ಬಳ್ಳಾರಿ: ಸರ್ಕಾರದ ಅಸ್ತಿತ್ವದ ಬಗ್ಗೆ ಅರಣ್ಯ ಸಚಿವ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಆನಂದ್ ಸಿಂಗ್ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯ ಹೊಸಪೇಟೆ ತಾಲೂಕಿನ ಕಮಾಲಾಪುರದ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿ ನಡೆದ 66ನೇ ವನ್ಯ ಜೀವಿ ಸಂರಕ್ಷಣಾ ಸಪ್ತಾಹದ ಅಂಗವಾಗಿ ಆಯೋಜನೆ ಮಾಡಿದ್ದ ಕಾರ್ಯಕ್ರಮ ಹೇಳಿಕೆ ನೀಡಿರುವ ಅವರು, ಈ ಸರ್ಕಾರ ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಗೊತ್ತಿಲ್ಲ ಎಂದರು.
- Advertisement 2
- Advertisement 3
ನಂತರ ಇದೇ ಹೇಳಿಕೆಗೆ ಸ್ಪಷ್ಟನೆ ನೀಡಿದ ಆನಂದ್ ಸಿಂಗ್ ಅವರು, ನನ್ನ ಹೇಳಿಕೆಯನ್ನು ಅನ್ಯತಾ ಭಾವಿಸಬೇಡಿ ಎಂದು ಸಹ ಸ್ಪಷ್ಟಪಡಿಸಿದ್ದಾರೆ. ಆನಂದ್ ಸಿಂಗ್ ಈ ರೀತಿ ಏಕಾಏಕಿ ಹೇಳಲು ಕಾರಣವೇನು? ಸರ್ಕಾರದಲ್ಲಿ ಅಭದ್ರತೆ ಕಾಡುತ್ತಿದೆಯಾ ಅಥವಾ ಈ ಸ್ಫೋಟಕ ಹೇಳಿಕೆಯಿಂದ ಇದೆ ರಾಜಕೀಯ ತಂತ್ರಗಾರಿಕೆ ಇದೆಯಾ ಎನ್ನುವ ಅನುಮಾನಗಳು ಕಾಡಲಾರಂಭಿಸಿವೆ. ಜೊತೆಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಆನಂದ್ ಸಿಂಗ್ ಅವರನ್ನು ಕೈ ಬಿಡುವ ಸಾಧ್ಯತೆಯಿದ್ಯಾ ಎಂಬ ನಾನಾ ಚರ್ಚೆಗಳಿಗೆ ಅವರ ಹೇಳಿಕೆ ಕಾರಣವಾಗಿದೆ.
- Advertisement 4
ಈ ಹಿಂದೆ ಸಮ್ಮಿಶ್ರ ಸರ್ಕಾರ ಉರುಳಲು ಸಚಿವ ಆನಂದ್ ಸಿಂಗ್ ಮೊದಲಿಗರಾಗಿದ್ದರು. ವಿಜಯನಗರ ಜಿಲ್ಲೆ ಮತ್ತು ಜಿಂದಾಲ್ ಭೂಮಿ ಪರಭಾರೆ ನೆಪವೊಡ್ಡಿ ಸಮ್ಮಿಶ್ರ ಸರ್ಕಾರ ಉರಳಲು ಮೊದಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರು ರಾಜೀನಾಮೆ ನೀಡಿದ ಬಳಿಕ ಒಬ್ಬೊಬ್ಬರಾಗಿ 14 ಜನ ಶಾಸಕರು ಕೂಡ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಮತ್ತೆ ಅವರೇ ಸರ್ಕಾರ ಅಸ್ಥಿರತೆಯ ಬಗ್ಗೆ ಮಾತನಾಡಿರುವುದು ನಾನಾ ಚರ್ಚೆಗಳಿಗೆ ಕಾರಣವಾಗಿದೆ.