Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಳೇ ಇಲ್ಲ – ಜೋಲಿಯೇ ಇಲ್ಲಿನವರಿಗೆ ಅಂಬುಲೆನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಳೇ ಇಲ್ಲ – ಜೋಲಿಯೇ ಇಲ್ಲಿನವರಿಗೆ ಅಂಬುಲೆನ್ಸ್

Districts

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಳೇ ಇಲ್ಲ – ಜೋಲಿಯೇ ಇಲ್ಲಿನವರಿಗೆ ಅಂಬುಲೆನ್ಸ್

Public TV
Last updated: February 13, 2021 7:37 am
Public TV
Share
2 Min Read
KWR 5
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೆಸರಿಗೆ ಮಾತ್ರ ಕರ್ನಾಟಕದ ಪ್ರವಾಸಿಗರ ಸ್ವರ್ಗ. ಆದರೆ ಇಲ್ಲಿನ ಜನರದ್ದು ಮಾತ್ರ ನಿತ್ಯ ನರಕಯಾತನೆ. ಪ್ರತೀನಿತ್ಯ ಈ ಜಿಲ್ಲೆಯ ಈ ಭಾಗದಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಬೆಳಕಿಗೆ ಬರ್ತಾನೇ ಇರುತ್ತವೆ. ಆದರೆ ಇಲ್ಲಿನ ಶಾಸಕರಾಗಲೀ, ಸಂಬಂಧಪಟ್ಟ ಅಧಿಕಾರಿಗಳಾಗಲೀ ಕ್ಯಾರೇ ಅಂತಿಲ್ಲ.

KWR 7

ಹೌದು. ಒಂದೆಡೆ ಜೋಳಿಗೆಯಲ್ಲಿ ರೋಗಿಗಳನ್ನು ಹೊತ್ತು ಆಸ್ಪತ್ರೆಗೆ ಸಾಗಿಸುತ್ತಿರುವ ಗ್ರಾಮಸ್ಥರು, ಇನ್ನೊಂದೆಡೆ ಕೆಟ್ಟು ನಿಂತ ಅಂಬುಲೆನ್ಸ್‍ಗಳು, ಇದು ಉತ್ತರ ಕನ್ನಡ ಜಿಲ್ಲೆಯ ಗುಡ್ಡಳ್ಳಿ ಎಂಬ ಗ್ರಾಮದ ಶೋಚನೀಯ ಸ್ಥಿತಿ. ಕೇವಲ ಇದೊಂದೇ ಗ್ರಾಮ ಇಲ್ಲ. ಕಾರವಾರ, ಜೋಯಿಡಾ, ರಾಮನಗರ, ಶಿರಸಿ, ಸಿದ್ದಾಪುರ ಹಾಗೂ ಕುಮಟಾ ಭಾಗದ ಗಟ್ಟ ಪ್ರದೇಶದಲ್ಲಿ ವಾಸಮಾಡುವವರ ಪರಿಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ಸದ್ಯ ಗುಡ್ಡಳ್ಳಿ ಗ್ರಾಮದ ಜನರು ಮಾತ್ರ ಜೀವ ಕೈಯಲ್ಲಿ ಹಿಡಿದೇ ಜೀವನ ಸಾಗಿಸ್ತಿದ್ದಾರೆ. ಯಾಕಂದ್ರೆ ಇಲ್ಲಿ ಸಾರಿಗೆ ವ್ಯವಸ್ಥೆ ಆಗಲಿ, ರಸ್ತೆ ಸೌಕರ್ಯಗಳಾಗಲೀ ಏನೂ ಇಲ್ಲ. ಆಸ್ಪತ್ರೆಗೆ ರೋಗಿಗಳನ್ನು ಕರ್ಕೊಂಡು ಹೋಗ್ಬೇಕಂದ್ರೂ ಜೋಳಿಗೆಯೇ ಗತಿ. ಅಂದಹಾಗೆ ಹಳ್ಳಿ ಮಾತ್ರ ಅಲ್ಲ, ನಗರಪ್ರದೇಶಗಳು ಕೂಡ ಮೂಲಸೌಲಭ್ಯದಿಂದ ವಂಚಿತವಾಗಿವೆ.

KWR 4

ಇಡೀ ಜಿಲ್ಲೆಯಲ್ಲಿ ಪ್ರತಿ ವರ್ಷ ಒಂದೂವರೆ ಸಾವಿರಕ್ಕೂ ಹೆಚ್ಚು ಜನ ಅಪಘಾತಕ್ಕೆ ಒಳಗಾಗುತ್ತಿದ್ದಾರೆ. ಇದರಲ್ಲಿ ಅಂಬುಲೆನ್ಸ್ ಹಾಗೂ ತುರ್ತು ಚಿಕಿತ್ಸೆ ಸಿಗದೇ ಸತ್ತವರ ಸಂಖ್ಯೆ ಪ್ರತಿ ವರ್ಷ 200ರ ಗಡಿ ದಾಟುತ್ತದೆ. ಸರ್ಕಾರಿ ದಾಖಲೆ ಪ್ರಕಾರ ಕಳೆದ ಐದು ವರ್ಷದಲ್ಲಿ 1249 ಜನ ಸಾವು ಕಂಡಿದ್ದಾರೆ.

KWR 3

ಕಳೆದ 4 ವರ್ಷದಿಂದ ಜಿಲ್ಲೆಯ ಜನ ಸುಸಜ್ಜಿತ ನುರಿತ ವೈದ್ಯರಿರುವ ಆಸ್ಪತ್ರೆಗಾಗಿ ಬೇಡಿಕೆ ಇಟ್ಟಿದ್ರು ಕೂಡ ಸರ್ಕಾರ ಮಾತ್ರ ಆಶ್ವಾಸನೆಯಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡ್ತಿದೆ. ಆಸ್ಪತ್ರೆಗಾಗಿ ಹೋರಾಟದ ಜೊತೆಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಹ್ಯಾಷ್ ಟಾಗ್ ಅಭಿಯಾನ ಚಾಲ್ತಿಯಲ್ಲಿದೆ. ಜಿಲ್ಲೆಯ ಸಮಸ್ಯೆಯನ್ನು ಖುದ್ದು ಕಿಚ್ಚ ಸುದೀಪ್, ಡಾಲಿ ಧನಂಜಯ್ ಟ್ಟೀಟ್ ಮಾಡಿ ಜಿಲ್ಲೆಯ ಜನರ ಹೋರಾಟಕ್ಕೆ ಬೆಂಬಲ ನೀಡಿದ್ರು.

KWR 1

ಖುದ್ದು ಸಿಎಂ ಯಡಿಯೂರಪ್ಪ ಅವರೇ, ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಆಸ್ಪತ್ರೆ ಪ್ರಾರಂಭಿಸಲು 160 ಕೋಟಿ ರೂ. ಹಣ ಮಂಜೂರು ಮಾಡುವುದಾಗಿ ಹೇಳಿದ್ದರು. ಆದರೆ ಈವರೆಗೂ ಇವೆಲ್ಲಾ ನೆನಗುದಿಗೆ ಬಿದ್ದಿದೆ. ಅತ್ತ ಕಾರವಾರದ ಶಾಸಕಿ ರೂಪಾಲಿ ನಾಯ್ಕರವರು ಶೀಘ್ರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಾಗಿ ಹೇಳಿದ್ದೂ ಕೇವಲ ಭ್ರಮೆಯಾಗಿ ಉಳಿದಿದೆ.

KWR 6

ಸದ್ಯ ಜಿಲ್ಲೆಯಲ್ಲಿ ಅಂಬುಲೆನ್ಸ್‍ಗಳ ಕೊರತೆಯಿದೆ. ಜಿಲ್ಲೆಯಲ್ಲಿ ವೆಂಟಿಲೇಷನ್ ವ್ಯವಸ್ಥೆ ಇರುವ ಅಂಬುಲೆನ್ಸ್‍ಗಳು ಎರಡು ಮಾತ್ರ. ಕಳೆದ ಒಂದು ತಿಂಗಳ ಹಿಂದೆ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ ರವರ ಕಾರು ಅಪಘಾತವಾಗಿ ಅವರ ಪತ್ನಿ ವಿಜಯ್ ಶ್ರೀಪಾದನಾಯ್ಕರವರಿಗೆ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದರು. ಏನೇ ಎಮರ್ಜೆನ್ಸಿ ಇದ್ರೂ ಗೋವಾ, ಮಣಿಪಾಲ್, ಹುಬ್ಬಳ್ಳಿ ನಗರದ ಆಸ್ಪತ್ರೆಯನ್ನು ಅವಲಂಭಿಸಬೇಕಿದೆ. ಹೀಗಾಗಿ ಪ್ರವಾಸಿಗರ ಅಚ್ಚುಮೆಚ್ಚಿನ ಸ್ಥಳವಾಗಿರುವ ಈ ಜಿಲ್ಲೆ ಮೂಲಭೂತ ಸೌಕರ್ಯವಿಲ್ಲದೇ ಜವರಾಯನ ತವರಾಗಿದೆ. ಇನ್ನಾದ್ರೂ ಸರ್ಕಾರ ಎಚ್ಚೆತ್ತು ಜಿಲ್ಲೆಗೊಂದು ಸುಸಜ್ಜಿತ ಎಮರ್ಜನ್ಸಿ ಆಸ್ಪತ್ರೆ ನಿರ್ಮಿಸಿ ಜನರ ಜೀವ ಉಳಿಸೋ ಕಾರ್ಯಕ್ಕೆ ಮುಂದಾಗಬೇಕಿದೆ.

KWR

TAGGED:ambulancekarwarPublic TVಅಂಬುಲೆನ್ಸ್ಕಾರವಾರಜೋಲಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
26 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
53 minutes ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
1 hour ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
1 hour ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
2 hours ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?