Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕದಲ್ಲಿ ಮಹಾ ಪ್ರವಾಹ – ರಸ್ತೆ, ಸೇತುವೆ, ಮನೆ, ದೇವಸ್ಥಾನ ಮುಳುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಉತ್ತರ ಕರ್ನಾಟಕದಲ್ಲಿ ಮಹಾ ಪ್ರವಾಹ – ರಸ್ತೆ, ಸೇತುವೆ, ಮನೆ, ದೇವಸ್ಥಾನ ಮುಳುಗಡೆ

Bagalkot

ಉತ್ತರ ಕರ್ನಾಟಕದಲ್ಲಿ ಮಹಾ ಪ್ರವಾಹ – ರಸ್ತೆ, ಸೇತುವೆ, ಮನೆ, ದೇವಸ್ಥಾನ ಮುಳುಗಡೆ

Public TV
Last updated: August 19, 2020 8:06 am
Public TV
Share
2 Min Read
RAIN 3
SHARE

ಕಾರವಾರ/ಬಾಗಲಕೋಟೆ: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಒಂದೆಡೆಯಾದರೆ, ಮಹಾರಾಷ್ಟ್ರದಲ್ಲಾಗುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ನೀರು ಕರ್ನಾಟಕಕ್ಕೆ ಹರಿದುಬರುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ.

ಕೃಷ್ಣೆ, ಮಲಪ್ರಭಾ, ಘಟಪ್ರಭಾ ನದಿಗಳ ಅಬ್ಬರ ಏರಿದೆ. ಕೊಯ್ನಾ ಜಲಾಶಯದಿಂದ ನೀರು ಬಿಡಲಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರಾ, ಕೊಲ್ಹಾಪುರದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದ್ದು, ಆಗಸ್ಟ್ 22ರವರೆಗೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕದಲ್ಲಿರುವ ಆಲಮಟ್ಟಿ, ನಾರಾಯಣಪುರ, ತುಂಗಭದ್ರಾ ಡ್ಯಾಂನಿಂದಲೂ ಅಪಾರ ಪ್ರಮಾಣದಲ್ಲಿ ನೀರನ್ನ ಹೊರಬಿಡಲಾಗುತ್ತಿದೆ.

RAIN NK 9 medium

ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಗದಗ, ಧಾರವಾಡ, ಬಳ್ಳಾರಿಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣ ಆಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ. ಮನೆ, ಜಮೀನುಗಳಿಗೆ ನೀರು ನುಗ್ಗಿದೆ. ಪ್ರವಾಹದಲ್ಲಿ ಸಿಲುಕಿದ್ದವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇವತ್ತು ಸಾಧಾರಣ ಮಳೆ ಆಗಲಿದೆ.

RAIN NK 8 medium

ಕೃಷ್ಣೆಯ ರುದ್ರನರ್ತನಕ್ಕೆ ಕುಂದಾನಗರಿ ಬೆಳಗಾವಿ ನಲುಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಘಟಪ್ರಭೆ, ಮಲಪ್ರಭೆಯ ಅಬ್ಬರ ಜೋರಾಗಿದೆ. ಮಾರ್ಕಂಡೇಯ, ಹಿರಣ್ಯಕೇಶಿ ನದಿಯಲ್ಲಿ ಪ್ರವಾಹದಿಂದ ಗೋಕಾಕ್ ನಗರ ಮುಳುಗಿದೆ. ಹೊಲ ಗದ್ದೆಗಳು, ರಸ್ತೆ-ಸೇತುವೆಗಳು ಜಲಮಯವಾಗಿವೆ. ಗೋಕಾಕ್‍ನ ಹಳೆಯ ದನದ ಪೇಟೆ ಬಳಿ ನೂರಕ್ಕೂ ಅಧಿಕ ಮನೆಗಳು ಜಲಾವೃತವಾಗಿವೆ. ಘಟಪ್ರಭಾ ನದಿಗೆ 79,967 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಗೋಕಾಕ್‍ನ ಮಹಾಲಿಂಗೇಶ್ವರ ನಗರಕ್ಕೆ ನದಿ ನೀರು ನುಗ್ಗಿದ್ದು, ಮನೆಗಳು, ಅಂಗಡಿ ಮುಂಗಟ್ಟು ಮುಳುಗಡೆಯಾಗಿದೆ.

RAIN NK 4 medium

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹಕ್ಕೆ ವೀರಶೈವ ಲಿಂಗಾಯತ ಶಕ್ತಿಪೀಠ ಎಂದು ಕರೆಯಲಾಗಿರುವ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರ ಸೇತುವೆ ಜಲಾವೃತವಾಗಿದೆ. ಗೋವಿನಕೊಪ್ಪ, ನೆಲ್ಲಿಗೆ ಸಂಕೇಶ್ವರ, ಬಾಚಿನಗುಡ್ಡ ಮಂಗಳೂರು, ಶಿರಬಡಗಿ ಗೋನಾಳ ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ಘಟಪ್ರಭೆ ಅಬ್ಬರಕ್ಕೆ ಮುಧೋಳ ತಾಲೂಕಿನ ಕೆಲ ಗ್ರಾಮಗಳಲ್ಲಿ ಪ್ರವಾಹ ಆತಂಕ ಎದುರಾಗಿದೆ. 80 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿದು ಬರುತ್ತಿರುವುದರಿಂದ ಘಟಪ್ರಭೆಗೆ ಅಡ್ಡಲಾಗಿ ಕಟ್ಟಿರುವ ಮುಧೋಳ ನಗರದ ಯಾದವಾಡ ಸೇತುವೆ ಮುಳುಗಡೆ ಆಗಿದೆ. ರೂಗಿ, ಒಂಟಗೋಡಿ, ಚನಾಳ್, ರಂಜನಗಿ ಮತ್ತು ಯಾದವಾಡ್ ಸೇರಿದಂತೆ 15 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಬಾದಾಮಿ-ಗದಗ ನಡುವಿನ ಚೊಳಚಗುಡ್ಡ ರಸ್ತೆಯನ್ನ ಪೊಲೀಸರು ಮುಳ್ಳಿನ ರಾಶಿಯನ್ನ ಹಾಕಿ ಬಂದ್ ಮಾಡಿದ್ದಾರೆ.

RAIN NK 2 medium

ಇತ್ತ ಗದಗ ಜಿಲ್ಲೆ ನರಗುಂದ ತಾಲೂಕಿನ ಅನೇಕ ಗ್ರಾಮಗಳಲ್ಲಿ ಪ್ರವಾಹ ಸೃಷ್ಟಿ ಆಗಿದೆ. ಲಖಮಾಪುರ, ಕೊಣ್ಣೂರ, ಕುವಿನಕೊಪ್ಪ, ಮೆಣಸಗಿ ಗ್ರಾಮಗಳಿಗೆ ನೀರು ನುಗ್ಗಿದೆ. ಗದಗ ಜಿಲ್ಲೆಯ 16 ಗ್ರಾಮಗಳ ಜನರು ಕಂಗಾಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಆದರೆ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ 20 ಕ್ರಸ್ಟ್ ಗೇಟ್‍ಗಳ ಮೂಲಕ 50 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ನಾಳೆ ಸಂಜೆ ಹೊತ್ತಿಗೆ 1 ಲಕ್ಷ ಕ್ಯೂಸೆಕ್ ಬಿಡುವ ಸಾಧ್ಯತೆ ಇದ್ದು, ಹಂಪಿ ಸ್ಮಾರಕ ಮತ್ತು ಕಂಪ್ಲಿ ಸೇತುವೆ ಮುಳುಗಡೆಯಾಗುವ ಭೀತಿ ಇದೆ. ಹೀಗಾಗಿ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

TAGGED:bridgefloodhomekarwarlandPublic TVrainRiverswaterಕಾರವಾರಜಮೀನುನದಿಗಳುನೀರುಪಬ್ಲಿಕ್ ಟಿವಿಪ್ರವಾಹಮನೆಮಳೆಸೇತುವೆ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

pm modi kerala
Latest

ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನ ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ: ಮೋದಿ ಕಿಡಿ

Public TV
By Public TV
7 minutes ago
karwar district police office
Latest

ಉತ್ತರ ಕನ್ನಡದ 50% ಪೊಲೀಸರಿಗೆ ಸಂಬಳವಾಗದೇ ಪರದಾಟ

Public TV
By Public TV
29 minutes ago
big bulletin 11 March 2026 part 1 1
Big Bulletin

ಬಿಗ್‌ ಬುಲೆಟಿನ್‌ 11 March 2026 ಭಾಗ-1

Public TV
By Public TV
57 minutes ago
big bulletin 11 March 2026 part 2 1
Big Bulletin

ಬಿಗ್‌ ಬುಲೆಟಿನ್‌ 11 March 2026 ಭಾಗ-2

Public TV
By Public TV
59 minutes ago
big bulletin 11 March 2026 part 3
Big Bulletin

ಬಿಗ್‌ ಬುಲೆಟಿನ್‌ 11 March 2026 ಭಾಗ-3

Public TV
By Public TV
1 hour ago
UP Brain Dead Woman back to life after ambulance hits pothole 1
Latest

ಬ್ರೈನ್ ಡೆಡ್ ಆಗಿದ್ದ ಮಹಿಳೆಗೆ ರಸ್ತೆಗುಂಡಿಯಿಂದ ಬಂತು ಪ್ರಜ್ಞೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?