37, ಚಾಮರಾಜನಗರ 402, ಚಿಕ್ಕಬಳ್ಳಾಪುರ 356, ಚಿಕ್ಕಮಗಳೂರು 671, ಚಿತ್ರದುರ್ಗ 805, ದಕ್ಷಿಣ ಕನ್ನಡ 727, ದಾವಣಗೆರೆ 698, ಧಾರವಾಡ 525, ಗದಗ 289, ಹಾಸನ 2,227, ಹಾವೇರಿ 206, ಕಲಬುರಗಿ 107, ಕೊಡಗು 271, ಕೋಲಾರ 341, ಕೊಪ್ಪಳ 365, ಮಂಡ್ಯ 643, ಮೈಸೂರು 1,559, ರಾಯಚೂರು 278, ರಾಮನಗರ 164, ಶಿವಮೊಗ್ಗ 386, ತುಮಕೂರು 773, ಉಡುಪಿ 651, ಉತ್ತರ ಕನ್ನಡ 504, ವಿಜಯಪುರ 198 ಮತ್ತು ಯಾದಗಿರಿಯಲ್ಲಿ 107 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.