Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಎಸ್‍ಐ ಆತ್ಮಹತ್ಯೆ – ಬಿಜೆಪಿ ಹಿಂಬಾಲಕರನ್ನು ಹದ್ದುಬಸ್ತಿನಲ್ಲಿ ಇಡಬೇಕೆಂದ ಕುಮಾರಸ್ವಾಮಿ

Public TV
Last updated: August 1, 2020 4:09 pm
Public TV
Share
2 Min Read
Hassan SI
SHARE

ಹಾಸನ: ಚನ್ನರಾಯಪಟ್ಟಣದ ಸಬ್ ಇನ್ಸ್‌ಪೆಕ್ಟರ್‌ ಕಿರಣ್ ಕುಮಾರ್ ಆತ್ಮಹತ್ಯೆಯನ್ನು ಉನ್ನತ ಮಟ್ಟದ ಸಂಸ್ಥೆಯಿಂದ ತನಿಖೆ ನಡೆಸಿ ಸತ್ಯಾಂಶ ಹೊರಬೇಕು. ಹಾಗೂ ಬಿಜೆಪಿ ಹಿಂಬಾಲಕರನ್ನು ಹದ್ದುಬಸ್ತಿನಲ್ಲಿ ಇಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿಯವರು ಆಕ್ರೋಶ ಹೊರಹಾಕಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯ ಓರ್ವ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ ಘಟನೆ, ಇಡೀ ಜಿಲ್ಲೆಯಲ್ಲಿ ಅಧಿಕಾರಿಗಳು ಎಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನುವುದಕ್ಕೆ ಉದಾಹರಣೆಯಾಗಿದೆ. ರಾಜಕೀಯ ಒತ್ತಡ, ವೈಯಕ್ತಿಕ ಒತ್ತಡ ಇಲ್ಲವೆ ಮೇಲಾಧಿಕಾರಿಗಳ ಒತ್ತಡಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ. ಒಟ್ಟಾರೆ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ನಿಜ ಎಂದು ಹೇಳಿದರು.

hsn si

ಇದು ಜಿಲ್ಲೆಯ ಕೆಳ ಮಟ್ಟದಿಂದ ಮೇಲ್ಮಟ್ಟದ ಅಧಿಕಾರಿಗಳವರೆಗೂ ಈ ರೀತಿಯ ಒತ್ತಡಗಳು ನಡೆಯುತ್ತಿದೆ. ಈ ಸಬ್ ಇನ್ಸ್‌ಪೆಕ್ಟರ್ ಘಟನೆಯನ್ನು ಸರ್ಕಾರವು ಹಗುರವಾಗಿ ಪರಿಗಣಿಸದೇ ಈ ಘಟನೆಯನ್ನು ಉನ್ನತ ಮಟ್ಟದ ಸಂಸ್ಥೆಯಿಂದ ನಿಷ್ಪಕ್ಷಪಾತವಾಗಿ ತನಿಖೆ ಮಾಡಿಸಿ ಸತ್ಯಾಂಶ ಹೊರಬರಬೇಕು. ಇದನ್ನು ಗೃಹ ಇಲಾಖೆಯು ಕಠಿಣವಾಗಿ ಮತ್ತು ತೀವ್ರವಾಗಿ ಪರಿಗಣಿಸಿ ತನಿಖೆ ಮಾಡುವಂತೆ ಒತ್ತಾಯಿಸಿದರು. ಇಲ್ಲಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹೊಸದಾಗಿ ನೇಮಕವಾದ ನಂತರ ಈ ಘಟನೆ ನಡೆದಿದೆ ಎಂದರು. ಇದನ್ನು ಓದಿ: ಚನ್ನರಾಯಪಟ್ಟಣ ಪಿಎಸ್‍ಐ ಆತ್ಮಹತ್ಯೆ- ಉನ್ನತ ಮಟ್ಟದ ತನಿಖೆಗೆ ಎಚ್‍ಡಿಕೆ ಆಗ್ರಹ

BJP Flag Final 6

ಜೆ.ಸಿ. ಮಾಧುಸ್ವಾಮಿಯವರು ಇಲ್ಲಿ ಜಿಲ್ಲಾ ಮಂತ್ರಿಯಾಗಿ 10 ತಿಂಗಳು ಇದ್ದರು. ಜನಪ್ರತಿನಿಧಿಗಳಿಗೆ ಮತ್ತು ಎಲ್ಲರಿಗೂ ಸ್ಪಂದಿಸುತ್ತಿದ್ದರು. ಇತ್ತೀಚೆಗೆ ಕಳೆದ ಎರಡು ತಿಂಗಳಿನಿಂದ ಹಾಸನ ಜಿಲ್ಲೆಯಲ್ಲಿ ಏನಾಗಿದೆ? ಬಿಜೆಪಿ ಪಕ್ಷದ ಹಿಂಬಾಲಕರು ಸಕಲೇಶಪುರ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧೆ ಮಾಡಿದ ಬಿಜೆಪಿ ಅಭ್ಯರ್ಥಿ ಮತ್ತು ಅವರ ಸಹಚರರು ಕ್ಷೇತ್ರಕ್ಕೆ ಬಂದು ಕೆಳ ಮಟ್ಟದ ಅಧಿಕಾರಿಗಳಿಂದ ಹಿಡಿದು ಮೇಲಿನ ಮಟ್ಟದ ಅಧಿಕಾರಿಗಳವರೆಗೂ ಎಲ್ಲಾ ರೀತಿಯ ಒತ್ತಡವನ್ನು ಹಾಕಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಗುತ್ತಿಗೆ ಕೊಡಬೇಕು. ನಾವು ಹೇಳಿದ ಕೆಲಸವನ್ನೇ ಮಾಡಬೇಕು. ನಮಗೆ ಹೇಳದೇ ಕೆಲಸ ನಿರ್ವಹಿಸುವಂತಿಲ್ಲ ಎಂದೆಲ್ಲ ಕಿರುಕುಳ ನೀಡಿದ್ದಾರೆ ಎಂದು ದೂರಿದರು.

madhuswamy JCM

ಈ ಎಲ್ಲ ಬಗ್ಗೆ ಅಧಿಕಾರಿಗಳು ನಮ್ಮ ಬಳಿ ಬಂದು ತಮ್ಮ ಅಸಹಾಯಕತೆಯನ್ನು ತೋಡಿಕೊಳ್ಳುತ್ತಿದ್ದಾರೆ. ಹೀಗೆ ಮುಂದುವರಿದರೆ ಜಿಲ್ಲೆಯಲ್ಲಿ ಆಡಳಿತ ನಡೆಯುವುದು ಹೇಗೆ? ಕಾನೂನು ವ್ಯವಸ್ಥೆ ಏನಾಗುವುದು ಎಂದು ಕಿಡಿಕಾರಿದರು.

TAGGED:bjphassanHK KumaraswamyinvestigationPublic TVSI caseಎಸ್‍ಐ ಪ್ರಕರಣತನಿಖೆಪಬ್ಲಿಕ್ ಟಿವಿಬಿಜೆಪಿಹಾಸನಹೆಚ್.ಕೆ. ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
22 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
32 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
46 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
1 hour ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
1 hour ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?