Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದು: ಜೋಶಿ

Public TV
Last updated: June 12, 2021 9:00 pm
Public TV
Share
4 Min Read
hbl joshi
SHARE

– 13 ದಿನಗಳಲ್ಲಿ ನಿರ್ಮಾಣವಾದ ಸುಸಜ್ಜಿತ ಆಸ್ಪತ್ರೆ

ಹುಬ್ಬಳ್ಳಿ: ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ವಹಿಸಿಕೊಂಡಿದೆ. ಇನ್ನು ಮುಂದೆ ಲಸಿಕೆ ಸಮಸ್ಯೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದರು.

ನಗರದ ಕಿಮ್ಸ್ ಆವರಣದಲ್ಲಿ ವೇದಾಂತ ಆಸ್ಪತ್ರೆ ನಿರ್ಮಿಸಿರುವ 100 ಹಾಸಿಗೆಯ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೊದಲು ಲಸಿಕೆ ಹಾಕಲು ಕೇಂದ್ರ ಸರ್ಕಾರ ಸಿದ್ಧವಿತ್ತು. ಆದರೆ ಕೆಲ ರಾಜ್ಯಗಳು ತಾವೇ ಲಸಿಕೆ ನೀಡುವುದಾಗಿ ಹೇಳಿದ್ದವು. ಹೀಗಾಗಿ ರಾಜ್ಯಗಳಿಗೆ ಜವಾಬ್ದಾರಿ ನೀಡಲಾಗಿತ್ತು. ಇದೀಗ ಮತ್ತೆ ಲಸಿಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಿವೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡುವ ಜವಾಬ್ದಾರಿಯನ್ನು ಕೇಂದ್ರವೇ ಹೊತ್ತುಕೊಂಡಿದೆ. ಜೂ.21ರಿಂದ ಲಸಿಕೆ ನೀಡಲು ಶುರುಮಾಡಲಾಗುವುದು. ನವೆಂಬರ್- ಡಿಸೆಂಬರ್ ನೊಳಗೆ ಎಲ್ಲರಿಗೂ ಲಸಿಕೆ ನೀಡುವುದನ್ನು ಪೂರ್ಣಗೊಳಿಸಲಾಗುವುದು ಎಂದರು.

hbl vedanta hospital kims 4 medium

ಕೊರೊನಾ 3ನೇ ಅಲೆ ಬರುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಎದುರಿಸಲು ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. 2ನೇ ಅಲೆ ಬರುತ್ತದೆ ಎಂದು ತಜ್ಞರ ತಂಡ ತಿಳಿಸಿತ್ತು. ಆದರೆ ಇಷ್ಟೊಂದು ಗಂಭೀರವಾಗಿರುತ್ತದೆ. ಇಷ್ಟೊಂದು ಸಮಸ್ಯೆಯಾಗುತ್ತದೆ ಎಂದು ಯಾವ ತಜ್ಞರೂ ತಿಳಿಸಿರಲಿಲ್ಲ. ಹೀಗಾಗಿ ಪ್ರಾರಂಭದಲ್ಲಿ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆಯಾಗಿತ್ತು. ಮೊದಲು ಇದ್ದ ಆಕ್ಸಿಜನ್ ಬೇಡಿಕೆಗೂ ಕೊರೊನಾ ತೀವ್ರವಾದಾಗ ಆಕ್ಸಿಜನ್ ಬೇಡಿಕೆ ಅಜಗಜಾಂತರವಾಗಿತ್ತು. ಬರೀ 8-10 ದಿನಗಳಲ್ಲಿ ಆಕ್ಸಿಜನ್ ಸಮಸ್ಯೆ ನಿರ್ವಹಿಸಿದೆವು. ವಿದೇಶಗಳಿಂದಲೂ ತರಿಸಿಕೊಂಡೆವು. ಇಲ್ಲೂ ಉತ್ಪಾದನೆ ಹೆಚ್ಚಿಸಿದೆವು. ಇದೀಗ ಆಕ್ಸಿಜನ್ ಸೇರಿದಂತೆ ಯಾವ ಸಮಸ್ಯೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಎಲ್ಲ ವಿಷಯವನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆಗಳಲ್ಲಿ ಗಾಳಿ ಮೂಲಕ ಆಕ್ಸಿಜನ್ ಉತ್ಪಾದನೆ ಮಾಡಲು ಘಟಕಗಳನ್ನು ನಿರ್ಮಿಸಿಕೊಂಡಿದ್ದೇವೆ. 42 ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್‍ಗಳನ್ನು ಮಾಡಲಾಗಿದೆ. ಮುಂದೆ ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆಯಾಗದಂತೆ ನಿರ್ವಹಣೆ ಮಾಡುತ್ತೇವೆ. ವಿರೋಧ ಪಕ್ಷಗಳು ವಿನಾಕಾರಣ ಟೀಕಿಸುತ್ತಿವೆ. ಕೋವಿಡ್ ವಿಷಯದಲ್ಲಿ ರಾಜಕಾರಣ ಸಲ್ಲದು ಎಂದರು.

hbl vedanta hospital kims 5 medium

ವೇದಾಂತ ಆಸ್ಪತ್ರೆ ಕುರಿತು ಮಾತನಾಡಿದ ಪ್ರಹ್ಲಾದ್ ಜೋಶಿ, ಸದ್ಯ 2ನೇ ಅಲೆ ನಿಯಂತ್ರಣದಲ್ಲಿದೆ. ಈ ವೇಳೆ ಆಸ್ಪತ್ರೆ ಅಗತ್ಯವಿತ್ತಾ ಎಂಬ ಪ್ರಶ್ನೆಯನ್ನೂ ಕೆಲವರು ಕೇಳಿದ್ದಾರೆ. ಆದರೆ ವೇದಾಂತ ಕಂಪನಿಯವರು ನಮ್ಮ ಮನವಿ ಮೇರೆಗೆ ಆಸ್ಪತ್ರೆ ನಿರ್ಮಿಸಿಕೊಟ್ಟಿದ್ದಾರೆ. ಮೊದಲೇ ನಿರ್ಮಿಸಿ ಕೊಡಲು ಸಿದ್ಧವಿದ್ದರು. ಆದರೆ ಎಲ್ಲಿ ನಿರ್ಮಿಸಬೇಕೆಂಬ ಗೊಂದಲದಿಂದಾಗಿ ಕೊಂಚ ತಡವಾಯಿತು. 2ನೇ ಅಲೆಯ ಕೋವಿಡ್ ಸೋಂಕಿತರು ಕಡಿಮೆಯಾಗುತ್ತಿದ್ದಾರೆ. ಅವರನ್ನು ಇಲ್ಲಿಗೆ ಸ್ಥಳಾಂತರಿಸಿ ಅನ್ಯ ರೋಗಿಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಬಹುದಾಗಿದೆ. ಅಲ್ಲದೆ 3ನೇ ಅಲೆ ಬರುತ್ತದೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಈ ಆಸ್ಪತ್ರೆಯನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದರು.

ಮೇಕ್ ಶಿಪ್ಟ್ ನಡಿ ಬರೀ 13 ದಿನದಲ್ಲಿ ವೇದಾಂತ ಕಂಪನಿಯೂ ಈ ಆಸ್ಪತ್ರೆಯನ್ನು ನಿರ್ಮಿಸಿದ್ದು. ಇನ್ನೂ 15-20 ವರ್ಷ ಈ ಆಸ್ಪತ್ರೆ ಬಾಳಿಕೆಗೆ ಬರಲಿದೆ. ಅಲ್ಲಿವರೆಗೂ ಕಿಮ್ಸ್ ಆಡಳಿತ ಈ ಆಸ್ಪತ್ರೆಯನ್ನು ಬಳಸಿಕೊಳ್ಳಬೇಕು. ವೈದ್ಯರು ಸೇರಿದಂತೆ ಸಿಬ್ಬಂದಿ, ಔಷಧಿಯನ್ನು ಕಿಮ್ಸ್ ಕೊಡಲಿದೆ. ಉಳಿದ ನಿರ್ವಹಣೆಯನ್ನೂ ವೇದಾಂತ ಕಂಪನಿಯವರೇ ನಿರ್ವಹಿಸಲಿದ್ದಾರೆ ಎಂದು ಜೋಶಿ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ ನಮ್ಮ ಮನವಿಗೆ ಸ್ಪಂದಿಸಿ ಆಸ್ಪತ್ರೆ ನಿರ್ಮಿಸಿಕೊಟ್ಟಿದ್ದಕ್ಕೆ ವೇದಾಂತ ಕಂಪನಿಗೆ ಧನ್ಯವಾದ ಅರ್ಪಿಸಿದ್ದಾರೆ.

hbl vedanta corona hospital kims 4 e1623511668900

ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಮೊದಲು ಇದ್ದ ಆಕ್ಸಿಜನ್ ಬೇಡಿಕೆ ಈಗಿಲ್ಲ. ಆಸ್ಪತ್ರೆಗೆ ಅಗತ್ಯವಿರುವಷ್ಟು ಬಳಸಿಕೊಂಡು ಉಳಿದ ಆಕ್ಸಿಜನ್‍ನ್ನು ಕೈಗಾರಿಕೆಗಳಿಗೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೋವಿಡ್ ವಿಷಯದಲ್ಲಿ ಸಾಕಷ್ಟು ನಿಯಂತ್ರಣ ಸಾಧಿಸಿದ್ದೇವೆ. ಪಾಸಿಟಿವಿಟಿ ದರ ಇಳಿಕೆಯಾಗಿದೆ. 14ರಿಂದ ಅನ್‍ಲಾಕ್ ಮಾಡಲಾಗುತ್ತಿದೆ, ಹಾಗಂತ ಜನತೆ ಮೈಮರೆಯಬಾರದು. ಇನ್ನು ಮುಂದೆಯೂ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮುಂದುವರಿಸಬೇಕು ಎಂದರು.

ಬ್ಲ್ಯಾಕ್ ಫಂಗಸ್ ನಿಯಂತ್ರಣವಾಗುತ್ತಿದೆ. ಬ್ಲ್ಯಾಕ್ ಫಂಗಸ್ ರೋಗಿಗಳು ಗುಣಮುಖರಾಗುತ್ತಿದ್ದಾರೆ. ಅದಕ್ಕೆ ಬೇಕಾದ ವೈಯಲ್ಸ್ ಗಳು ಲಭ್ಯವಾಗುತ್ತಿವೆ. ಕೋವಿಡ್ ವಿಷಯದಲ್ಲಿ ಕಿಮ್ಸ್ ಕಾರ್ಯ ಶ್ಲಾಘನೀಯ ಎಂದರು.

hbl vedanta corona hospital kims 1 e1623511711472

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಕೋವಿಡ್ ವಿಷಯದಲ್ಲಿ ಯಾರೂ ರಾಜಕಾರಣ ಮಾಡಬಾರದು. ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಅದರೊಂದಿಗೆ ಕೈಜೋಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಶಾಸಕರಾದ ಪ್ರದೀಪ್ ಶೆಟ್ಟರ್, ಅಮೃತ್ ದೇಸಾಯಿ, ಪ್ರಸಾದ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೇರಿದಂತೆ ಇತರರು ಇದ್ದರು. ಲಂಡನ್‍ನಲ್ಲಿರುವ ವೇದಾಂತ ಕಂಪನಿಯ ಚೇರಮನ್ ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವೇದಾಂತ ಕಂಪನಿಯ ಚೇರಮನ್ ಅನಿಲ್ ಅಗ್ರವಾಲ್ ಮಾತನಾಡಿ, ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಉತ್ತಮ ಕೆಲಸ ಮಾಡಿದೆ. ಅದರಲ್ಲೂ ಧಾರವಾಡ ಜಿಲ್ಲೆಯಲ್ಲಿ ಯಾವೊಂದು ಸಮಸ್ಯೆಯಾಗದಂತೆ ಕೋವಿಡ್ ನಿರ್ವಹಿಸಿರುವುದು ಶ್ಲಾಘನೀಯ. ಇದಕ್ಕಾಗಿ ಅಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಅಭಿನಂದನೆ ತಿಳಿಸುವುದಾಗಿ ಹೇಳಿದರು.

hbl vedanta corona hospital kims 5 e1623511747114

ರಾಜ್ಯದಲ್ಲಿ ಎರಡು ಆಸ್ಪತ್ರೆಗಳನ್ನು ನಿರ್ಮಿಸಿಕೊಟ್ಟಿದ್ದೇವೆ. ಕೋವಿಡ್ ಆಸ್ಪತ್ರೆ ನಿರ್ಮಿಸಿಕೊಡಲು ತಮ್ಮ ಕಂಪನಿಗೆ ಅವಕಾಶ ಕೊಟ್ಟಿದ್ದು ನಮಗೆ ಸಂತಸವನ್ನುಂಟು ಮಾಡಿದೆ. ಸಾಮಾಜಿಕ ಕಾರ್ಯದ ವಿಷಯದಲ್ಲಿ ಇನ್ನೂ ಏನಾದರೂ ನೆರವು ಬೇಕಾದರೆ ನಿಸ್ಸಂದೇಹವಾಗಿ ಮಾಡಿಕೊಡಲು ಸಿದ್ಧ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಅಮೃತ ದೇಸಾಯಿ, ಪ್ರಸಾದ ಅಬ್ಬಯ್ಯ, ಪ್ರದೀಪ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ಹಲವರಿದ್ದರು.

hbl vedanta corona hospital kims 2 e1623511797603

13 ದಿನದಲ್ಲಿ ನಿರ್ಮಾಣವಾದ ಸುಸಜ್ಜಿತ ಆಸ್ಪತ್ರೆ
ಚಿತ್ರದುರ್ಗದ ವೇದಾಂತ ಕಂಪನಿಯ ಅನಿಲ್ ಅಗರವಾಲ್ ಪೌಂಡೇಷನ್ ಕೋವಿಡ್ ನೆರವು ನೀಡುವುದಕ್ಕಾಗಿ ದೇಶದಲ್ಲಿ ಒಟ್ಟು ಹತ್ತು ಆಸ್ಪತ್ರೆಯನ್ನು ನಿರ್ಮಿಸಿಕೊಟ್ಟಿದೆ. ರಾಜ್ಯದ ಚಿತ್ರದುರ್ಗ ಹಾಗೂ ಹುಬ್ಬಳ್ಳಿ ಕಿಮ್ಸ್ ನಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಿಸಿದೆ. ಕಿಮ್ಸ್ ನಲ್ಲಿನ ಆಸ್ಪತ್ರೆ 100 ಹಾಸಿಗೆಯ ಆಸ್ಪತ್ರೆ. ಇದರಲ್ಲಿ 80 ಆಕ್ಸಿಜನ್ ಬೆಡ್‍ಗಳಿದ್ದರೆ, 20 ಐಸಿಯು ಬೆಡ್‍ಗಳಿವೆ. 20 ಐಸಿಯು ಬೆಡ್‍ಗಳ ಪೈಕಿ 10 ವೆಂಟಿಲೇಟರ್ ಬೆಡ್ ಗಳನ್ನು ನಿರ್ಮಾಣ ಮಾಡಲಾಗಿದೆ.

TAGGED:Corona VirushubballiJagdish Shettarkimsprahlad joshiPublic TVVedanta Hospitalಕಿಮ್ಸ್ಕೊರೊನಾ ವೈರಸ್ಜಗದೀಶ್ ಶೆಟ್ಟರ್ಪಬ್ಲಿಕ್ ಟಿವಿಪ್ರಹ್ಲಾದ್ ಜೋಶಿವೇದಾಂತ ಆಸ್ಪತ್ರೆಹುಬ್ಬಳ್ಳಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Complaint against Ramola of Bharjari Bachelors
ಭರ್ಜರಿ ಬ್ಯಾಚುಲರ‍್ಸ್ ರಮೋಲಾ ವಿರುದ್ಧ ದೂರು
Cinema Latest TV Shows
tamannaah bhatia 3
ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?
Bollywood Cinema Latest Top Stories
Sunita Ahuja Govinda
ಬಾಲಿವುಡ್‌ ನಟ ಗೋವಿಂದ ಸಂಸಾರದಲ್ಲಿ ಬಿರುಕು; ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Bollywood Cinema Latest Main Post
Chiranjeevis 70th Birthday Ram Charan
ಮೆಗಾಸ್ಟಾರ್‌ಗೆ 70ರ ಸಂಭ್ರಮ: ರಾಮ್‌ ಚರಣ್ ಸೆಲಬ್ರೇಷನ್
Cinema Latest South cinema Top Stories
Vijays Rally in Madurai Thousands Gather for TVK Conference
ತಮಿಳುನಾಡಲ್ಲಿ ವಿಜಯ್ ದಳಪತಿ ರಣಕಹಳೆ
Cinema South cinema

You Might Also Like

Dharmasthala Mask Man
Bengaluru City

ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ್ದ ಚಿನ್ನಯ್ಯ

Public TV
By Public TV
3 minutes ago
Sujatha Bhat Banashankari Police Protection
Bengaluru City

ನಂಗೆ ಆರೋಗ್ಯ ಸರಿಯಿಲ್ಲ, ಬೆದರಿಕೆಯಿದೆ – ರಕ್ಷಣೆ ಕೊಡಿ ಅಂತಾ ಪೊಲೀಸರಿಗೆ ಸುಜಾತ ಭಟ್ ಮನವಿ

Public TV
By Public TV
16 minutes ago
011
Dakshina Kannada

ನೀರಿನಲ್ಲಿ ಮುಳುಗಿದ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ʻಚಿನ್ನಯ್ಯʼ – ಮುಸುಕುಧಾರಿಯ ಅಸಲಿಯತ್ತು ಬಯಲು

Public TV
By Public TV
32 minutes ago
Dharmasthala 5
Bengaluru City

ಎಲ್ಲಿಂದಲೋ ಬುರುಡೆ ತಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ!

Public TV
By Public TV
52 minutes ago
Girish Mattannavar Chakravarthi Sulibele
Bengaluru City

ಧರ್ಮಸ್ಥಳ ಪರ ಧ್ವನಿ ಎತ್ತಿದವ್ರನ್ನ ಹೇಗೆ ಮಟ್ಟಹಾಕಬೇಕೆಂದು ಮಟ್ಟಣ್ಣನವರ್ ಪ್ಲ್ಯಾನ್ ಮಾಡ್ತಿದ್ರು: ಸೂಲಿಬೆಲೆ

Public TV
By Public TV
53 minutes ago
Dharmasthala Mass Burails Mask Man Chinnaiah
Dakshina Kannada

ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ: ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?