– 7,464 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು: ರಾಜ್ಯದಲ್ಲಿ ಇಂದು 8,960 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3,18,752ಕ್ಕೆ ಏರಿಕೆಯಾಗಿದೆ.
ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 136 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 5,368 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 7,464 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3,18,752 ಸೋಂಕಿತರ ಪೈಕಿ 86,347 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 227018 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 754 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 23,416 ರ್ಯಾಪಿಡ್ ಟೆಸ್ಟ್ ನಲ್ಲಿ 40,810 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 64,226 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 7,76,270 ಮಂದಿಗೆ ರ್ಯಾಪಿಡ್ ಟೆಸ್ಟ್, 19,36,764 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 27,13,034 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 2,721 ಮಂದಿಗೆ ಸೋಂಕು ದೃಢವಾಗಿದ್ದು, 41 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,21,449ಕ್ಕೆ ಏರಿಕೆ ಆಗಿದೆ. ಬಳ್ಳಾರಿ 484, ಬೆಳಗಾವಿ 290, ಬೆಂಗಳೂರು ಗ್ರಾಮಾಂತರ 214, ದಕ್ಷಿಣ ಕನ್ನಡ 448, ದಾವಣಗೆರೆ 379, ಧಾರವಾಡ 299, ಹಾಸನ 357, ಕಲಬುರಗಿ 222, ಕೊಪ್ಪಳ 217, ಮೈಸೂರು 726, ಶಿವಮೊಗ್ಗ 314 ಹಾಗೂ ತುಮಕೂರು 250 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಒಟ್ಟು 12 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಬಾಗಲಕೋಟೆ 141, ಬಳ್ಳಾರಿ 623, ಬೆಳಗಾವಿ 789, ಬೆಂಗಳೂರು ಗ್ರಾಮಾಂತರ 58, ಬೆಂಗಳೂರು ನಗರ 2,148, ಬೀದರ್ 19, ಚಾಮರಾಜನಗರ 36, ಚಿಕ್ಕಬಳ್ಳಾಪುರ 101, ಚಿಕ್ಕಮಗಳೂರು 113, ಚಿತ್ರದುರ್ಗ 78, ದಕ್ಷಿಣ ಕನ್ನಡ 293, ದಾವಣಗೆರೆ 208, ಧಾರವಾಡ 565, ಗದಗ 68, ಹಾಸನ 167, ಹಾವೇರಿ 154, ಕಲಬುರಗಿ 87, ಕೊಡಗು 24, ಕೋಲಾರ 1, ಕೊಪ್ಪಳ 252, ಮಂಡ್ಯ 86, ಮೈಸೂರು 479, ರಾಯಚೂರು 227, ರಾಮನಗರ 174, ಶಿವಮೊಗ್ಗ 83, ತುಮಕೂರು 36, ಉಡುಪಿ 187, ಉತ್ತರ ಕನ್ನಡ 88, ವಿಜಯಪುರ 152 ಹಾಗೂ ಯಾದಗಿರಿಯಲ್ಲಿ 27 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದಿನ 28/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommai https://t.co/km1JmKIj39 pic.twitter.com/4jh7A25slJ
— K'taka Health Dept (@DHFWKA) August 28, 2020