Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಉದ್ಯೋಗದ ಹಕ್ಕಿಗಾಗಿ ಧ್ವನಿ ಎತ್ತರಿಸಿದ ತುಳುನಾಡು – ಸಮಾನ ಮನಸ್ಕರ ಮನೆ ಮನೆ ಪ್ರತಿಭಟನೆ ಕರೆಗೆ ಅಭೂತಪೂರ್ವ ಬೆಂಬಲ

Public TV
Last updated: June 5, 2021 11:01 pm
Public TV
Share
3 Min Read
MNG 1
SHARE

ಮಂಗಳೂರು: ಎಂಆರ್ ಪಿಎಲ್(MRPL) ಉದ್ಯೋಗ ನೇಮಕಾತಿಯಲ್ಲಿ ತುಳುನಾಡು ಸೇರಿದಂತೆ ಕನ್ನಡಿಗರನ್ನು ಹೊರಗಿಟ್ಟಿರುವುದನ್ನು ಖಂಡಿಸಿ ತುಳುನಾಡಿನ ಉದ್ಯಮಗಳಲ್ಲಿ ತುಳುವರಿಗೆ ದೊಡ್ಡ ಪಾಲು ಸಿಗಬೇಕು, ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕು ಎಂದು ಒತ್ತಾಯಿಸಿ ತುಳುನಾಡಿನ ಸಮಾನ ಮನಸ್ಕ ಸಂಘಟನೆಗಳು ಕರೆ ನೀಡಿದ್ದ “ಮನೆ ಮನೆ ಪ್ರತಿಭಟನೆ” ಅಭೂತಪೂರ್ವ ಯಶಸ್ಸು ಕಂಡಿದೆ.

1 3 medium

ತುಳುನಾಡಿಗೆ ಉದ್ದಿಮೆ, ಉದ್ಯೋಗದಲ್ಲಿ ಸತತವಾಗಿ ಆಗುತ್ತಿರುವ ಅನ್ಯಾಯವನ್ನು ಕಂಡು ಮೌನವಾಗಿರುವ ಜನಪ್ರತಿನಿಧಿಗಳಿಗೆ, ರಾಜಕೀಯ ಪಕ್ಷಗಳಿಗೆ, ಕಂಪೆನಿಗಳ ಆಡಳಿತಗಳಿಗೆ ಇದು ಎಚ್ಚರಿಕೆಯ ಗಂಟೆ. ಇದರ ಯಶಸ್ಸು ಇಂದಿನ ಪ್ರತಿಭಟನೆಯನ್ನು ಮನೆ ಮನೆಗಳಿಗೆ ತಲುಪಿಸಿದ, ಧ್ವನಿ ಎತ್ತರಿಸಿ ಪ್ರತಿಭಟಿಸಿದ ಜನತೆಗೆ ಸಲ್ಲುತ್ತದೆ. ಹಾಗೂ ಸಮಾನ ಮನಸ್ಕ ಸಂಘಟನೆಗಳು ಈ ಯಶಸ್ಸಿಗಾಗಿ ಜನತೆಗೆ ಅಭಿನಂದನೆ ಸಲ್ಲಿಸುತ್ತದೆ ಎಂದು ಡಿವೈಎಫ್‍ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.

MNG 1 1 medium

ಐದು ದಿನಗಳ ಹಿಂದೆ ಸಮಾನ ಮನಸ್ಕ ಸಂಘಟನೆಗಳು ಮೇಲ್ಕಂಡ ವಿಷಯಗಳನ್ನು ಮುಂದಿಟ್ಟು ಮನೆ ಮನೆ ಪ್ರತಿಭಟನೆ ಗೆ ಕರೆ ನೀಡಿದ್ದವು. ಈ ಕರೆಗೆ ಅವಳಿ ಜಿಲ್ಲೆಯಾದ್ಯಂತ ವ್ಯಾಪಕ ಬೆಂಬಲ ದೊರಕತೊಡಗಿತು. ಡಿವೈಎಫ್‍ಐ ನೇತೃತ್ವದ ಸಮಾನ ಮನಸ್ಕ ಸಂಘಟನೆಗಳ ಜೊತೆಗೆ ಯುವ ಕಾಂಗ್ರೆಸ್, ಯುವ ಜನತಾ ದಳ, ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳು, ಕಾರ್ಮಿಕ, ಮಹಿಳಾ ಸಂಘಟನೆಗಳು ಮಾತ್ರ ವಲ್ಲದೆ ಜಿಲ್ಲೆಯ ವಿವಿಧ ಯುವಕ ಮಂಡಲಗಳು, ಕ್ರೀಡಾ ತಂಡಗಳು, ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಸೇರಿಕೊಂಡವು.

MNG 2 medium

“ತುಳುನಾಡ ಅಭಿವೃದ್ಧಿಡ್ ತುಳುವಪ್ಪೆ ಜೋಕುಲೆಗ್ ಮಲ್ಲಪಾಲ್” ಎಂಬ ಘೋಷಣೆ ಸಾಮಾನ್ಯ ಜನತೆಯನ್ನು ಆಕರ್ಷಿಸಿತು. ಈ ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಇಂದಿನ ಪ್ರತಿಭಟನೆ ಅಭೂತಪೂರ್ವ ಜನ ಬೆಂಬಲದೊಂದಿಗೆ ಯಶಸ್ಸು ಸಾಧಿಸಿತು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಇಂದು ಪ್ರತಿಭಟನೆ ನಡೆದಿದೆ. ಬೆಳಗ್ಗೆ ಮುನೀರ್ ಕಾಟಿಪಳ್ಳ ನೇತೃತ್ವದ ತಂಡ ಎಮ್ ಆರ್ ಪಿ ಎಲ್ ಪ್ರಧಾನ ದ್ವಾರದ ಮುಂಭಾಗ ಪೋಸ್ಟರ್ ಪ್ರದರ್ಶಿಸಿ ಪ್ರತಿಭಟಿಸಿದರೆ, ಮಾಜಿ ಸಚಿವ ರಮಾನಾಥ ರೈ, ಶಾಸಕರಾದ ಯು ಟಿ ಖಾದರ್, ಹರೀಶ್ ಕುಮಾರ್, ದಲಿತ ನಾಯಕರಾದ ಎಂ ದೇವದಾಸ್, ರಘು ಎಕ್ಕಾರು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ ಮಾನ್ ಬಂಟ್ವಾಳ, ಹಿರಿಯ ವಿಚಾರವಾದಿಗಳಾದ ಪ್ರೊ ನರೇಂದ್ರ ನಾಯಕ್, ಶ್ಯಾಮ ಸುಂದರ ರಾವ್, ನ್ಯಾಯವಾದಿಗಳಾದ ಯಶವಂತ ಮರೋಳಿ, ದಿನೇಶ್ ಹೆಗ್ಡೆ ಉಳೆಪಾಡಿ, ಡಿವೈಎಫ್‍ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಅಶ್ರಫ್ ಕೆಸಿ ರೋಡ್, ನವೀನ್ ಕೊಂಚಾಡಿ, ಸಿಪಿಎಂ ನಾಯಕರಾದ ವಸಂತ ಆಚಾರಿ, ಕೃಷ್ಣಪ್ಪ ಸಾಲ್ಯಾನ್, ಯಾದವ ಶೆಟ್ಟಿ, ಜಾತ್ಯಾತೀತ ಜನತಾ ದಳದ ನಾಯಕರಾದ ಎಂ ಬಿ ಸದಾಶಿವ, ಅಕ್ಷಿತ್ ಸುವರ್ಣ, ಸಾಮಾಜಿಕ ಕಾರ್ಯಕರ್ತರಾದ ಎಂ ಜಿ ಹೆಗ್ಡೆ, ದಿಲ್ ರಾಜ್ ಆಳ್ವ,ಬಿ ಎಂ ಮಾಧವ, ರಾಘವೇಂದ್ರ ರಾವ್ ಸುರತ್ಕಲ್, ಮಾಜಿ ಉಪ ಮೇಯರ್ ಗಳಾದ ಪುರುಶೋತ್ತಮ ಚಿತ್ರಾಪುರ, ಮುಹಮ್ಮದ್ ಕುಂಜತ್ ಬೈಲ್, ಹರೀಶ್ ಪುತ್ರನ್ ಮೂಲ್ಕಿ,ಶೇಖರ ಹೆಜಮಾಡಿ, ಧನಂಜಯ ಮಟ್ಟು ಮತ್ತಿತರ ಪ್ರಮುಖರು ವಿವಿದೆಡೆ ಪೋಸ್ಟರ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಗಮನ ಸೆಳೆದರು.

33886c1b 6e4a 4bda 98f3 b55eaae8e9ed medium

ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಸೇರಿಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮೂಲೆ ಮೂಲೆಗಳಲ್ಲೂ ಪ್ರತಿಭಟನೆ ನಡೆದಿದ್ದರೂ, ಮಂಗಳೂರು ನಗರ, ಉಳ್ಳಾಲ, ಮೂಡಬಿದ್ರೆ ಭಾಗಗಳಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ಮನೆ ಮನೆಯಲ್ಲಿ ನಡೆದವು. ಅದರಲ್ಲೂ ಎಂ ಆರ್ ಪಿ ಎಲ್ ಹಾಗೂ ಕೈಗಾರಿಕಾ ಕೇಂದ್ರಗಳಿಗೆ ಹತ್ತಿರ ಇರುವ ಕಂಪೆನಿಯ ಸುತ್ತಲಿನ ಸುರತ್ಕಲ್,ಬಜಪೆ, ಕಾವೂರು, ಕಟೀಲು ಹೋಬಳಿಗಳಲ್ಲಿ ಮತ್ತಷ್ಟು ತೀವ್ರವಾಗಿ ಪ್ರತಿಭಟನೆಗಳು ನಡೆದಿದ್ದು ಸಾವಿರಾರು ಜನ ಮನೆಮನೆ ಪ್ರತಿಭಟನೆ ನಡೆಸಿದ್ರು.

ಇಂದಿನ ಪ್ರತಿಭಟನೆಗೆ ದೊರಕಿರುವ ಅಭೂತಪೂರ್ವ ಜನಬೆಂಬಲ ಬೃಹತ್ ಕಂಪೆನಿಗಳ ಹಾಗೂ ಬೇಜವಾಬ್ದಾರಿ ಜನಪ್ರತಿನಿಧಿಗಳ ವಿರುದ್ಧ ಜನತೆಯಲ್ಲಿ ಮಡುಗಟ್ಟಿರುವ ಆಕ್ರೋಶದ ಪ್ರತಿಫಲನ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರು ಮಾತು ಕೊಟ್ಟಂತೆ ಎಮ್ ಆರ್ ಪಿ ಎಲ್ ನೇಮಕಾತಿಯನ್ನು ರದ್ದುಗೊಳಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಿ ಮರು ಪ್ರಕ್ರಿಯೆ ನಡೆಸಬೇಕು, ಸರೋಜಿನಿ ಮಹಿಷಿ ವರದಿಯ ಆಧಾರದಲ್ಲಿ ರಾಜ್ಯ ಸರಕಾರ ಕಾಯ್ದೆ ರಚಿಸಬೇಕು, ತುಳುನಾಡಿನ ಸಾರ್ವಜನಿಕ ವಲಯ ಹಾಗೂ ಖಾಸಗಿ ಉದ್ಯಮಗಳಲ್ಲಿ ಸ್ಥಳೀಯರಿಗೆ ಎಲ್ಲಾ ಹಂತಗಳಲ್ಲಿ ನ್ಯಾಯೋಚಿತ ಪಾಲು ದೊರಕಬೇಕು. ಈ ಎಲ್ಲಾ ಬೇಡಿಕೆಗಳಿಗೆ ಸ್ಪಂದನೆ ದೊರಕದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರತರದ ಪ್ರತಿಭಟನೆಗಳು ಎದ್ದು ಬರಲಿವೆ. ಇಂದಿನ ಪ್ರತಿಕ್ರಿಯೆ ಎಚ್ಚರಿಕೆಯ ಘಂಟೆ, ಬೇಡಿಕೆ ಈಡೇರದೆ ವಿರಮಿಸುವುದಿಲ್ಲ, ಮತ್ತಷ್ಟು ಒಗ್ಗಟ್ಟಿನಿಂದ ಹೋರಾಟವನ್ಜು ಸಮಾನ ಮನಸ್ಕ ಸಂಘಟನೆಗಳು ಮುಂದಕ್ಕೊಯ್ಯಲಿವೆ ಎಂದು ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

TAGGED:MangaluruMRPLprotestPublic TVಎಂಆರ್‌ಪಿಎಲ್ಪಬ್ಲಿಕ್ ಟಿವಿಪ್ರತಿಭಟನೆಮಂಗಳೂರು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood

You Might Also Like

Madhuri Elephant
Latest

ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

Public TV
By Public TV
5 hours ago
AshwiniVaishnaw
Latest

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ

Public TV
By Public TV
5 hours ago
big bulletin 06 August 2025 part 1
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-1

Public TV
By Public TV
5 hours ago
big bulletin 06 August 2025 part 2
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-2

Public TV
By Public TV
5 hours ago
big bulletin 06 August 2025 part 3
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-3

Public TV
By Public TV
5 hours ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?