Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ಮೇರೆಗೆ ವೈದ್ಯರು, ತಜ್ಞರ ನೇಮಕ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ಮೇರೆಗೆ ವೈದ್ಯರು, ತಜ್ಞರ ನೇಮಕ: ಸುಧಾಕರ್

Corona

ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ಮೇರೆಗೆ ವೈದ್ಯರು, ತಜ್ಞರ ನೇಮಕ: ಸುಧಾಕರ್

Public TV
Last updated: May 22, 2021 11:38 pm
Public TV
Share
3 Min Read
gdg sudhakar
SHARE

– ತಾಲೂಕು ಆಸ್ಪತ್ರೆಗಳ ಸುಧಾರಣೆಗೆ ಕ್ರಿಯಾ ಯೋಜನೆ
– ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕ್ರಮ

ಗದಗ: ಹಳೆ ಮೈಸೂರು ಮತ್ತು ಬೆಂಗಳೂರು ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಹಿಂದುಳಿದ, ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ವೈದ್ಯರು ಮತ್ತು ತಜ್ಞರ ಹುದ್ದೆಗಳಿಗೆ ಆದ್ಯತೆ ಮೇರೆಗೆ ನೇಮಕ ಮಾಡಲಾಗುವುದು. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

WhatsApp Image 2021 05 22 at 7.33.18 PM 1 e1621706712421

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕು ಆಸ್ಪತ್ರೆಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ವೈದ್ಯರು ಮತ್ತು ತಜ್ಞರ ಹುದ್ದೆ ಖಾಲಿ ಇವೆ. ಅವುಗಳ ನೇಮಕಕ್ಕೆ ಆದ್ಯತೆ ನೀಡಲಾಗುವುದು, ಇಲ್ಲವಾದಲ್ಲಿ ಗ್ರಾಮೀಣ ಭಾಗದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹಿಂತಿರುಗಿದ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲೂಕು ಆಸ್ಪತ್ರೆ ಆಗಿದ್ದರೂ ಇನ್ನೂ 30 ಹಾಸಿಗೆಗಳಿರುವ ಶಿರಹಟ್ಟಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ನೂರು ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮಾಡಲಾಗುವುದು. ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಟ ಆರು ವೆಂಟಿಲೇಟರ್ ಮತ್ತು ಐವತ್ತು ಆಕ್ಸಿಜನ್ ಹಾಸಿಗೆಗಳನ್ನು ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

WhatsApp Image 2021 05 22 at 7.33.19 PM 2

ಮೆಡಿಕಲ್ ಕಾಲೇಜು ಆಸ್ಪತ್ರೆಯ ನಿರ್ಮಾಣ ಕಾರ್ಯ ವಿಳಂಬ ಆಗುತ್ತಿದೆ. ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಕೆವಿಆರ್ ಕಂಪನಿ ಮುಖ್ಯಸ್ಥರ ಜೊತೆ ಶೀಘ್ರದಲ್ಲಿ ವೀಡಿಯೋ ಸಂವಾದ ನಡೆಸಲಾಗುವುದು. ಆಗಸ್ಟ್ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಹೆಚ್ಚುವರಿಯಾಗಿ ಆಕ್ಸಿಜನ್ ಕಾನ್ಸಟ್ರೇಟರ್ಸ್‍ಗಳನ್ನು ಜಿಲ್ಲೆಗೆ ಕಳುಹಿಸಲಾಗುವುದು. ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಜಿಮ್ಸ್‍ನಲ್ಲಿ 270 ವೈದ್ಯರು ಇದ್ದಾರೆ. 87 ಬೋಧಕ ಹುದ್ದೆಗಳು ಖಾಲಿ ಇವೆ. ಅವುಗಳ ನೇಮಕಕ್ಕೆ ಎರಡು ವಾರದಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.

ನೋಂದಣಿ ಆಗಬೇಕು
ಎಲ್ಲಾ 450 ಬೆಡ್‍ಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲು ಇಡಲಾಗಿದೆ. ಕೋವಿಡ್ ಯೇತರ ರೋಗಗಳ ತುರ್ತು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಿ ಅವರಿಗೆ ಸಾಸ್ಟ್‍ನಿಂದ ನೋಂದಣಿ ಆಗದಿದ್ದರೂ ನೆರವು ನೀಡಬೇಕು. ಖಾಸಗಿ 54 ಆಸ್ಪತ್ರೆಗಳ ಪೈಕಿ 8 ಆಸ್ಪತ್ರೆಗಳು ಮಾತ್ರ ಸಾಸ್ಟ್‍ನಲ್ಲಿ ನೋಂದಣಿ ಆಗಿರುವುದರಿಂದ ಉಳಿದವುಗಳನ್ನು ನೋಂದಣಿ ಮಾಡಬೇಕು ಎಂದು ಸೂಚನೆ ನೀಡಿದರು.

WhatsApp Image 2021 05 22 at 7.33.19 PM

ಆಕ್ಸಿಜನ್‍ನ ನ್ಯಾಯಸಮ್ಮತ ಬಳಕೆ ಆಗಬೇಕು. ಆಡಿಟ್ ಮಾಡಬೇಕು, ಅದಕ್ಕೆ ತಜ್ಞರಿರುವ ಸಮಿತಿ ರಚಿಸಬೇಕು. ಈ ರೀತಿ ಮಾಡುತ್ತಿರುವುದರಿಂದ ಆಕ್ಸಿಜನ್ ಮೇಲಿನ ಒತ್ತಡ ಕಡಿಮೆ ಆಗಲಿದೆ. ಜಿಲ್ಲೆಗೆ 15 ಕೆಎಲ್ ಆಕ್ಸಿಜನ್ ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಕೊರತೆ ನಿವಾರಣೆ ಆದಂತಾಗುತ್ತದೆ. ಅಗತ್ಯ ಬಿದ್ದಲ್ಲಿ ಹೆಚ್ಚಿನ ವೆಂಟಿಲೇಟರ್ ಗಳನ್ನು ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.

ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರೆ ಸೆಂಟರ್‍ಗಳಿಗೆ ದಾಖಲು ಮಾಡಬೇಕು. ಪಿಎಚ್‍ಸಿ ವ್ಯಾಪ್ತಿಯಲ್ಲಿ ಒಂದು ಸಿಸಿಸಿ ಇರುವಂತೆ ನೋಡಿಕೊಳ್ಳಬೇಕು. ಪೌಷ್ಟಿಕ ಆಹಾರ, ಶುಚಿತ್ವಕ್ಕೆ ಒತ್ತು ನೀಡಬೇಕು. ಟೆಸ್ಟ್ ವರದಿಗಳು ಅದೇ ದಿನ ಬರುವಂತೆ ಎಚ್ಚರವಹಿಸಬೇಕು. ಸದ್ಯ 36 ಗಂಟೆಗಳಲ್ಲಿ ಸಿಗುತ್ತಿರುವ ಅವಧಿಯನ್ನು 24 ಗಂಟೆಗೆ ಇಳಿಸಬೇಕು. ಇದಕ್ಕೆ ಟಾರ್ಗೆಟೆಡ್ ಟೆಸ್ಟಿಂಗ್ ಮಾಡಬೇಕು. ಮೂರು ಪಾಳಿಯಲ್ಲಿ ಕೆಲಸ ಮಾಡಬೇಕು ಎಂದರು.

WhatsApp Image 2021 05 22 at 7.33.19 PM 1

ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗದಿಗೊಳಿಸಿರುವ ದರಕ್ಕಿಂತ ಹೆಚ್ಚು ಹಣ ಪಡೆಯಬಾರದು. ಸಿಟಿ ಸ್ಕ್ಯಾನ್ ಮಾಡಿಸಿಕೊಂಡವರಿಗೂ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ಹೆಚ್ಚು ಹಣ ಪಡೆಯಬಾರದು. ಒಂದು ವೇಳೆ ಆ ರೀತಿ ಹಣ ಪಡೆದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್, ಸಂಸದರಾದ ಶಿವಕುಮಾರ್ ಉದಾಸಿ, ಗದ್ದಿಗೌಡರ್, ಮಾಜಿ ಸಚಿವರಾದ ಎಚ್.ಕೆ.ಪಾಟೀಲ್, ಶಾಸಕರಾದ ರಾಮಣ್ಣ ರಮಣ್, ಎಂಎಲ್‍ಸಿ ಸಂಕನೂರ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

TAGGED:bedCorona Virusdr. k sudhakarhospitalOxygenPublic TVಆಕ್ಸಿಜನ್ಆಸ್ಪತ್ರೆಕೊರೊನಾ ವೈರಸ್ಡಾ ಕೆ ಸುಧಾಕರ್ಪಬ್ಲಿಕ್ ಟಿವಿಬೆಡ್
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
2 minutes ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
5 minutes ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
37 minutes ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
1 hour ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
2 hours ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?