ಎಸ್‍ಪಿಬಿ ಮತ್ತೆ ಈ ನಾಡಿನಲ್ಲಿ ಜನಿಸಲೆಂದು ಪ್ರಾರ್ಥಿಸುತ್ತೇನೆ: ಪೇಜಾವರ ಶ್ರೀ

Public TV
1 Min Read
S. P.B Pejavara Shree

ಹಾಸನ: ಎಸ್‍ಪಿಬಿ ನಿಧನಕ್ಕೆ ಉಡುಪಿಯ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

ಎಸ್‍ಪಿ ಬಾಲಸುಬ್ರಹ್ಮಣ್ಯಂ ರವರ ಸಾವು ಅಪಾರ ನೋವು ತಂದಿದೆ. ದಿಗ್ಗಜ ಹಾಡುಗಾರರನ್ನು ಕಳೆದುಕೊಂಡಿದ್ದೇವೆ. ಎದೆ ತುಂಬಿ ಹಾಡುವೆನು ಕಾರ್ಯಕ್ರಮದಿಂದ ಮನೆ ಮಾತಾಗಿದ್ದರು. ಮನೆ ಮನೆ ಮಕ್ಕಳಲ್ಲಿ ಕೂಡ ಎಸ್‍ಪಿ ಬಾಲಸುಬ್ರಹ್ಮಣ್ಯಂ ಚಿರಪರಿಚಿತರಾಗಿದ್ದವರು. ಮತ್ತೆ ಎಸ್‍ಪಿಬಿ ಈ ನಾಡಿನಲ್ಲಿ ಜನಿಸಲಿ ಎಂದು ಪ್ರಾರ್ಥಿಸುತ್ತೇನೆ. ಶ್ರೀ ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಲಿ ಎಂದು ಸಂತಾಪ ಸೂಚಿಸಿದ್ದಾರೆ.

SPB 2 1

ರಾಮ ಮಂದಿರ ಎರಡು ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಕೊರೊನಾ ಸಂದರ್ಭದಲ್ಲಿಯೂ ರಾಮ ಮಂದಿರ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ರಾಮ ಮಂದಿರ ಹಣ ಬೇರೆ ಖಾತೆಗೆ ವರ್ಗಾವಣೆಯಾಗಿದೆ ಎಂಬ ವಿಷ್ಯವಾಗಿ ಪ್ರತಿಕ್ರಿಯಿಸಿದ ಅವರು, ಯಾವುದೇ ರೀತಿಯಲ್ಲಿ ಅಂತಹ ಕೆಲಸ ಆಗಿಲ್ಲ. ಈ ಬ್ಯಾಕಿಂಗ್ ನಲ್ಲಿ ಆ ರೀತಿ ವ್ಯತ್ಯಯ ಆಗಿರಬಹುದು. ಆ ಬಗ್ಗೆಯೂ ವಿಚಾರಣೆ ನಡೆಯಲಿದೆ. ಕೊರೊನಾ ದಿನದಿಂದ ದಿನಕ್ಕೆ ಹೆಚ್ಚು ಪಸರಿಸುತ್ತಿದ್ದು ಈ ಬಗ್ಗೆ ಜನ ಜಾಗೃತರಾಗಿರಬೇಕು ಎಂದು ತಿಳಿಸಿದ್ದಾರೆ.

Share This Article