Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್

Crime

ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್

Public TV
Last updated: October 8, 2020 11:22 am
Public TV
Share
3 Min Read
Hathras Sandeep
SHARE

– ನಮ್ಮಿಬ್ಬರ ಮಧ್ಯೆ ಗೆಳತನವಿತ್ತು
– ಯುವತಿ ತಾಯಿ, ಸೋದರನ ಮೇಲೆ ಗಂಭೀರ ಆರೋಪ

ಲಕ್ನೋ: ಹತ್ರಾಸ್ ಪ್ರಕರಣದದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಸಂದೀಪ್ ಎಸ್‍ಪಿಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಪತ್ರದಲ್ಲಿ ತಾನು ನಿರ್ದೋಷಿಯಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಸಂದೀಪ್ ಒತ್ತಾಯಿಸಿದ್ದಾನೆ. ಸೆಪ್ಟೆಂಬರ್ 7ರಂದು ಜೈಲಿನಿಂದಲೇ ಹತ್ರಾಸ್ ಎಸ್‍ಪಿಗೆ ಪತ್ರ ಬರೆದಿರುವ ಸಂದೀಪ್, ಬಂಧಿತ ಇನ್ನುಳಿದ ಮೂವರು ಸಹ ನಿರಪರಾಧಿಗಳು. ಆಕೆಯ ತಾಯಿ ಮತ್ತು ಸೋದರನ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದಾನೆ.

Hathras

ಪತ್ರದಲ್ಲಿ ಏನಿದೆ?: 19 ವರ್ಷದ ಯುವತಿ ಜೊತೆ ನನ್ನ ಸ್ನೇಹವಿತ್ತು. ಆದ್ರೆ ನಮ್ಮಿಬ್ಬರ ಸ್ನೇಹ ಕುಟುಂಬಸ್ಥರಿಗೆ ಇಷ್ಟವಿರಲಿಲ್ಲ. ಘಟನೆಯ ದಿನ ನಾನು ಸ್ಥಳದಲ್ಲಿದ್ದೆ. ಆದ್ರೆ ಯುವತಿ ತಾಯಿ ಮತ್ತು ಸೋದರ ನನ್ನನ್ನು ಮನೆಗೆ ಕಳುಹಿಸಿದರು. ನಂತರ ನನ್ನನ್ನ ಆರೋಪಿಯೆಂದು ಬಂಧಿಸಿ ಜೈಲಿಗೆ ಕರೆತರಲಾಯ್ತು. ಯುವತಿಯ ಮೇಲೆ ಆಕೆ ತಾಯಿ ಮತ್ತು ಸೋದರ ಹಲ್ಲೆ ನಡೆಸಿದ್ದರಿಂದ ಅವಳು ಸಾವನ್ನಪ್ಪಿದ್ದಾಳೆ. ನಮ್ಮ ಮೇಲೆ ಸುಳ್ಳು ಕೇಸ್ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ.

Hathras Sandeep Letter

ನಮ್ಮಿಬ್ಬರ ಮಧ್ಯೆ ಸ್ನೇಹವಿತ್ತು: ಸಾವನ್ನಪ್ಪಿರುವ ಯುವತಿ ಒಳ್ಳೆಯವಳಾಗಿದ್ದರಿಂದ ಆಕೆಯ ಜೊತೆ ನನ್ನ ಸ್ನೇಹವಿತ್ತು. ಇಬ್ಬರು ಫೋನ್ ನಲ್ಲಿ ಮಾತನಾಡುತ್ತಿದ್ದೇವು. ಹೊಲದಲ್ಲಿ ನನ್ನ ಜೊತೆಗಿನ ಸ್ನೇಹದ ವಿಚಾರವಾಗಿ ಆಕೆಯ ಮೇಲೆ ಕುಟುಂಬಸ್ಥರು ಹಲ್ಲೆ ನಡೆಸಿರುವ ವಿಚಾರ ನನಗೆ ತಿಳಿಯಿತು. ಹಲ್ಲೆ ಆರೋಪದಿಂದ ತಪ್ಪಿಸಿಕೊಳ್ಳಲು ಯುವತಿಯ ತಾಯಿ ಮತ್ತು ಸೋದರ ನಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದರಿಂದ ಸೆಪ್ಟೆಂಬರ್ 20ರಿಂದ ನಾವು ಜೈಲಿನಲ್ಲಿದ್ದೇವೆ. ನಿರಪರಾಧಿಗಳಾದ ನಮಗೆ ನ್ಯಾಯ ನೀಡಬೇಕೆಂದು ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇವೆ ಎಂದು ಸಂದೀಪ್ ಪತ್ರದಲ್ಲಿ ಹೇಳಿದ್ದಾನೆ. ಇನ್ನುಳಿದ ಬಂಧಿತ ರವಿ, ರಾಮು ಮತ್ತು ಲವಕುಶ್ ಅವರ ಸಹಿ ಈ ಪತ್ರದಲ್ಲಿದೆ.

Hathras 2 1

ಎರಡು ಫೋನ್, 104 ಕಾಲ್: ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ಫೋನ್ ಟ್ರ್ಯಾಕ್ ಮಾಡಿರುವ ಪೊಲೀಸರು, ಆರೋಪಿಯು ಯುವತಿಯೊಂದಿಗೆ ನಿರಂತರವಾಗಿ ದೂರವಾಣಿ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಹೆಸರಿನಲ್ಲಿ ಸಂದೀಪ್ ಗೆ ಒಂದೇ ಫೋನ್ ನಂಬರಿನಿಂದ ನಿಯಮಿತವಾಗಿ ಕರೆಗಳು ಬರುತ್ತಿದ್ದವು. ಈ ದೂರವಾಣಿ ಸಂಭಾಷಣೆಗಳು 2019 ಅಕ್ಟೋಬರ್ 13ರಿಂದ ಪ್ರಾರಂಭವಾಗಿವೆ. ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ದೂರದಲ್ಲಿರುವ ಚಂದಪಾ ಪ್ರದೇಶದಲ್ಲಿರುವ ಸೆಲ್ ಟವರ್ ಗಳಿಂದ ಹೆಚ್ಚಿನ ಕರೆಗಳನ್ನು ಮಾಡಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಇದನ್ನೂ ಓದಿ: ಹತ್ರಾಸ್‌ ಕೇಸ್‌ –  ಸಂಚಲನ ಸೃಷ್ಟಿ‌ಸಿದ್ದ ವೆಬ್‌ಸೈಟ್‌ ದಿಢೀರ್‌ ಬಂದ್

Hatras

ಎರಡು ಫೋನ್ ನಂಬರ್ ಗಳ ನಡುವೆ 62 ಔಟ್ ಗೋಯಿಂಗ್ ಮತ್ತು 42 ಇನ್ ಕಮಿಂಗ್ ಕಾಲ್ ಗಳು ಬಂದಿದ್ದು, ಒಟ್ಟು 104 ಬಾರಿ ಸಂಪರ್ಕಸಿರುವುದು ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆರೋಪಿ ನಡುವೆ ನಿರಂತರ ಸಂಪರ್ಕ ಇತ್ತು ಎಂಬುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹತ್ರಾಸ್ ಯುವತಿ ಮೇಲೆ ಅತ್ಯಾಚಾರವಾಗಿಲ್ಲ – ಶಾಕಿಂಗ್ ಹೇಳಿಕೆ ನೀಡಿದ ಐಜಿ

hathras 2

ಏನಿದು ಪ್ರಕರಣ?: ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ

hathras

ಯುವತಿ ಸಾವನ್ನಪ್ಪಿದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ಮಧ್ಯೆ ಉತ್ತರಪ್ರದೇಶದ ಪೊಲೀಸರು ಯುವತಿಯ ಕುಟುಂಬಕ್ಕೆ ತಿಳಿಯದಂತೆ ಮೃತದೇಹವನ್ನು ಅಸ್ಪತ್ರೆಯಿಂದ ಶಿಫ್ಟ್ ಮಾಡಿದ್ದಾರೆ ಎಂದು ಸಹೋದರ ಗಂಭೀರವಾಗಿ ಆರೋಪ ಮಾಡಿದ್ದರು. ಯುವತಿಯ ತಂದೆ ಹಾಗೂ ಸಹೋದರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನಮಗೆ ಗೊತ್ತಾಗಂದೆ ಪೊಲೀಸರು ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿದ್ದಾರೆ ಎಂದು ಕೂಡ ಸಹೋದರ ದೂರಿದ್ದರು. ಇದನ್ನೂ ಓದಿ: ಹತ್ರಾಸ್ ಆರೋಪಿಗಳಿರೋ ಜೈಲಿಗೆ ಬಿಜೆಪಿ ಸಂಸದ ಭೇಟಿ

TAGGED:Hathrashathras casePublic TVsandeepUP Policeuttar pradeshಉತ್ತರ ಪ್ರದೇಶಪಬ್ಲಿಕ್ ಟಿವಿಯುಪಿ ಪೊಲೀಸ್ಸಂದೀಪ್ಹತ್ರಾಸ್ ಕೇಸ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
6 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
17 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
27 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
36 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?