-ರಾಜ್ಯದಲ್ಲಿ 97,001 ಸಕ್ರಿಯ ಪ್ರಕರಣಗಳು
ಬೆಂಗಳೂರು: ಇಂದು ರಾಜ್ಯದಲ್ಲಿ 5,773 ಮಂದಿಗೆ ಕೊರೊನಾ ಸೋಂಕು ತಗುಲಿದ್ರೆ, 8,015 ಜನರು ಗುಣಮುಖರಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 97,001 ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 794 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 141 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 6,534ಕ್ಕೆ ಏರಿಕೆ ಕಂಡಿದೆ.
ಇಂದಿನ 07/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/88EfrL2WUY pic.twitter.com/2WTQP1heQd
— K'taka Health Dept (@DHFWKA) September 7, 2020
ಸಿಲಿಕಾನ್ ಸಿಟಿಯಲ್ಲಿ ಇಂದು ಕೊರೊನಾ ಅಬ್ಬರಿಸಿದ್ದು, 48 ಜನರನ್ನ ಬಲಿ ಪಡೆದುಕೊಂಡಿದೆ. ಇಂದು ರಾಜಧಾನಿಯ 3,942 ಜನಕ್ಕೆ ಕೊರೊನಾ ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,50,523ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಸಾವುಗಳ ಪೈಕಿ ಬೆಂಗಳೂರಿನಲ್ಲಿಯೇ 2,211 ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 2942, ಬೀದರ್ 32, ಚಾಮರಾಜನಗರ 20, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 101, ಚಿತ್ರದುರ್ಗ 50, ದಕ್ಷಿಣ ಕನ್ನಡ 152, ದಾವಣಗೆರೆ 199, ಧಾರವಾಡ 29, ಗದಗ 87, ಹಾಸನ 128, ಹಾವೇರಿ 53, ಕಲಬುರಗಿ 141, ಕೊಡಗು 11, ಕೋಲಾರ 26, ಕೊಪ್ಪಳ 139, ಮಂಡ್ಯ 169, ಮೈಸೂರು 221, ರಾಯಚೂರು 22, ರಾಮನಗರ 11, ಶಿವಮೊಗ್ಗ 150, ತುಮಕೂರು 25, ಉಡುಪಿ 113, ಉತ್ತರ ಕನ್ನಡ 77, ವಿಜಯಪುರ 112 ಮತ್ತು ಯಾದಗಿರಿಯಲ್ಲಿ 137 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.