Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಳಿ ವಯಸ್ಸಿನಲ್ಲಿ ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಳಿ ವಯಸ್ಸಿನಲ್ಲಿ ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು

Bengaluru City

ಇಳಿ ವಯಸ್ಸಿನಲ್ಲಿ ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು

Public TV
Last updated: May 25, 2021 11:30 pm
Public TV
Share
3 Min Read
FotoJet 6 30
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ತಂದೆ-ತಾಯಿ ಕೊರೊನಾ ಸೋಂಕಿಗೆ ಒಳಗಾಗಿದ್ದರು ಎಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಇಷ್ಟು ದಿನ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆದು ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ದುನಿಯ ವಿಜಯ್‍ರವರು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

ವೀಡಿಯೋದಲ್ಲಿ ದುನಿಯಾ ವಿಜಯ್‍ರವರು ತಮ್ಮ ತಂದೆ ತಾಯಿಗೆ ಆರೈಕೆ ಮಾಡಿದ್ದು, ವಯಸ್ಸಾದ ಕಾಲದಲ್ಲಿ ತಂದೆ ತಾಯಿಗೆ ನೆರವಾಗಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ವೀಡಿಯೋ ಜೊತೆಗೆ ಅವರು ಒಂದು ತಿಂಗಳು ಕಾಲ ಕಳೆದಿರುವುದರ ಬಗ್ಗೆ ಸಣ್ಣ ಕಥೆಯೊಂದನ್ನು ಹೇಳಿಕೊಂಡಿದ್ದಾರೆ.

FotoJet 8 29

‘ಸುಮಾರು ಒಂದು ತಿಂಗಳಿಂದ ನನ್ನ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಮನುಷ್ಯ ಯಾವಾಗಲೂ ಪಾಸಿಟಿವ್ ಆಗಿರಬೇಕು ಅಂತಾರೆ. ನಾನು ಜೀವನದಲ್ಲಿ ಇರೋದು ಯಾವಾಗಲೂ ಹಾಗೇನೆ. ಆದರೆ ಒಂದು ದಿನ ನನ್ನ ಜನ್ಮದಾತರಿಬ್ಬರಿಗೂ ಕೊರೊನಾ ಪಾಸಿಟಿವ್ ಆಗಿದೆ ಎಂದಾಗ ಒಂದು ಕ್ಷಣ ನಲುಗಿದೆ. ಮತ್ತೆ ಮರುಕ್ಷಣ ಕಾರ್ಯಶೀಲನಾದೆ. ಬಿಯು ನಂಬರ್ ಬರೋವರೆಗೂ ನಮ್ಮ ತಂದೆ ತಾಯಿಗೆ ಬೆಡ್ ಸಿಗಲ್ಲ ಎಂಬ ವಿಷಯ ನನಗೆ ತಿಳಿಯಿತ್ತು.

FotoJet 7 25

ನನ್ನ ತಂದೆಗೆ 80 ವರ್ಷ ವಯಸ್ಸು, ನನ್ನ ತಾಯಿಗೆ 76 ವರ್ಷ. ಈಗಾಗಲೇ ಅವರ ಆರೋಗ್ಯದ ಸ್ಥಿತಿ ಹದಗೆಟ್ಟಿದೆ. ಯೋಚಿಸಿಕೊಂಡು ಕೋರುವ ಸಮಯ ಇದಲ್ಲ ಎಂದು ತಿಳಿದ ನಾನು ನನ್ನ ಆತ್ಮೀಯ ವೈದ್ಯ ವಿದ್ಯಾನಂದರನ್ನು ಸಂಪರ್ಕಿಸಿದೆ. ಆಗ ಅವರು ಬೆಡ್‍ಗೆ ಕಾಯದೆ ಟ್ರೀಟ್ಮೆಂಟ್ ಆರಂಭಿಸಲು ಹೇಳಿದರು. ಅಂದು ಡಾಕ್ಟರ್ ಜೊತೆ ಸಾಯಂಕಾಲ ಮಾತನಾಡಿ ನಂತರ ರಾತ್ರಿ ಒಬ್ಬನೇ ಯೋಚಿಸುತ್ತಾ ಕುಳಿತಾಗ ‘ನಿಮ್ಮ ತಂದೆ-ತಾಯಿಗೆ ಬಂದಿರುವ ಕೊರೊನಾ ಅವರನ್ನು ಆರೈಕೆ ಮಾಡುವ ಸಮಯದಲ್ಲಿ ನಿನಗೂ ಬಂದು ಸಾಯುವೆ ನೆಂಬ ಭಯವೇ’ ಎಂಬ ಪ್ರಶ್ನೆಯನ್ನು ನನ್ನ ಆತ್ಮಸಾಕ್ಷಿ ನನ್ನ ಮುಂದಿಟ್ಟಿತು. ಮರುಕ್ಷಣದಲ್ಲೇ ನನ್ನ ಆತ್ಮಸಾಕ್ಷಿಗೆ ನನ್ನ ಉತ್ತರ ನಗುವಾಗಿತ್ತು. ಅವರೇ ನೀಡಿದ ಈ ಜನ್ಮ ಅವರ ಆರೈಕೆ ಸಂದರ್ಭದಲ್ಲಿ ಹೋದರೆ ಅದಕ್ಕಿಂತ ಅದೃಷ್ಟ ಇನ್ನೇನಿದೆ ಎಂದುಕೊಂಡು. ಸುಮಾರು 15 ಗಂಟೆಗಳ ನಂತರ ಅಂದರೆ ಮರುದಿನ ಬೆಳಗ್ಗೆ 9:00ರ ಮುಂಜಾನೆಗೆ ಒಂದು ಆಟೋದಲ್ಲಿ ಆಕ್ಸಿಜನ್, ಮೆಡಿಸಿನ್ ಜತೆ ಈಶ್ವರ್ ಎಂಬ ಆರೋಗ್ಯ ಶುಶ್ರೂಷಕ ಬಂದು ಇಳಿದರು.

FotoJet 9 21

 

ನಾನು ನನ್ನ ಮಗ ಮತ್ತು ಕೀರ್ತಿ ಮೂರು ಜನ ನಮ್ಮ ತಂದೆ ತಾಯಿಯನ್ನು ಕರೆದುಕೊಂಡು ಹೋಗಲು ಬಂದಿದ್ದ ಕ್ರೂರಿ ಕೊರೊನಾ ಜೊತೆ ಸೆಣೆಸಾಡಲು ನಿಂತೆವು. ಮಾನಸಿಕವಾಗಿ ನಾನು ನಂಬಿದ ಗುರುಗಳು ನನ್ನ ಜತೆಯಲ್ಲಿದ್ದರೆ, ದೈಹಿಕವಾಗಿ ನಮ್ಮ ಜೊತೆ ಆರೋಗ್ಯ ಶುಶ್ರೂಷಕ ಈಶ್ವರ್ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಅರ್ಧಗಂಟೆ ಬಂದು ಹೋಗುತ್ತಿದ್ದರು. ನಮ್ಮ ತಂದೆ ಈಗಾಗಲೇ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅದರಲ್ಲಿ ಈ ಕೊರೊನಾ ಅವರನ್ನು ತುಂಬಾ ಬಳಲುವಂತೆ ಮಾಡಿತು. ನಮ್ಮ ತಾಯಿ ಎರಡು ಮೂರು ದಿನದಲ್ಲಿ ಚಿಕಿತ್ಸೆಗೆ ಸ್ಪಂದಿಸಲು ಪ್ರಾರಂಭಿಸಿದರು. ಈ ನಡುವೆ ಪ್ರತಿ ದಿನ ವೀಡಿಯೋ ಕಾಲ್ ಮೂಲಕ ವೈದ್ಯರು ಚಿಕಿತ್ಸೆಯನ್ನು ಹೇಳುತ್ತಿದ್ದರು ಮತ್ತು ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅದರ ಜತೆಗೆ ಪ್ರತಿ ದಿನ ಬರುತ್ತಿದ್ದ ಈಶ್ವರ ನಮ್ಮಗಳ ಪಾಲಿಗೆ ನಿಜವಾದ ಈಶ್ವರನೆ ಆದ. ನಮ್ಮ ತಂದೆಯ ಆರೋಗ್ಯ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸಲು ಪ್ರಾರಂಭಿಸಿತು. ಯಾವ ಮಟ್ಟಿಗೆ ಎಂದರೆ ನನ್ನ ಆತ್ಮೀಯರು ಫೋನ್ ಮಾಡಿದಾಗ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋಗುತ್ತಾರೆ ಏನು ಎಂಬ ಅನುಮಾನ ಕಾಡುತ್ತಿದೆ ಎಂದು ಸ್ವತಃ ನಾನೇ ಹೇಳಿದ್ದುಂಟು. ಆ ಕಾರಣಕ್ಕೆ ಅವರ ಜತೆ ಕಳೆಯುತ್ತಿರುವ ಕೊನೆಯ ಕ್ಷಣಗಳು ನೆನಪಿನಲ್ಲಿ ಉಳಿಯಲಿ ಎಂಬ ಉದ್ದೇಶದಿಂದ ವಿಡಿಯೋ ಮಾಡಲು ಪ್ರಾರಂಭಿಸಿದೆವು. ಇದರ ಮಧ್ಯೆ ನಾನು ಭರವಸೆಯನ್ನು ಮಾತ್ರ ಕಳೆದುಕೊಂಡಿರಲಿಲ್ಲ.

ಮೊದಲು ನನ್ನ ತಾಯಿ ಚೇತರಿಸಿಕೊಂಡು ಕೊರೋನಾದಿಂದ ಸಂಪೂರ್ಣವಾಗಿ ಗುಣಮುಖರಾದರು. ‘ ನೀನು ಹೆದರಬೇಡ. ಚೇತರಿಸಿಕೊಂಡ ನಂತರ ನನ್ನಮ್ಮ ನನ್ನನ್ನು ಕರೆದು ‘ ನಮಗೆ ಯಾರಿಗೂ ಸಿಗದ ಯೋಗ ನಿನಗೆ ಸಿಕ್ಕಿದೆ. ನಿನ್ನನ್ನು ಪ್ರೀತಿಸುವವರು ಇರುವವರೆಗೂ, ಅವರ ಆಶೀರ್ವಾದ, ಆರೈಕೆ ನಿನ್ನನ್ನು ಕಾಯುತ್ತದೆ’ ಎಂದು ಹೇಳಿದರು. ನಿಜವಾಗಲೂ ನಮ್ಮ ತಾಯಿ ಹೇಳಿದಂತೆ ಆಯಿತು. ನಿಮ್ಮಗಳ ಆಶೀರ್ವಾದ ಮತ್ತು ದೈವ ಬಲದಿಂದ ನಮ್ಮ ಮನೆಯಲ್ಲಿ ಚಮತ್ಕಾರ ನಡೆಯಿತು. ನಮ್ಮ ತಂದೆ ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಾ ಬಂದರು. ನಾನು ನಿಮ್ಮೆಲ್ಲರ ಬಳಿ ಕೇಳಿಕೊಳ್ಳುವುದಿಷ್ಟೆ. ಕೊರೋನಾ ಬಂತು ಎಂದು ಧೃತಿಗೆಡಬೇಡಿ, ತಂದೆ-ತಾಯಿಯರನ್ನು ಕೈಬಿಡಬೇಡಿ. ನನ್ನ ತಂದೆ-ತಾಯಿ ಬದುಕಿದ್ದಾರೆ ಎಂಬ ಖುಷಿಯಿಂದ ಈ ಘಟನೆಯನ್ನು ಹಂಚಿಕೊಳ್ಳುತ್ತಿಲ್ಲ, ಎಷ್ಟೋ ಜನ ನನ್ನ ರೀತಿ ಸೇವೆ ಮಾಡಿ ತಂದೆತಾಯಿಯನ್ನು ಕಳೆದುಕೊಂಡವರಿದ್ದಾರೆ. ಅವರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಆದರೆ ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ. ಸಕಾರಾತ್ಮಕವಾಗಿ ಯೋಚಿಸಿ ಈ ಕೊರೊನಾ ವಿರುದ್ಧ ಗೆಲ್ಲೋಣ. ಜತೆಗೆ ನನ್ನ ಜೀವನದಲ್ಲಿ ನಡೆದ ಈ ಘಟನೆ ಕೆಲವರಿಗೆ ಸ್ಪೂರ್ತಿಯಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಹಂಚಿಕೊಂಡಿರುವುದಾಗಿ ತಿಳಿಸಿದ್ದಾರೆ.

TAGGED:bengaluruCoronafathermotherPublic TVsandalwoodಕೊರೊನಾತಂದೆತಾಯಿಪಬ್ಲಿಕ್ ಟಿವಿ Vijayಬೆಂಗಳೂರುವಿಜಯ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
41 minutes ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
1 hour ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
2 hours ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 hours ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
2 hours ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?