Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಫ್‌ಬಿ ಪೋಸ್ಟ್‌ ನೆಪ ಮಾತ್ರ – ಅಖಂಡ ಮನೆಗೆ ಬೆಂಕಿ ಹಂಚಿದ್ದು ಪೂರ್ವನಿಯೋಜಿತ ಸಂಚು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎಫ್‌ಬಿ ಪೋಸ್ಟ್‌ ನೆಪ ಮಾತ್ರ – ಅಖಂಡ ಮನೆಗೆ ಬೆಂಕಿ ಹಂಚಿದ್ದು ಪೂರ್ವನಿಯೋಜಿತ ಸಂಚು

Public TV
Last updated: October 12, 2020 9:38 pm
Public TV
Share
3 Min Read
kaval byrasandra Attack Akhanda Srinivas Murthy 1
SHARE

– ಸಿಸಿಬಿ ಪೊಲೀಸರಿಂದ 850 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ
– ಮಧ್ಯಂತರ ಚಾರ್ಜ್‌ಶೀಟ್‌ನಲ್ಲಿ ಸಂಪತ್‌ ರಾಜ್‌ 51ನೇ ಆರೋಪಿ

ಬೆಂಗಳೂರು: ದೇವರಜೀವನಹಳ್ಳಿ(ಡಿಜೆ ಹಳ್ಳಿ) ಹಾಗೂ ಕಾಡುಗೊಂಡನಹಳ್ಳಿ(ಕೆಜೆ ಹಳ್ಳಿ) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮಧ್ಯಂತರ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

60 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಬೇಕಾಗಿದ್ದರಿಂದ ಇಂದು ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. 850 ಪುಟಗಳ ಮಧ್ಯಂತರ ಚಾರ್ಜ್ ಶೀಟ್‌ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ 51ನೇ ಆರೋಪಿಯಾಗಿದ್ದರೆ, ಮಾಜಿ ಪಾಲಿಕೆ ಸದಸ್ಯ ಝಾಕೀರ್ 52ನೇ ಆರೋಪಿಯಾಗಿದ್ದಾರೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸಕ್ಕೆ ಬೆಂಕಿ ಇಡಲು ಇವರ ಪಾತ್ರ ಇದೆ. ಟೆಕ್ನಿಕಲ್ ಸಾಕ್ಷ್ಯಗಳ ಮೂಲಕ ಗಲಭೆಯಲ್ಲಿ ಭಾಗಿಯಾದ ಮತ್ತಷ್ಟು ಆರೋಪಿಗಳ ಹೆಸರನ್ನು ಸೇರಿಸಲಾಗುವುದು ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

kaval byrasandra Attack Akhanda Srinivas Murthy 3

ಪ್ರಕರಣದ ತನಿಖೆಯಲ್ಲಿ ಟೆಕ್ನಿಕಲ್ ಮತ್ತು ಡಿಜಿಟಲ್ ಸಾಕ್ಷ್ಯಗಳೇ ಪ್ರಮುಖ ಪಾತ್ರ ವಹಿಸಿದೆ. ವಿಡಿಯೋ ಎವಿಡೆನ್ಸ್ ಆರೋಪಿಗಳ ಪಾಲಿಗೆ ಮುಳುವಾಗಿದೆ. 30ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಯನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಬರೋಬ್ಬರಿ 52 ಆರೋಪಿಗಳ ವಿರುದ್ದ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಮುಂದೆ ತನಿಖೆ ಬಳಿಕ ಉಳಿದ ಆರೋಪಿಗಳ ಹೆಸರನ್ನು ಸೇರಿಸಲಾಗುವುದು ಎಂದು ಹೇಳಿದೆ.

ಸದ್ಯದ ಮಟ್ಟಿಗೆ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ರಿಲೀಫ್‌ ಸಿಕ್ಕಿದೆ. ಸಂಪತ್ ರಾಜ್ ಅನಾರೋಗ್ಯ ಸಂಬಂಧ ಡಾಕ್ಟರ್ ನೀಡಿದ ಪ್ರಮಾಣಪತ್ರವನ್ನು ಲಗತ್ತಿಸಲಾಗಿದೆ. ಸಂಪತ್‌ ರಾಜ್‌ ಅವರಿಗೆ ಕೋವಿಡ್ ಲಕ್ಷಣಗಳು ಇನ್ನೂ ಹೋಗಿಲ್ಲ. ಅಲ್ಲದೆ ಎದೆ ನೋವು, ಬಿಪಿ, ಶುಗರ್ ಇದೆ ಎಂದು ವೈದ್ಯರು ವರದಿ ನೀಡಿದ್ದರು. ಸಂಪತ್ ರಾಜ್ ದಾಖಲಾಗಿದ್ದ ಆಸ್ಪತ್ರೆಗೆ ತೆರಳಿ ಸಿಸಿಬಿ ಪೊಲೀಸರು ಮೆಡಿಕಲ್‌ ವರದಿ ಪಡೆದುಕೊಂಡಿದ್ದರು.

Akhanda Srinivas Murthy 4

ಚಾರ್ಜ್‌ಶೀಟ್‌ನಲ್ಲಿ ಏನಿದೆ?
ಪ್ರತಿಭಟನೆ ಮಾಡಲು ಹೋದವರು ಬೇರೆಯವರ ಕುಮ್ಮಕ್ಕಿಗೆ ಕಿವಿಗೊಟ್ಟು ಬೆಂಕಿ ಹಾಕಿದ್ದಾರೆ. ನವೀನ್ ಫೇಸ್‌ಬುಕ್‌ ಪೋಸ್ಟ್ ಕೇವಲ ನೆಪಮಾತ್ರ. ಈ ಪೋಸ್ಟ್ ವಿರುದ್ಧ ಪ್ರತಿಭಟನೆ ನಡೆಸಲು ಮುಸ್ಲಿಂ ಮುಖಂಡರು ಮುಂದಾಗಿದ್ದರು. ಆದರೆ ಪ್ರತಿಭಟನೆಯನ್ನ ಕೆಲವರು ದುರುಪಯೋಗ ಮಾಡಿಕೊಂಡು ಶಾಸಕರ ಮೇಲಿನ ದ್ವೇಷದಿಂದ ಗಲಭೆಗೆ ಸಂಚು ರೂಪಿಸಿದರು.

ಅಖಂಡ ಶ್ರೀನಿವಾಸ ಮೂರ್ತಿ ರಾಜಕೀಯವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಗಲಭೆಗೆ ಕುಮ್ಮಕ್ಕು ನೀಡಲಾಯಿತು. ರಾಜಕೀಯ ವೈಷಮ್ಯ ಸಾಧಿಸಲು ಶಾಸಕರ ಮನೆ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಯಿತು. ಅರುಣ್ ರಾಜ್ ಮತ್ತು ಮುಜಾಹೀದ್ ಅಖಂಡ ಮನೆ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು. ಇಬ್ಬರ ಕುಮ್ಮಕ್ಕಿನಿಂದ ಪ್ರತಿಭಟನಾಕಾರರು ಬೆಂಕಿ ಹಂಚಿದ್ದರು. ಇಬ್ಬರು ಆರೋಪಿಗಳ ಮೊಬೈಲಿನಲ್ಲಿ ವಾಟ್ಸಪ್‌ ಚಾಟ್‌ ಮತ್ತು ಕರೆ ಮಾಹಿತಿಯಲ್ಲಿ ಸಂಚಿನ ಬಗ್ಗೆ ಸಾಕ್ಷ್ಯಗಳು ಸಿಕ್ಕಿವೆ.

DJ HALLI KG HALLI ACCUSED medium

52 ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದು ಎಲ್ಲರ ಕಾಲ್ ಡಿಟೈಲ್ಸ್, ವಾಟ್ಸಪ್ ಚಾಟಿಂಗ್ ಸಂಗ್ರಹಿಸಲಾಗಿದೆ. ಅರುಣ್ ರಾಜ್ ಮತ್ತು ಮುಜಾಹೀದ್ ಪ್ರತಿಭಟನಾಕಾರರ ಜೊತೆ ಮಾತಾನಾಡುತ್ತಿದ್ದರು ಎಂದು ಗಲಭೆ ವೇಳೆ ಇದ್ದ ವ್ಯಕ್ತಿಗಳು ಸಾಕ್ಷ್ಯ ಹೇಳಿದ್ದಾರೆ. ಒಟ್ಟು 100ಕ್ಕೂ ಅಧಿಕ ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ.

ಪೂರ್ವ ನಿಯೋಜಿತ ಸಂಚು:
ಆಖಂಡ ಶ್ರೀನಿವಾಸಮೂರ್ತಿ ಹೆಸರು ಹಾಳು ಮಾಡಲು ಪೂರ್ವ ನಿಯೋಜಿತ ಸಂಚು ಎಂಬುದು ತನಿಖೆ ವೇಳೆ ಬಯಲಾಗಿದೆ. ಶಾಸಕರ ಹೆಸರು ಕೆಡಿಸಲು ಒಳ್ಳೆಯ ಸಮಯಕ್ಕೆ ಕೆಲವು ಮುಖಂಡರು ಕಾದಿದ್ದರು. ನವೀನ್ ಪೋಸ್ಟ್ ಹಾಕುತ್ತಿದ್ದಂತೆ ಎಲ್ಲರೂ ಸಕ್ರಿಯರಾಗಿ ಈ ಗಲಭೆ ನಡೆಸಿದ್ದಾರೆ ಎಂಬ ಅಂಶ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ.

DJ Halli Bengaluru Riots

ಮಾಜಿ ಮೇಯರ್ ಸಂಪತ್ ರಾಜ್ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ಎ ಆರ್ ಝಾಕೀರ್ ಅವರ ವಿಚಾರಣೆ ನಡೆಸಿಲ್ಲ. ಈಗಾಗಲೇ ಇಬ್ಬರಿಗೂ ವಿಚಾರಣೆಗೆ ಬರುವಂತೆ ಎರಡನೇ ಬಾರಿ ನೋಟಿಸ್‌ ನೀಡಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಸದ್ಯಕ್ಕೆ ಸಂಪತ್‌ ರಾಜ್‌ ಅವರಿಗೆ ತಾತ್ಕಾಲಿಕ ವಿನಾಯಿತಿ ನೀಡಲಾಗಿದೆ.

Share This Article
Facebook Whatsapp Whatsapp Telegram
Previous Article corona virus 1 ರಾಜ್ಯದಲ್ಲಿ 10 ಸಾವಿರ ದಾಟಿದ ಸಾವಿನ ಸಂಖ್ಯೆ- ಇಂದು 7,606 ಪಾಸಿಟಿವ್
Next Article KOHLI ABD a 47 ಎಸೆತಕ್ಕೆ 100 ರನ್ ಜೊತೆಯಾಟ – ಐಪಿಎಲ್‍ನಲ್ಲಿ ಎಬಿಡಿ, ಕೊಹ್ಲಿ ದಾಖಲೆ

Latest Cinema News

Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows
Kichcha Sudeep KD Cinema
ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
Cinema Latest Sandalwood Top Stories
Zaid Khan
ಕಲ್ಟ್ ಚಿತ್ರದ ಅಯ್ಯೊ ಶಿವನೇ ಹಾಡಿಗೆ ಸ್ಟೆಪ್‌ ಹಾಕಿದ ಝೈದ್ ಖಾನ್
Cinema Latest Sandalwood Top Stories
Vijay Deverakonda 01
ಜಾಲಿ ಮೂಡಿನಲ್ಲಿ ನಟ ವಿಜಯ್ ದೇವರಕೊಂಡ – ರಶ್ಮಿಕಾ ಎಲ್ಲಿ ಅಂದ್ರು ಫ್ಯಾನ್ಸ್‌!
Cinema Latest South cinema Uncategorized
Disha Patani 1
ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌
Bollywood Cinema Latest Main Post National

You Might Also Like

Chikkaballapura Mother Suicide
Chikkaballapur

Chikkaballapura | ಇಬ್ಬರು ಹೆಣ್ಣುಮಕ್ಕಳೊಂದಿಗೆ ವಿಷ ಸೇವಿಸಲು ಪ್ಲ್ಯಾನ್‌ – ತಾಯಿ ಸಾವು

2 hours ago
siddaramaiah mandya
Latest

ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

2 hours ago
POLICE JEEP 1
Bengaluru City

ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪ – ಇನ್‌ಸ್ಪೆಕ್ಟರ್‌ ಸೇರಿ 11 ಪೊಲೀಸರು ಸಸ್ಪೆಂಡ್‌

3 hours ago
Chitradurga Hindu Mahaganapathi Shobhayatre
Chitradurga

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ – ಜನಸಾಗರ, ಡಿಜೆ ಸದ್ದಿಗೆ ಯುವ ಸಮೂಹ ಭರ್ಜರಿ ಡ್ಯಾನ್ಸ್

4 hours ago
Mahadeshwara Hills
Chamarajanagar

ಭಕ್ತರಿಗೆ ಸಿಹಿಸುದ್ದಿ; ಮಾದಪ್ಪನ ದರ್ಶನಕ್ಕೆ ತಿರುಪತಿ ಮಾದರಿ ವ್ಯವಸ್ಥೆ

5 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?