Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎತ್ತಿಕಟ್ಟಿ ಅರಾಜಕತೆ ಸೃಷ್ಟಿ ಸುಲಭ, ಅದು ನಾಯಕತ್ವದ ಲಕ್ಷಣವಲ್ಲ: ಕೋಡಿಹಳ್ಳಿ ವಿರುದ್ಧ ಸಿ.ಟಿ.ರವಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಎತ್ತಿಕಟ್ಟಿ ಅರಾಜಕತೆ ಸೃಷ್ಟಿ ಸುಲಭ, ಅದು ನಾಯಕತ್ವದ ಲಕ್ಷಣವಲ್ಲ: ಕೋಡಿಹಳ್ಳಿ ವಿರುದ್ಧ ಸಿ.ಟಿ.ರವಿ ಕಿಡಿ

Chikkamagaluru

ಎತ್ತಿಕಟ್ಟಿ ಅರಾಜಕತೆ ಸೃಷ್ಟಿ ಸುಲಭ, ಅದು ನಾಯಕತ್ವದ ಲಕ್ಷಣವಲ್ಲ: ಕೋಡಿಹಳ್ಳಿ ವಿರುದ್ಧ ಸಿ.ಟಿ.ರವಿ ಕಿಡಿ

Public TV
Last updated: April 7, 2021 8:29 pm
Public TV
Share
2 Min Read
CT RAVI 1
SHARE

– ಟಿಕೆಟ್ ನೀಡುವಾಗ ಯತ್ನಾಳ್‍ರನ್ನ ಬಿಎಸ್‍ವೈ ಸಮರ್ಥಿಸಿಕೊಂಡಿದ್ರು

ಚಿಕ್ಕಮಗಳೂರು: ಕೋಡಿಹಳ್ಳಿ ಚಂದ್ರಶೇಖರ್ ಇಷ್ಟು ದಿನ ರೈತ ನಾಯಕರಾಗಿದ್ದರು ಈಗ ಕಾರ್ಮಿಕ ನಾಯಕರಾಗಿದ್ದಾರೆ. ನೌಕರರನ್ನ ಎತ್ತಿಕಟ್ಟುವುದು ಅರಾಜಕತೆ ಸೃಷ್ಟಿಸುವುದು ಸುಲಭ. ಆದರೆ, ಹರಾಜಕತೆ ಸೃಷ್ಟಿಸುವುದು ನಾಯಕತ್ವದ ಲಕ್ಷಣ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

CT RAVI

ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿ ಡಾಂಬಾರೀಕರಣಗೊಂಡ ರಸ್ತೆಯನ್ನ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮೂರು ರೈತಪರವಾದ ಕೃಷಿ ಮಸೂದೆಗಳನ್ನು ಮಂಡಿಸಿದೆ. ಆದರೆ ಆ ಮಸೂದೆಗಳು ರೈತ ವಿರೋಧಿ ಮಸೂದೆಗಳು ಎನ್ನುತ್ತಿದ್ದಾರೆ. ಸರ್ಕಾರ ರೈತರ ಪರವಾಗಿ ತೆಗೆದುಕೊಂಡ ನಿಲುವುಗಳನ್ನು ರೈತ ವಿರೋಧಿ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನಾವು ಬೆಳೆದ ಬೆಳೆಯನ್ನ ಮುಕ್ತವಾಗಿ ಮಾರಾಟ ಮಾಡಲು ಅವಕಾಶ ನೀಡಬೇಕು ಎಂದಿದ್ದರು. ಈಗ ಸರ್ಕಾರ ಮುಕ್ತ ಮಾರಾಟಕ್ಕೆ ಅವಕಾಶ ಕೊಟ್ಟಿದೆ. ಈಗ ರೈತ ವಿರೋಧಿ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

C T Ravi 1

ಬೆದರಿಕೆ ಮೂಲಕ ಸರ್ಕಾರವನ್ನು ಮಣಿಸಲು ಸಾಧ್ಯವಿಲ್ಲ. ಸಾರಿಗೆ ಸಚಿವರು ಮೇ 2ರ ವರೆಗೆ ಸಮಯ ಕೊಡುವಂತೆ ಕೇಳಿಕೊಂಡಿದ್ದಾರೆ. ನೌಕರರು ಅಲ್ಲಿಯವರೆಗೆ ಸಮಯ ಕೊಟ್ಟು ನೋಡಬೇಕು. ಸರ್ಕಾರ ಹಾಗೂ ಬಿಜೆಪಿ ನಿಮ್ಮ ಬೇಡಿಕೆಯ ಪರವಾಗಿದೆ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸಮಸ್ಯೆಯನ್ನು ಎದುರಿಸುವಂತಹ ವೇಳೆಯಲ್ಲೂ ನೌಕರರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮುಷ್ಕರವನ್ನು ಹಿಂತೆಗೆದುಕೊಳ್ಳುವಂತೆ ನೌಕರರಲ್ಲಿ ಮನವಿ ಮಾಡಿದರು. ಮೊದಲೇ ಸಂಕಷ್ಟದಲ್ಲಿದ್ದ ಸಾರಿಗೆ ಇಲಾಖೆ ಕೋವಿಡ್‍ನಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸಹಕರಿಸುವಂತೆ ವಿನಂತಿಸಿದರು.

Kodihalli Chandrashekhar 1

ಸೈನಿಕರ ಹತ್ಯೆ ದುರಾದೃಷ್ಟಕರ : ನಾನು ಗೌರಿ ಎಂದು ಮೊಂಬತ್ತಿ ಹಿಡಿದವರು 27 ಜನ ಸೈನಿಕರು ಸತ್ತಾಗ ಏಕೆ ಮೊಂಬತ್ತಿ ಹಿಡಿಯಲಿಲ್ಲ ಎಂದು ಟೀಕಿಸಿದರು. ಎಡಪಂಥೀಯ ನಿಲುಗಳಿಂದ ದುಷ್ಪ್ರೇರಣೆ ಪಡೆದ ಜನ ಛತ್ತಿಸ್‍ಗಢದಲ್ಲಿ 27 ಜನ ಸೈನಿಕರನ್ನ ಹತ್ಯೆ ಮಾಡಿದ್ದಾರೆ. ಇದು ದುರಾದೃಷ್ಟಕರ. ಸೈನಕರಿಗೆ ಶತ್ರುಗಳಾದವರು ದೇಶಕ್ಕೂ ಶತ್ರುಗಳೇ. ಯಾರು ಸಂವಿಧಾನವನ್ನ ಒಪ್ಪುವುದಿಲ್ಲವೋ ಅವರು ಬ್ಯಾಲೆಟ್ ಮೇಲೆ ನಂಬಿಕೆ ಇಡಲ್ಲ. ಸಂವಿಧಾನದ ಮೇಲೆ ಯಾರಿಗೆ ನಂಬಿಕೆ ಇರುತ್ತೋ ಅವರು ಬ್ಯಾಲೆಟ್ ಮೇಲೆ ನಂಬಿಕೆ ಇಡುತ್ತಾರೆ. ಬುಲೆಟ್ ಮೇಲೆ ನಂಬಿಕೆ ಇರುವವರಿಗೆ ಸಂವಿಧಾನದ ಮೇಲೆ ನಂಬಿಕೆ ಇರುವುದಿಲ್ಲ ಎಂದರು.

Basanagowda Patil Yatnal

ಸೈನಿಕರನ್ನ ಶತ್ರು ಎಂದು ಪರಿಗಣಿಸುವವನು ದೇಶದಲ್ಲಿ ಇರುವುದಕ್ಕೆ ಅನರ್ಹ. ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ಸಣ್ಣ-ಸಣ್ಣ ವಿಷಯಗಳನ್ನ ವೈಭವಿಕರಿಸಿ ಅರಾಜಕತೆ ಸೃಷ್ಟಿಸಿ ದೇಶವನ್ನು ಹೊಡೆಯುವ ಹುನ್ನಾರ ನಡೆಯುತ್ತಿದೆ. ಈ ಬಗ್ಗೆ ಜನಜಾಗೃತಿ ಉಂಟು ಮಾಡುವ ಅನಿವಾರ್ಯತೆ ಇದೆ ಎಂದರು.

cm bsy yatnal 1

ಇದೇ ವೇಳೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಬಿಎಸ್‍ವೈ ಹಾಗೂ ಯತ್ನಾಳ್ ಸಂಬಂಧ ಚೆನ್ನಾಗಿದೆ. ಯತ್ನಾಳ್ ಸ್ವಭಾವದ ಬಗ್ಗೆ 2018ರಲ್ಲಿ ಟಿಕೆಟ್ ನೀಡುವಾಗ ಚರ್ಚೆಯಾಗಿತ್ತು. ಆಗ ಯತ್ನಾಳ್ ಪರ ಬಿ.ಎಸ್ ಯಡಿಯೂರಪ್ಪ ಸಮರ್ಥನೆ ಮಾಡಿ ಮಾತನಾಡಿದ್ದರು. ಅವರ ವ್ಯಕ್ತಿಗತ ಸಂಬಂಧ ಚೆನ್ನಾಗಿದೆ ಎಂದರು.

TAGGED:basanagowda yatnal Patilchikkamagaluru BJPCT RaviKodihalli ChandrasekharTransport Employees StrikeYediyurappaಕೋಡಿಹಳ್ಳಿ ಚಂದ್ರಶೇಖರ್ಚಿಕ್ಕಮಗಳೂರುಬಸನಗೌಡ ಪಾಟೀಲ್ ಯತ್ನಾಳ್ಬಿ.ಎಸ್.ಯಡಿಯೂರಪ್ಪಬಿಜೆಪಿಸಾರಿಗೆ ನೌಕರರ ಮುಷ್ಕರಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
21 minutes ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
39 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
1 hour ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
1 hour ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?