ಬೆಂಗಳೂರು: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
- Advertisement 2
ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಅಧಿಕಾರಿ ನಾಗರಾಜು ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಎಂಎಸ್ ಎನ್ ಬಾಬು ನಿವಾಸದ ಮೇಲೆ ದಾಳಿ ನಡೆದಿದೆ.
- Advertisement 3
- Advertisement 4
ಇಬ್ಬರಿಗೆ ಸೇರಿದ ಐದು ಜಾಗದಲ್ಲಿ ಎಸಿಬಿ ದಾಳಿ ನಡೆದಿದೆ. ದಾಳಿ ವೇಳೆ ನಾಗೇಂದ್ರ ಮನೆಯಲ್ಲಿ 9 ಲಕ್ಷ ನಗದು 1.5 ಕೆಜಿ ಚಿನ್ನ, ಬಾಬು ಮನೆಯಲ್ಲಿ 5 ಲಕ್ಷ ನಗದು 1.5 ಕೆಜಿ ಚಿನ್ನ ಪತ್ತೆಯಾಗಿದೆ. ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದೆ.