Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ಮೇರೆಗೆ ವೈದ್ಯರು, ತಜ್ಞರ ನೇಮಕ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ಮೇರೆಗೆ ವೈದ್ಯರು, ತಜ್ಞರ ನೇಮಕ: ಸುಧಾಕರ್

Corona

ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ಮೇರೆಗೆ ವೈದ್ಯರು, ತಜ್ಞರ ನೇಮಕ: ಸುಧಾಕರ್

Public TV
Last updated: May 22, 2021 11:38 pm
Public TV
Share
3 Min Read
gdg sudhakar
SHARE

– ತಾಲೂಕು ಆಸ್ಪತ್ರೆಗಳ ಸುಧಾರಣೆಗೆ ಕ್ರಿಯಾ ಯೋಜನೆ
– ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕ್ರಮ

ಗದಗ: ಹಳೆ ಮೈಸೂರು ಮತ್ತು ಬೆಂಗಳೂರು ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಹಿಂದುಳಿದ, ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ವೈದ್ಯರು ಮತ್ತು ತಜ್ಞರ ಹುದ್ದೆಗಳಿಗೆ ಆದ್ಯತೆ ಮೇರೆಗೆ ನೇಮಕ ಮಾಡಲಾಗುವುದು. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

WhatsApp Image 2021 05 22 at 7.33.18 PM 1 e1621706712421

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕು ಆಸ್ಪತ್ರೆಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ವೈದ್ಯರು ಮತ್ತು ತಜ್ಞರ ಹುದ್ದೆ ಖಾಲಿ ಇವೆ. ಅವುಗಳ ನೇಮಕಕ್ಕೆ ಆದ್ಯತೆ ನೀಡಲಾಗುವುದು, ಇಲ್ಲವಾದಲ್ಲಿ ಗ್ರಾಮೀಣ ಭಾಗದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹಿಂತಿರುಗಿದ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲೂಕು ಆಸ್ಪತ್ರೆ ಆಗಿದ್ದರೂ ಇನ್ನೂ 30 ಹಾಸಿಗೆಗಳಿರುವ ಶಿರಹಟ್ಟಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ನೂರು ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮಾಡಲಾಗುವುದು. ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಟ ಆರು ವೆಂಟಿಲೇಟರ್ ಮತ್ತು ಐವತ್ತು ಆಕ್ಸಿಜನ್ ಹಾಸಿಗೆಗಳನ್ನು ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

WhatsApp Image 2021 05 22 at 7.33.19 PM 2

ಮೆಡಿಕಲ್ ಕಾಲೇಜು ಆಸ್ಪತ್ರೆಯ ನಿರ್ಮಾಣ ಕಾರ್ಯ ವಿಳಂಬ ಆಗುತ್ತಿದೆ. ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಕೆವಿಆರ್ ಕಂಪನಿ ಮುಖ್ಯಸ್ಥರ ಜೊತೆ ಶೀಘ್ರದಲ್ಲಿ ವೀಡಿಯೋ ಸಂವಾದ ನಡೆಸಲಾಗುವುದು. ಆಗಸ್ಟ್ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಹೆಚ್ಚುವರಿಯಾಗಿ ಆಕ್ಸಿಜನ್ ಕಾನ್ಸಟ್ರೇಟರ್ಸ್‍ಗಳನ್ನು ಜಿಲ್ಲೆಗೆ ಕಳುಹಿಸಲಾಗುವುದು. ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಜಿಮ್ಸ್‍ನಲ್ಲಿ 270 ವೈದ್ಯರು ಇದ್ದಾರೆ. 87 ಬೋಧಕ ಹುದ್ದೆಗಳು ಖಾಲಿ ಇವೆ. ಅವುಗಳ ನೇಮಕಕ್ಕೆ ಎರಡು ವಾರದಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

ನೋಂದಣಿ ಆಗಬೇಕು
ಎಲ್ಲಾ 450 ಬೆಡ್‍ಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲು ಇಡಲಾಗಿದೆ. ಕೋವಿಡ್ ಯೇತರ ರೋಗಗಳ ತುರ್ತು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಿ ಅವರಿಗೆ ಸಾಸ್ಟ್‍ನಿಂದ ನೋಂದಣಿ ಆಗದಿದ್ದರೂ ನೆರವು ನೀಡಬೇಕು. ಖಾಸಗಿ 54 ಆಸ್ಪತ್ರೆಗಳ ಪೈಕಿ 8 ಆಸ್ಪತ್ರೆಗಳು ಮಾತ್ರ ಸಾಸ್ಟ್‍ನಲ್ಲಿ ನೋಂದಣಿ ಆಗಿರುವುದರಿಂದ ಉಳಿದವುಗಳನ್ನು ನೋಂದಣಿ ಮಾಡಬೇಕು ಎಂದು ಸೂಚನೆ ನೀಡಿದರು.

WhatsApp Image 2021 05 22 at 7.33.19 PM

ಆಕ್ಸಿಜನ್‍ನ ನ್ಯಾಯಸಮ್ಮತ ಬಳಕೆ ಆಗಬೇಕು. ಆಡಿಟ್ ಮಾಡಬೇಕು, ಅದಕ್ಕೆ ತಜ್ಞರಿರುವ ಸಮಿತಿ ರಚಿಸಬೇಕು. ಈ ರೀತಿ ಮಾಡುತ್ತಿರುವುದರಿಂದ ಆಕ್ಸಿಜನ್ ಮೇಲಿನ ಒತ್ತಡ ಕಡಿಮೆ ಆಗಲಿದೆ. ಜಿಲ್ಲೆಗೆ 15 ಕೆಎಲ್ ಆಕ್ಸಿಜನ್ ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಕೊರತೆ ನಿವಾರಣೆ ಆದಂತಾಗುತ್ತದೆ. ಅಗತ್ಯ ಬಿದ್ದಲ್ಲಿ ಹೆಚ್ಚಿನ ವೆಂಟಿಲೇಟರ್ ಗಳನ್ನು ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.

ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರೆ ಸೆಂಟರ್‍ಗಳಿಗೆ ದಾಖಲು ಮಾಡಬೇಕು. ಪಿಎಚ್‍ಸಿ ವ್ಯಾಪ್ತಿಯಲ್ಲಿ ಒಂದು ಸಿಸಿಸಿ ಇರುವಂತೆ ನೋಡಿಕೊಳ್ಳಬೇಕು. ಪೌಷ್ಟಿಕ ಆಹಾರ, ಶುಚಿತ್ವಕ್ಕೆ ಒತ್ತು ನೀಡಬೇಕು. ಟೆಸ್ಟ್ ವರದಿಗಳು ಅದೇ ದಿನ ಬರುವಂತೆ ಎಚ್ಚರವಹಿಸಬೇಕು. ಸದ್ಯ 36 ಗಂಟೆಗಳಲ್ಲಿ ಸಿಗುತ್ತಿರುವ ಅವಧಿಯನ್ನು 24 ಗಂಟೆಗೆ ಇಳಿಸಬೇಕು. ಇದಕ್ಕೆ ಟಾರ್ಗೆಟೆಡ್ ಟೆಸ್ಟಿಂಗ್ ಮಾಡಬೇಕು. ಮೂರು ಪಾಳಿಯಲ್ಲಿ ಕೆಲಸ ಮಾಡಬೇಕು ಎಂದರು.

WhatsApp Image 2021 05 22 at 7.33.19 PM 1

ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗದಿಗೊಳಿಸಿರುವ ದರಕ್ಕಿಂತ ಹೆಚ್ಚು ಹಣ ಪಡೆಯಬಾರದು. ಸಿಟಿ ಸ್ಕ್ಯಾನ್ ಮಾಡಿಸಿಕೊಂಡವರಿಗೂ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ಹೆಚ್ಚು ಹಣ ಪಡೆಯಬಾರದು. ಒಂದು ವೇಳೆ ಆ ರೀತಿ ಹಣ ಪಡೆದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್, ಸಂಸದರಾದ ಶಿವಕುಮಾರ್ ಉದಾಸಿ, ಗದ್ದಿಗೌಡರ್, ಮಾಜಿ ಸಚಿವರಾದ ಎಚ್.ಕೆ.ಪಾಟೀಲ್, ಶಾಸಕರಾದ ರಾಮಣ್ಣ ರಮಣ್, ಎಂಎಲ್‍ಸಿ ಸಂಕನೂರ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

TAGGED:bedCorona Virusdr. k sudhakarhospitalOxygenPublic TVಆಕ್ಸಿಜನ್ಆಸ್ಪತ್ರೆಕೊರೊನಾ ವೈರಸ್ಡಾ ಕೆ ಸುಧಾಕರ್ಪಬ್ಲಿಕ್ ಟಿವಿಬೆಡ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
23 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
44 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
45 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
50 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
55 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?