Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಳಿ ವಯಸ್ಸಿನಲ್ಲಿ ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಳಿ ವಯಸ್ಸಿನಲ್ಲಿ ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು

Bengaluru City

ಇಳಿ ವಯಸ್ಸಿನಲ್ಲಿ ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು

Public TV
Last updated: May 25, 2021 11:30 pm
Public TV
Share
3 Min Read
FotoJet 6 30
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ತಂದೆ-ತಾಯಿ ಕೊರೊನಾ ಸೋಂಕಿಗೆ ಒಳಗಾಗಿದ್ದರು ಎಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಇಷ್ಟು ದಿನ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆದು ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ದುನಿಯ ವಿಜಯ್‍ರವರು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

ವೀಡಿಯೋದಲ್ಲಿ ದುನಿಯಾ ವಿಜಯ್‍ರವರು ತಮ್ಮ ತಂದೆ ತಾಯಿಗೆ ಆರೈಕೆ ಮಾಡಿದ್ದು, ವಯಸ್ಸಾದ ಕಾಲದಲ್ಲಿ ತಂದೆ ತಾಯಿಗೆ ನೆರವಾಗಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ವೀಡಿಯೋ ಜೊತೆಗೆ ಅವರು ಒಂದು ತಿಂಗಳು ಕಾಲ ಕಳೆದಿರುವುದರ ಬಗ್ಗೆ ಸಣ್ಣ ಕಥೆಯೊಂದನ್ನು ಹೇಳಿಕೊಂಡಿದ್ದಾರೆ.

FotoJet 8 29

‘ಸುಮಾರು ಒಂದು ತಿಂಗಳಿಂದ ನನ್ನ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಮನುಷ್ಯ ಯಾವಾಗಲೂ ಪಾಸಿಟಿವ್ ಆಗಿರಬೇಕು ಅಂತಾರೆ. ನಾನು ಜೀವನದಲ್ಲಿ ಇರೋದು ಯಾವಾಗಲೂ ಹಾಗೇನೆ. ಆದರೆ ಒಂದು ದಿನ ನನ್ನ ಜನ್ಮದಾತರಿಬ್ಬರಿಗೂ ಕೊರೊನಾ ಪಾಸಿಟಿವ್ ಆಗಿದೆ ಎಂದಾಗ ಒಂದು ಕ್ಷಣ ನಲುಗಿದೆ. ಮತ್ತೆ ಮರುಕ್ಷಣ ಕಾರ್ಯಶೀಲನಾದೆ. ಬಿಯು ನಂಬರ್ ಬರೋವರೆಗೂ ನಮ್ಮ ತಂದೆ ತಾಯಿಗೆ ಬೆಡ್ ಸಿಗಲ್ಲ ಎಂಬ ವಿಷಯ ನನಗೆ ತಿಳಿಯಿತ್ತು.

FotoJet 7 25

ನನ್ನ ತಂದೆಗೆ 80 ವರ್ಷ ವಯಸ್ಸು, ನನ್ನ ತಾಯಿಗೆ 76 ವರ್ಷ. ಈಗಾಗಲೇ ಅವರ ಆರೋಗ್ಯದ ಸ್ಥಿತಿ ಹದಗೆಟ್ಟಿದೆ. ಯೋಚಿಸಿಕೊಂಡು ಕೋರುವ ಸಮಯ ಇದಲ್ಲ ಎಂದು ತಿಳಿದ ನಾನು ನನ್ನ ಆತ್ಮೀಯ ವೈದ್ಯ ವಿದ್ಯಾನಂದರನ್ನು ಸಂಪರ್ಕಿಸಿದೆ. ಆಗ ಅವರು ಬೆಡ್‍ಗೆ ಕಾಯದೆ ಟ್ರೀಟ್ಮೆಂಟ್ ಆರಂಭಿಸಲು ಹೇಳಿದರು. ಅಂದು ಡಾಕ್ಟರ್ ಜೊತೆ ಸಾಯಂಕಾಲ ಮಾತನಾಡಿ ನಂತರ ರಾತ್ರಿ ಒಬ್ಬನೇ ಯೋಚಿಸುತ್ತಾ ಕುಳಿತಾಗ ‘ನಿಮ್ಮ ತಂದೆ-ತಾಯಿಗೆ ಬಂದಿರುವ ಕೊರೊನಾ ಅವರನ್ನು ಆರೈಕೆ ಮಾಡುವ ಸಮಯದಲ್ಲಿ ನಿನಗೂ ಬಂದು ಸಾಯುವೆ ನೆಂಬ ಭಯವೇ’ ಎಂಬ ಪ್ರಶ್ನೆಯನ್ನು ನನ್ನ ಆತ್ಮಸಾಕ್ಷಿ ನನ್ನ ಮುಂದಿಟ್ಟಿತು. ಮರುಕ್ಷಣದಲ್ಲೇ ನನ್ನ ಆತ್ಮಸಾಕ್ಷಿಗೆ ನನ್ನ ಉತ್ತರ ನಗುವಾಗಿತ್ತು. ಅವರೇ ನೀಡಿದ ಈ ಜನ್ಮ ಅವರ ಆರೈಕೆ ಸಂದರ್ಭದಲ್ಲಿ ಹೋದರೆ ಅದಕ್ಕಿಂತ ಅದೃಷ್ಟ ಇನ್ನೇನಿದೆ ಎಂದುಕೊಂಡು. ಸುಮಾರು 15 ಗಂಟೆಗಳ ನಂತರ ಅಂದರೆ ಮರುದಿನ ಬೆಳಗ್ಗೆ 9:00ರ ಮುಂಜಾನೆಗೆ ಒಂದು ಆಟೋದಲ್ಲಿ ಆಕ್ಸಿಜನ್, ಮೆಡಿಸಿನ್ ಜತೆ ಈಶ್ವರ್ ಎಂಬ ಆರೋಗ್ಯ ಶುಶ್ರೂಷಕ ಬಂದು ಇಳಿದರು.

FotoJet 9 21

 

ನಾನು ನನ್ನ ಮಗ ಮತ್ತು ಕೀರ್ತಿ ಮೂರು ಜನ ನಮ್ಮ ತಂದೆ ತಾಯಿಯನ್ನು ಕರೆದುಕೊಂಡು ಹೋಗಲು ಬಂದಿದ್ದ ಕ್ರೂರಿ ಕೊರೊನಾ ಜೊತೆ ಸೆಣೆಸಾಡಲು ನಿಂತೆವು. ಮಾನಸಿಕವಾಗಿ ನಾನು ನಂಬಿದ ಗುರುಗಳು ನನ್ನ ಜತೆಯಲ್ಲಿದ್ದರೆ, ದೈಹಿಕವಾಗಿ ನಮ್ಮ ಜೊತೆ ಆರೋಗ್ಯ ಶುಶ್ರೂಷಕ ಈಶ್ವರ್ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಅರ್ಧಗಂಟೆ ಬಂದು ಹೋಗುತ್ತಿದ್ದರು. ನಮ್ಮ ತಂದೆ ಈಗಾಗಲೇ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅದರಲ್ಲಿ ಈ ಕೊರೊನಾ ಅವರನ್ನು ತುಂಬಾ ಬಳಲುವಂತೆ ಮಾಡಿತು. ನಮ್ಮ ತಾಯಿ ಎರಡು ಮೂರು ದಿನದಲ್ಲಿ ಚಿಕಿತ್ಸೆಗೆ ಸ್ಪಂದಿಸಲು ಪ್ರಾರಂಭಿಸಿದರು. ಈ ನಡುವೆ ಪ್ರತಿ ದಿನ ವೀಡಿಯೋ ಕಾಲ್ ಮೂಲಕ ವೈದ್ಯರು ಚಿಕಿತ್ಸೆಯನ್ನು ಹೇಳುತ್ತಿದ್ದರು ಮತ್ತು ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅದರ ಜತೆಗೆ ಪ್ರತಿ ದಿನ ಬರುತ್ತಿದ್ದ ಈಶ್ವರ ನಮ್ಮಗಳ ಪಾಲಿಗೆ ನಿಜವಾದ ಈಶ್ವರನೆ ಆದ. ನಮ್ಮ ತಂದೆಯ ಆರೋಗ್ಯ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸಲು ಪ್ರಾರಂಭಿಸಿತು. ಯಾವ ಮಟ್ಟಿಗೆ ಎಂದರೆ ನನ್ನ ಆತ್ಮೀಯರು ಫೋನ್ ಮಾಡಿದಾಗ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋಗುತ್ತಾರೆ ಏನು ಎಂಬ ಅನುಮಾನ ಕಾಡುತ್ತಿದೆ ಎಂದು ಸ್ವತಃ ನಾನೇ ಹೇಳಿದ್ದುಂಟು. ಆ ಕಾರಣಕ್ಕೆ ಅವರ ಜತೆ ಕಳೆಯುತ್ತಿರುವ ಕೊನೆಯ ಕ್ಷಣಗಳು ನೆನಪಿನಲ್ಲಿ ಉಳಿಯಲಿ ಎಂಬ ಉದ್ದೇಶದಿಂದ ವಿಡಿಯೋ ಮಾಡಲು ಪ್ರಾರಂಭಿಸಿದೆವು. ಇದರ ಮಧ್ಯೆ ನಾನು ಭರವಸೆಯನ್ನು ಮಾತ್ರ ಕಳೆದುಕೊಂಡಿರಲಿಲ್ಲ.

ಮೊದಲು ನನ್ನ ತಾಯಿ ಚೇತರಿಸಿಕೊಂಡು ಕೊರೋನಾದಿಂದ ಸಂಪೂರ್ಣವಾಗಿ ಗುಣಮುಖರಾದರು. ‘ ನೀನು ಹೆದರಬೇಡ. ಚೇತರಿಸಿಕೊಂಡ ನಂತರ ನನ್ನಮ್ಮ ನನ್ನನ್ನು ಕರೆದು ‘ ನಮಗೆ ಯಾರಿಗೂ ಸಿಗದ ಯೋಗ ನಿನಗೆ ಸಿಕ್ಕಿದೆ. ನಿನ್ನನ್ನು ಪ್ರೀತಿಸುವವರು ಇರುವವರೆಗೂ, ಅವರ ಆಶೀರ್ವಾದ, ಆರೈಕೆ ನಿನ್ನನ್ನು ಕಾಯುತ್ತದೆ’ ಎಂದು ಹೇಳಿದರು. ನಿಜವಾಗಲೂ ನಮ್ಮ ತಾಯಿ ಹೇಳಿದಂತೆ ಆಯಿತು. ನಿಮ್ಮಗಳ ಆಶೀರ್ವಾದ ಮತ್ತು ದೈವ ಬಲದಿಂದ ನಮ್ಮ ಮನೆಯಲ್ಲಿ ಚಮತ್ಕಾರ ನಡೆಯಿತು. ನಮ್ಮ ತಂದೆ ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಾ ಬಂದರು. ನಾನು ನಿಮ್ಮೆಲ್ಲರ ಬಳಿ ಕೇಳಿಕೊಳ್ಳುವುದಿಷ್ಟೆ. ಕೊರೋನಾ ಬಂತು ಎಂದು ಧೃತಿಗೆಡಬೇಡಿ, ತಂದೆ-ತಾಯಿಯರನ್ನು ಕೈಬಿಡಬೇಡಿ. ನನ್ನ ತಂದೆ-ತಾಯಿ ಬದುಕಿದ್ದಾರೆ ಎಂಬ ಖುಷಿಯಿಂದ ಈ ಘಟನೆಯನ್ನು ಹಂಚಿಕೊಳ್ಳುತ್ತಿಲ್ಲ, ಎಷ್ಟೋ ಜನ ನನ್ನ ರೀತಿ ಸೇವೆ ಮಾಡಿ ತಂದೆತಾಯಿಯನ್ನು ಕಳೆದುಕೊಂಡವರಿದ್ದಾರೆ. ಅವರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಆದರೆ ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ. ಸಕಾರಾತ್ಮಕವಾಗಿ ಯೋಚಿಸಿ ಈ ಕೊರೊನಾ ವಿರುದ್ಧ ಗೆಲ್ಲೋಣ. ಜತೆಗೆ ನನ್ನ ಜೀವನದಲ್ಲಿ ನಡೆದ ಈ ಘಟನೆ ಕೆಲವರಿಗೆ ಸ್ಪೂರ್ತಿಯಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಹಂಚಿಕೊಂಡಿರುವುದಾಗಿ ತಿಳಿಸಿದ್ದಾರೆ.

TAGGED:bengaluruCoronafathermotherPublic TVsandalwoodಕೊರೊನಾತಂದೆತಾಯಿಪಬ್ಲಿಕ್ ಟಿವಿ Vijayಬೆಂಗಳೂರುವಿಜಯ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರಿಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood
fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood
Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories

You Might Also Like

davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
9 minutes ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
38 minutes ago
Road Accident 2
Bengaluru City

ಬೆಂಗಳೂರಲ್ಲಿ ರಸ್ತೆ ಕಾಮಗಾರಿಗೆ ಪುಟ್ಟ ಕಂದಮ್ಮ ಬಲಿ

Public TV
By Public TV
54 minutes ago
akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
2 hours ago
Bomb Threat
Bagalkot

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ – ಹೆಚ್ಚಿದ ಆತಂಕ, ಪೊಲೀಸರಿಂದ ತೀವ್ರ ಶೋಧ

Public TV
By Public TV
2 hours ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?