ಕಾರವಾರ: ಕಳೆದ ವರ್ಷ ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವರ ಸಾವಿಗೆ ಕಾರಣವಾಗಿದ್ದ ಮಂಗನಕಾಯಿಲೆ, ಇದೀಗ ಮತ್ತೆ ಜಿಲ್ಲೆಯಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.
- Advertisement 2
ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ ಸಿದ್ದಾಪುರ ತಾಲೂಕಿನ ಕುಳಿಬೀಡಿನ 51 ವರ್ಷದ ಮಹಿಳೆಯಲ್ಲಿ ಜ್ವರ ಹಾಗೂ ಮೈ ಕೈ ನೋವು ಕಾಣಿಸಿಕೊಂಡಿದ್ದು, ರಕ್ತ ಪರೀಕ್ಷೆ ನಂತರ ಮಂಗನಕಾಯಿಲೆ ಇರುವುದು ದೃಢಪಟ್ಟಿದೆ. ಇದನ್ನು ಓದಿ. ಏನಿದು ಮಂಗನ ಕಾಯಿಲೆ-ಹೇಗೆ ಬರುತ್ತೆ..?
- Advertisement 3
- Advertisement 4
ಸೋಂಕಿತೆಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಸದ್ಯ ಈ ಭಾಗದಲ್ಲಿ ಮಂಗಗಳು ಸತ್ತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ. ಆದರೂ ಈ ವರ್ಷ ಮರಳಿ ಮಂಗನಕಾಯಿಲೆ ಬಂದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ವರ್ಷ ಸಿದ್ದಾಪುರದ ಬಾಳಗೋಡು, ಇಟಗಿ, ಹೊನ್ನೆಗಟಗಿ, ತ್ಯಾಗಲಿ, ಮನಮನೆ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡು 9 ಜನ ಸಾವನ್ನಪ್ಪಿದ್ದರು.