Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಷ್ಟೇ ಪ್ರಭಾವ ಬೀರಿದ್ರೂ ಆರೋಪಿಗಳ ರಕ್ಷಣೆ ಇಲ್ಲ: ನಿರಾಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಎಷ್ಟೇ ಪ್ರಭಾವ ಬೀರಿದ್ರೂ ಆರೋಪಿಗಳ ರಕ್ಷಣೆ ಇಲ್ಲ: ನಿರಾಣಿ

Karnataka

ಎಷ್ಟೇ ಪ್ರಭಾವ ಬೀರಿದ್ರೂ ಆರೋಪಿಗಳ ರಕ್ಷಣೆ ಇಲ್ಲ: ನಿರಾಣಿ

Public TV
Last updated: February 23, 2021 12:58 pm
Public TV
Share
3 Min Read
Murugesh NIrani 2
SHARE

– ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ

ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲೂಕಿನ ಹಿರೇನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸ್ಫೋಟವಾಗಿ ಆರು ಮಂದಿ ಸಾವನ್ನಪ್ಪಿರುವ ಘಟನೆಗೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್.ಆರ್ ನಿರಾಣಿ ಆಘಾತ ವ್ಯಕ್ತಪಡಿಸಿದ್ದಾರೆ.

ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಮೃತರ ಕುಟುಂಬ ಸದಸ್ಯರಿಗೆ ಮತ್ತು ಗಾಯಾಳುಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ. ಶಿವಮೊಗ್ಗ ಸ್ಫೋಟದ ನಂತರ ಮತ್ತೊಂದು ದುರಂತ ನಡೆದಿರುವುದು ತನಗೆ ತೀವ್ರ ನೋವಾಗಿದೆ. ಜಿಲಿಟಿನ್ ಕಡ್ಡಿ ಸ್ಫೋಟದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿರುವುದು ತುಂಬಾ ನೋವು ತಂದಿದೆ ಎಂದು ಕಂಬನಿ ಮಿಡಿದಿದ್ದಾರೆ.

Hirenagavalli 5

ಇದು ಅತ್ಯಂತ ದುರದೃಷ್ಟಕರ ಘಟನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಗೊಂಡ ವ್ಯಕ್ತಿಗೆ ಸರ್ಕಾರ ಎಲ್ಲಾ ಸಹಾಯವನ್ನು ನೀಡಲಿದೆ ಎಂದು ಅಭಯ ನೀಡಿದ್ದಾರೆ.

ಯಾರ ರಕ್ಷಣೆಯೂ ಇಲ್ಲ: ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಕಠಿಣ ಕಾನೂನು ತೆಗೆದುಕೊಳ್ಳಲಾಗುವುದು. ಸರ್ಕಾರ ಸಂಪೂರ್ಣ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಶಿವಮೊಗ್ಗ ಸ್ಫೋಟಕ್ಕೆ ಮೊದಲೇ ಸ್ಪೋಟಕಗಳನ್ನು ಸಂಗ್ರಹಿಸಿಡಲಾಗಿತ್ತೇ? ಎಂಬ ಬಗ್ಗೆ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಯಾರು ಎಷ್ಟೇ ಪ್ರಭಾವ ಬೀರಿದರೂ ಆರೋಪಿಗಳನ್ನು ರಕ್ಷಣೆ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

CKB Blast 2 copy

ಕೆಲವು ಅಧಿಕೃತ ಕೆಲಸಗಳಿಂದಾಗಿ ನಾನು ದೆಹಲಿಯಲ್ಲಿದ್ದೇನೆ. ಇಂದು ಸಂಜೆ ಬೆಂಗಳೂರಿಗೆ ಬಂದಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಸಚಿವರಾದ ಬಸವರಾಜ್ ಬೊಮ್ಮಾಯಿ, ಡಾ.ಸುಧಾಕರ್, ಡಿಸಿ, ಎಸ್ಪಿ ಮತ್ತು ನಮ್ಮ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಭವಿಷ್ಯದಲ್ಲಿ ಇಂಥ ದುರಂತಗಳು ಮರುಕಳಿಸದಂತೆ ಎಚ್ಚರವಹಿಸಲು ನುರಿತ ಕೆಲಸಗಾರರಿಗೆ ತರಬೇತಿ ನೀಡುವುದು ಮತ್ತು ಗಣಿಗಾರಿಕೆ ಶಾಲೆಯ ರಚನೆಯ ಮಹತ್ವದ ಬಗ್ಗೆ ನಿರಾಣಿ ಪುನರುಚ್ಚರಿಸಿದರು.

CKB Blast 1 copy

ಹೊಸ ಕಾನೂನು: ಇನ್ನು ಮುಂದೆ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಸಲು ಸರ್ಕಾರದಿಂದ ಅನುಮತಿ ಪಡೆದವರು ಮಾತ್ರ ಬಳಕೆ ಮಾಡಲು ಹೊಸ ಕಾನೂನು ಜಾರಿ ಮಾಡುತ್ತೇವೆ. ಕೆಲವರು ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದಲೇ ಇಂಥ ಘಟನೆಗಳು ನಡೆಯುತ್ತವೆ ಎಂದು ಹೇಳಿದರು.

Hirenagavalli 2

ಇದನ್ನು ತಡೆಯಲು ಸದ್ಯದಲ್ಲೇ ಹೊಸ ಕಾನೂನು ಜಾರಿ ಮಾಡಲಾಗುವುದು. ಸರ್ಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಫೋಟಕ ವಸ್ತುಗಳನ್ನು ಬಳಸುವ ಕಾನೂನು ಜಾರಿ ಮಾಡಲಾಗುವುದು. ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಇಂಥಹುದರಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.

ಅಕ್ರಮ ಗಣಿಗಾರಿಕೆಗಳನ್ನ ಸಕ್ರಮ ಮಾಡಲು ಹೊರಟ ದುರಾಡಳಿತಕ್ಕೆ ಕಾರ್ಮಿಕರು ಬಲಿ: ಸಿದ್ದರಾಮಯ್ಯ
– ಸರ್ಕಾರ ಯಾರನ್ನ ರಕ್ಷಿಸುತ್ತಿದೆ?https://t.co/y5vpcOMyE5#Siddaramaiah #Chikkaballapur #Hirenagavalli #KannadaNews @CMofKarnataka @siddaramaiah

— PublicTV (@publictvnews) February 23, 2021

ಈ ಘಟನೆಗಳು ನುರಿತ ಕೆಲಸಗಾರರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನಮಗೆ ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಗಣಿಗಾರಿಕೆ ಸ್ಥಳಗಳಲ್ಲಿ ಜಿಲಿಟಿನ್ ಕಡ್ಡಿಗಳು ಸ್ಫೋಟಕಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಜೊತೆಗೆ ಗಣಿಗಾರಿಕೆ ಪ್ರದೇಶಗಳಲ್ಲಿನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಮತ್ತು ಅಕ್ರಮಗಳಲ್ಲಿ ಭಾಗಿಯಾಗಿರುವ ಯಾರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಎಷ್ಟೇ ದೊಡ್ಡವರಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನೇ ಸರ್ಕಾರ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಪುನಃ ಪುನಃ ಮರುಕಳಿಸುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಘಟನೆ ನಡೆದ ನಂತರ ಕೆಲವರು ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಪೊಲೀಸರು ತಕ್ಷಣವೇ ಅವರನ್ನು ಬಂಸುವ ವಿಶ್ವಾಸವಿದೆ. ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.

TAGGED:chikkaballapurHirenagavalliMurugesh niraniPublic TVSudhakarಚಿಕ್ಕಬಳ್ಳಾಪುರಪಬ್ಲಿಕ್ ಟಿವಿಮುರುಗೇಶ್ ನಿರಾಣಿಸುಧಾಕರ್ಹಿರೇನಾಗವಲ್ಲಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Elephant
Districts

ಆರು ಕುಮ್ಕಿ ಆನೆಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಪುಂಡಾನೆ – ಸೆರೆ ಬಳಿಕ ಹಗ್ಗ ಕಿತ್ತೆಸೆದು ಕಾಡಿಗೆ ಜೂಟ್‌!

Public TV
By Public TV
11 minutes ago
yathindra siddaramaiah
Districts

ನಮ್ಮ ತಂದೆಯೇ 5 ವರ್ಷ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ

Public TV
By Public TV
15 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ವಿನಯ್‌ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು?

Public TV
By Public TV
18 minutes ago
Vinay Kulkarni
Bengaluru City

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

Public TV
By Public TV
47 minutes ago
Davanagere CPI Death In Car Accident
Crime

ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು

Public TV
By Public TV
57 minutes ago
Pawan Khera
Court

ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?