ಧಾರವಾಡ: ಕೇಂದ್ರ ಸರ್ಕಾರಕ್ಕೆ ಸಂವೇದನಾಶೀಲತೆ ಇಲ್ಲ, ಇವರನ್ನು ರಾಜಕೀಯವಾಗಿ ಉಚ್ಛಾಟನೆ ಮಾಡುವ ಅವಶ್ಯಕತೆ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹಿರೇಮಠ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನ ಸೋಲಿಸಿ ಎಂದು ನಾವು ರಾಜ್ಯದ ಜನತೆಗೆ ಕರೆ ಕೊಡುತ್ತೇವೆ. ಬಿಜೆಪಿ ಸರ್ಕಾರ ಸರ್ವಾಧಿಕಾರತ್ವ ತೋರುತ್ತಿದೆ. ದಬ್ಬಾಳಿಕೆಯಿಂದ ಸಂವಿಧಾನ ವಿರೋಧಿ ಕಾಯ್ದೆಗಳನ್ನು ಹೇರುತ್ತಿದೆ ಎಂದರು.
- Advertisement 2
- Advertisement 3
ಜನರಿಂದ ಆಯ್ಕೆಯಾದ ಸರ್ಕಾರ ಜನರನ್ನ ಕೇಳಿ ಕಾಯ್ದೆ ತರಬೇಕು. ಅದನ್ನ ಸರ್ಕಾರ ಮಾಡುತ್ತಿಲ್ಲ ಎಂದು ಆರೋಪಿಸಿದರು.
- Advertisement 4