ಉತ್ತರಾಖಂಡ್ ಹಿಮಪ್ರಳಯ – ಸಾವಿನ ಸಂಖ್ಯೆ 62ಕ್ಕೆ ಏರಿಕೆ, 142 ಜನರು ನಾಪತ್ತೆ

Public TV
1 Min Read
Uttarakhand floods

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿತದಿಂದ ಉಂಟಾದ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.

Uttarakhand 1

ಹಿಮ ಪ್ರಳಯಕ್ಕೆ ತುತ್ತಾದ ಚಮೋಲಿ ತಪೋವನ ಸಿಲುಕಿಕೊಂಡಿರುವವರ ಪತ್ತೆ ಕಾರ್ಯ 13ನೇ ದಿನವೂ ಮುಂದುವರಿದಿದ್ದು, ಗುರುವಾರ ಶವವೊಂದನ್ನು ಹೊರತೆಗೆಯಲಾಗಿದೆ.

ತಪೋವನವಿಷ್ಣುಗಡ್ ಯೋಜನೆಯ ಬಳಿ ಗುರುವಾರ ರಾತ್ರಿ ಶವ ಪತ್ತೆಯಾಗಿದೆ. ಈವರೆಗೆ ಒಟ್ಟು 62 ಶವಗಳು ಪತ್ತೆಯಾಗಿವೆ. 142 ಜನರು ನಾಪತ್ತೆಯಾಗಿದ್ದಾರೆ. ಇಲ್ಲಿಯವರೆಗೆ ಯೋಜನೆಯ ಸುರಂಗದಲ್ಲಿ 13 ಶವಗಳು ಪತ್ತೆಯಾಗಿವೆ. ಇದನ್ನು ಹೊರತುಪಡಿಸಿ ಹಲವೆಡೆ 28 ಕೈಕಾಲುಗಳು ಸಿಕ್ಕಿವೆ.

Uttarakhand 3

ಪತ್ತೆಯಾಗಿರುವ 62 ಶವಗಳಲ್ಲಿ 33 ಜನರನ್ನು ಗುರುತಿಸಲಾಗಿದೆ. ಗುರುತಿಸಲಾಗದವರ ಡಿಎನ್‍ಎಯನ್ನು ಸಂರಕ್ಷಣೆ ಮಾಡಲಾಗಿದೆ ಎಂದು ಚಮೋಲಿ ಜಿಲ್ಲಾ ಪೊಲೀಸರು ಇಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *