ಡೆಹ್ರಾಡೂನ್: ಹಿಮ ಪ್ರಳಯಕ್ಕೆ ತುತ್ತಾದ ಉತ್ತರಾಖಂಡ್ನ ಚಮೋಲಿ ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ರಕ್ಷಣಾ ಕಾರ್ಯ ಮುಂದುವರಿದಿದೆ.
ತಪೋವನ ಜಲವಿದ್ಯುತ್ ಕೇಂದ್ರದ ಸುರಂಗದಲ್ಲಿ ತುಂಬಿದ ಕೆಸರನ್ನು ತೆರವು ಮಾಡಲಾಗಿದ್ದು, ಈ ವೇಳೆ ಹಲವು ಶವ ಪತ್ತೆಯಾಗಿವೆ. ಇದುವರೆಗೂ ಮೃತರ ಸಂಖ್ಯೆ 31ಕ್ಕೆ ಹೆಚ್ಚಳವಾಗಿದೆ. ಸರಿಸುಮಾರು 30 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ 160 ಮಂದಿ ಪತ್ತೆಯಾಗಬೇಕಿದೆ.
ಹಿಮಸುನಾಮಿಗೆ ತುತ್ತಾದ ಗ್ರಾಮಗಳಲ್ಲಿಯೂ ರಕ್ಷಣಾ ಕಾರ್ಯಚರಣೆಗಳು ಭರದಿಂದ ನಡೆಯುತ್ತಿವೆ. ಹೆಲಿಕಾಪ್ಟರ್ ಮೂಲಕ ಆಹಾರ ವಿತರಣೆ ಮುಂದುವರಿದಿದೆ. ಈ ಮಧ್ಯೆ ಹಿಮಪ್ರಳಯಕ್ಕೆ ಮುನ್ನ ಹಾಗೂ ಹಿಮಪ್ರಳಯದ ನಂತರ ಎಂಬ ಎರಡು ಸ್ಯಾಟಲೈಟ್ ಇಮೇಜ್ಗಳನ್ನು ಪ್ಲಾನೆಟ್ ಲ್ಯಾಬ್ಸ್ ಇಂಕ್ ರಿಲೀಸ್ ಮಾಡಿದೆ. ಇದನ್ನೂ ಓದಿ: ನಂದಾದೇವಿ ಹಿಮಪರ್ವತ ಕುಸಿತ, ಕೊಚ್ಚಿ ಹೋಯ್ತು ಸೇತುವೆ – ನಡೆದಿದ್ದು ಏನು?
ಹಿಮ ಪ್ರಳಯಕ್ಕೆ ಮುನ್ನ ಅಂದ್ರೆ ಫೆಬ್ರವರಿ 6ರಂದು ನಿರ್ಗಲ್ಲುಗಳು ಇರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ. ಫೆಬ್ರವರಿ 7ರಂದು ನಿರ್ಗಲ್ಲುಗಳು ಮುರಿದು ಬಿದ್ದಿರೋದು ಸ್ಯಾಟಲೈಟ್ ಚಿತ್ರಗಳಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತದೆ. 1970ರಲ್ಲಿ ನಡೆದಿದ್ದ ಚಿಪ್ಕೋ ಚಳಿವಳಿಯ ಕೇಂದ್ರಬಿಂದು ರೇಣಿ ಗ್ರಾಮದ ಸುತ್ತಮುತ್ತಲೇ ಈ ದುರಂತ ನಡೆದಿರೋದು ವಿಪರ್ಯಾಸ. ಇದನ್ನೂ ಓದಿ: ಹಿಮ ಪ್ರಳಯ- ಒಂದು ಫೋನ್ ಕರೆಯಿಂದ ಉಳಿಯಿತು 12 ಜನರ ಜೀವ