ಉಡುಪಿ ಲಾಕ್‍ಡೌನ್ ಆಗಲ್ಲ, ಗಡಿ ಸೀಲ್ ಮಾಡುವ ಚಿಂತನೆ ಇದೆ: ಡಿಸಿ ಜಿ.ಜಗದೀಶ್

Public TV
1 Min Read
UDP Dc 2

ಉಡುಪಿ: ಜಿಲ್ಲೆಯನ್ನು ಲಾಕ್‍ಡೌನ್ ಮಾಡುವ ಸಾಧ್ಯತೆ ಇಲ್ಲ. ನಾಳೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ಕರೆದು ಲಾಕ್‍ಡೌನ್ ಕುರಿತು ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಗೆ ಮುಕ್ತ ಪ್ರವೇಶ ಇರುವುದಿಲ್ಲ. ಜಿಲ್ಲೆಯ ಗಡಿಯನ್ನು ಸೀಲ್‍ಡೌನ್ ಮಾಡಿ, ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸುತ್ತೇವೆ. ಈ ನಿರ್ಧಾರಕ್ಕೆ ಮೊದಲು ಉಡುಪಿ ಜಿಲ್ಲೆಯಿಂದ ಹೊರಗಡೆ ಹೋಗಲು ಹಾಗೂ ಜಿಲ್ಲೆಯ ಒಳಗೆ ಬರಲು ಸಮಯ ನಿಗದಿ ಮಾಡಲಾಗುತ್ತದೆ ಎಂದಿದ್ದಾರೆ.

UDP 1 4

ಕೋವಿಡ್-19 ಸೋಂಕಿನ ನಿಯಂತ್ರಣಕ್ಕಾಗಿ ಕೈಗೊಳ್ಳುವ ಎಲ್ಲ ನಿಯಮಗಳನ್ನು ಜನ ಪ್ರತಿನಿಧಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ. ಸಾರ್ವಜನಿಕರ ಓಡಾಟದ ವಾಹನಗಳನ್ನು ತಡೆಯುವ ಅಥವಾ ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಸುದ್ದಿಗಾರರಿಗೆ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *