Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್.ಟಿ.ಸೋಮಶೇಖರ್ ಕಾರ್ಯ ಶ್ಲಾಘನೀಯ: ನಟ ಉಪೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಸ್.ಟಿ.ಸೋಮಶೇಖರ್ ಕಾರ್ಯ ಶ್ಲಾಘನೀಯ: ನಟ ಉಪೇಂದ್ರ

Bengaluru City

ಎಸ್.ಟಿ.ಸೋಮಶೇಖರ್ ಕಾರ್ಯ ಶ್ಲಾಘನೀಯ: ನಟ ಉಪೇಂದ್ರ

Public TV
Last updated: May 20, 2021 6:39 pm
Public TV
Share
4 Min Read
upendra 2 1
SHARE

– ಸಚಿವರ ವೈಯಕ್ತಿಕ 1 ಲಕ್ಷ ರೂ. ಆರ್ಥಿಕ ಸಹಾಯಕ್ಕೆ ಮೆಚ್ಚುಗೆ
– ಎರಡನೇ ಅಲೆ ಬಗ್ಗೆ ಎಚ್ಚರವಹಿಸಿ- ಸೋಮಶೇಖರ್ ಕರೆ

ಬೆಂಗಳೂರು: ಕೋವಿಡ್-19ನ ಈ ಸಂದರ್ಭದಲ್ಲಿ ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಿಗೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಇದು ಎಲ್ಲರಿಗೂ ಮಾದರಿಯಾಗಿದೆ ಎಂದು ಖ್ಯಾತ ನಟ, ನಿರ್ದೇಶಕರಾದ ಉಪೇಂದ್ರ ಅವರು ಹೇಳಿದರು.

upendra 4

ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೃಪಪಟ್ಟ ಕುಟುಂಬಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ವೈಯಕ್ತಿಕವಾಗಿ ಕೊಡಮಾಡುವ ತಲಾ ರೂ.1 ಲಕ್ಷಗಳ ಪರಿಹಾರವನ್ನು ನೀಡಿ ಮಾತನಾಡಿದ ಉಪೇಂದ್ರ ಅವರು, ಸೋಮಶೇಖರ್ ಅವರು ಕೊಟ್ಟಿದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ ಎಂಬ ಮಾತನ್ನು ಸುಳ್ಳು ಮಾಡುತ್ತಿದ್ದಾರೆ. ಅವರು ಯಾವುದನ್ನೂ ಬಚ್ಚಿಡುತ್ತಿಲ್ಲ. ತಮ್ಮಲ್ಲಿರುವುದನ್ನು ಎಲ್ಲರಿಗೂ ಹಂಚುವ ಮೂಲಕ ಎಲ್ಲರಿಗೂ ಮಾದರಿಯಾಗಿ ನಡೆಯುತ್ತಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಇಂದು ಜಗತ್ತಿಗೇ ಕೊರೋನಾ ಮಹಾಮಾರಿ ಬಂದಿದ್ದು, ಮಾನವೀಯತೆಗೆ ಮತ್ತು ಮನುಷ್ಯತ್ವಕ್ಕೆ ನಾವು ಬೆಲೆ ಕೊಡಬೇಕಿದೆ. ಮನುಷ್ಯತ್ವವನ್ನು ಪರೀಕ್ಷೆ ಮಾಡುವ ಸಮಯ ಇದಾಗಿದೆ. ಈ ನಿಟ್ಟಿನಲ್ಲಿ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಬಗ್ಗೆ ಯಾರಿಗೂ ಭಯ ಬೇಡ, ಎಲ್ಲರೂ ವ್ಯಾಕ್ಸಿನೇಶನ್ ಹಾಕಿಸಿಕೊಳ್ಳಬೇಕು. ಇದರಿಂದ ನಿಮಗೆ ಧೈರ್ಯಬರುವುದಲ್ಲದೆ, ರೋಗನಿರೋಧಕ ಶಕ್ತಿ ಹೆಚ್ಚಲಿದೆ. ಶುಚಿಯಾಗಿರುವುದಲ್ಲದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸದಾ ಧನಾತ್ಮಕ ಚಿಂತನೆಯನ್ನು ಮಾಡಬೇಕು. ಯಾರೂ ಸಹ ಎದೆಗುಂದಬಾರದು ಎಂದು ಉಪೇಂದ್ರ ಅವರು ಸಲಹೆ ನೀಡಿದರು.

upendra 3 1

ಎರಡನೇ ಅಲೆ ಬಗ್ಗೆ ಎಚ್ಚರವಹಿಸಿ-ಸೋಮಶೇಖರ್ ಕರೆ
ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಟಿ. ಸೋಮಶೇಖರ್ ಅವರು, ಈ ಬಾರಿ ಕೊರೊನಾ ಎರಡನೇ ಅಲೆ ಬಹಳ ವೇಗವಾಗಿ ಬೆಳೆಯುತ್ತಿದೆ. ಮೊದಲ ಅಲೆಗಿಂತ ಹೆಚ್ಚಾಗಿ ಸಾವು-ನೋವುಗಳಾಗುತ್ತಿದೆ. ಇದಕ್ಕಾಗಿ ನಾವು ಅನೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನಮ್ಮ ಕ್ಷೇತ್ರದಲ್ಲಿ ಇತ್ತೀಚೆಗೆ ಮೂರ್ನಾಲ್ಕು ಕಡೆ ಟ್ರಯಾಜ್ ಸೆಂಟರ್ ಅನ್ನು ತೆರೆದಿದ್ದೇವೆ. ಇಲ್ಲಿಗೆ ಸೋಂಕಿತರು ಭೇಟಿ ನೀಡಿದರೆ, ಅಲ್ಲಿ ವೈದ್ಯರು ಯಾವ ರೀತಿಯ ಚಿಕಿತ್ಸೆಯ ಅವಶ್ಯಕತೆ ಇದೆ ಎಂಬುದನ್ನು ಸೂಚಿಸುತ್ತಾರೆ. ಮನೆಯಲ್ಲಿದ್ದು ಚಿಕಿತ್ಸೆ ಪಡೆಯಬಹುದಾ ? ಆಸ್ಪತ್ರೆಗೆ ದಾಖಲಾಗಬೇಕಾ? ಆಕ್ಸಿಜನ್ ಅಗತ್ಯವಿದೆಯೇ? ಎಂಬಿತ್ಯಾದಿಗಳನ್ನು ಪರೀಕ್ಷಿಸಿ ಮಾಹಿತಿಯನ್ನು ಕೊಡಲಿದ್ದಾರೆ ಎಂದು ತಿಳಿಸಿದರು.

ಜನಸೇವಾ ಕೇಂದ್ರದಲ್ಲಿ ನಿರ್ಮಲ್ ಜೀ ಅವರು 100 ಬೆಡ್ ವ್ಯವಸ್ಥೆ ಮಾಡಿದ್ದು, ಮಧ್ಯಾಹ್ನದ ಊಟ, ಮೆಡಿಸಿನ್ ಸೇರಿದಂತೆ ಎಲ್ಲ ಸೌಕರ್ಯಗಳನ್ನು ಇಲ್ಲಿ ಮಾಡಲಾಗಿದ್ದು, ಇನ್ನು ಮನೆಯಲ್ಲಿ ಯಾರಾದರೊಬ್ಬರಿಗೆ ಸೋಂಕು ತಗುಲಿದರೆ, ಮನೆಯವರಿಗೆ ಬರಬಾರದು ಎಂಬ ದೃಷ್ಟಿಯಿಂದ ಇಲ್ಲಿಗೆ ಬಂದು ದಾಖಲಾಗಬಹುದು. ಇಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಎಲ್ಲರೂ ಇಲ್ಲಿ ಗುಣಮುಖರಾಗಿ ವಾಪಸ್ ಬರುತ್ತಿದ್ದಾರೆ ಎಂದು ತಿಳಿಸಿದರು.

swamiji

ಕೋವಿಡ್ ಯಾರಿಗೇ ಬಂದರೂ ಮುಚ್ಚಿಡಬೇಡಿ. ಧೈರ್ಯವಾಗಿ ಹೇಳಿಕೊಳ್ಳಿ, ಕೋವಿಡ್ ಬಂದು ವಿಕೋಪಕ್ಕೆ ಹೋದರೆ ಯಾರೂ ರಕ್ಷಣೆ ಮಾಡಲಾಗದು. ಹೀಗಾಗಿ ಕೋವಿಡ್ ಕೇರ್ ಸೆಂಟರ್, ಟ್ರಯಾಜ್ ಗಳನ್ನು ಬಳಸಿಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಿಂದಲೂ ಸರ್ಕಾರಿ ಬೆಡ್ ಗಳನ್ನು ಪಡೆಯುತ್ತಿದ್ದೇವೆ. ಐಸಿಯುಗಳಲ್ಲಿ ವೆಂಟಿಲೇಟರ್ ಗಳು, ಆಕ್ಸಿಜನ್ ಕೊರತೆ ಇತ್ತು. ಆದಿಚುಂಚನಗಿರಿ ಮಹಾಸಂಸ್ಥಾನದ ಸ್ವಾಮೀಜಿ ಅವರ ಬಳಿ ಮನವಿ ಮಾಡಿಕೊಂಡು ಬಿಜಿಎಸ್ ಆಸ್ಪತ್ರೆಯಿಂದ 210 ಬೆಡ್ ಅನ್ನು ಹೆಚ್ಚುವರಿಯಾಗಿ ಪಡೆಯಲಾಗಿದೆ. 43 ವೆಂಟಿಲೇಟರ್ ಬೆಡ್ ಗಳ ಸೌಲಭ್ಯವೂ ಸಿಕ್ಕಿದೆ. ಹೆಚ್ಚುವರಿ ಆಕ್ಸಿಜನ್ ಸಿಲಿಂಡರ್ ಗಳ ಬೇಡಿಕೆಯನ್ನು ಇಡಲಾಗಿದ್ದು, ಅದೂ ಸಹ ಪೂರೈಕೆಯಾಗಲಿದೆ. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದವರಿಗೆ ನಾನು ವೈಯಕ್ತಿಕ ನೆರವು ನೀಡುತ್ತಿದ್ದೇನೆ ಎಂದು ಸಚಿವರು ತಿಳಿಸಿದರು.

ನಾವೂ ಸಹ ಮಾಸ್ಕ್, ಸ್ಯಾನಿಟೈಸರ್ ಗಳನ್ನು ಉಚಿತವಾಗಿ ಕೊಡುತ್ತಿದ್ದೇವೆ. ನಾಗರಿಕರು ಧೈರ್ಯವಾಗಿರಬೇಕು. ಸರ್ಕಾರ ಸಹ ಗ್ರಾಮ ಪಂಚಾಯಿತಿಗಳಿಗೆ 50 ಸಾವಿರ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಇದನ್ನು ಕೋವಿಡ್ ಸಂಬಂಧಪಟ್ಟಂತೆ ಖರ್ಚು ಮಾಡಲು ಬಳಸಬಹುದಾಗಿದೆ. ಜೊತೆಗೆ ಪಂಚಾಯಿತಿ ಅಧ್ಯಕ್ಷರನ್ನೊಳಗೊಂಡ ಟಾಸ್ಕ್ ಫೋರ್ಸ್ ರಚಿಸಲು ಸಹ ಸರ್ಕಾರ ಅನುಮತಿ ನೀಡಿದೆ. ವ್ಯಾಕ್ಸಿನೇಶನ್ ಪ್ರಕ್ರಿಯೆಯನ್ನು ಸಹ ಚುರುಕುಗೊಳಿಸಲಾಗುತ್ತಿದೆ. 2 ಡೋಸ್ ಪಡೆದವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅವರಿಗೆ ಮುಂದೆ ಅಷ್ಟಾಗಿ ಪರಿಣಾಮ ಬೀರದು. ನಮ್ಮ ಕ್ಷೇತ್ರದಲ್ಲಿ ಅಗತ್ಯ ಸೌಲಭ್ಯವನ್ನು ನೀಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಮೊದಲ ಆದ್ಯತೆ ನೀಡಿ, 2ನೇ ಡೋಸ್ ಗೆ ಪ್ರಾಧಾನ್ಯತೆ ನೀಡುತ್ತಿದ್ದೇವೆ. ಎಲ್ಲರೂ ಲಸಿಕೆ ಪಡೆಯಿರಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಗುರೂಜಿಯವರಾದ ಡಾ. ಚಂದ್ರಶೇಖರನಾಥ ಸ್ವಾಮೀಜಿ ಮತ್ತು ಜನಸೇವಾ ಕೇಂದ್ರದ ಅಧ್ಯಕ್ಷರಾದ ನಿರ್ಮಲ್ ಜೀ ಅವರು ಜೊತೆಗಿದ್ದರು.

ಮಠಾಧೀಶರಿಂದ ಸಿಕ್ಕಿತ್ತು ಚಾಲನೆ
ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ||ನಿರ್ಮಲಾನಂದನಾಥ ಸ್ವಾಮೀಜಿರವರು ಹಾಗೂ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸಾಮೀಜಿಗಳು ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಕೋವಿಡ್ 19 ನಿಂದ ಮೃತಪಟ್ಟ 83 ಕುಟುಂಬಗಳಿಗೆ ಸ್ಥಳೀಯ ಶಾಸಕರು ಹಾಗೂ ಸಹಕಾರ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್ ರವರು ವೈಯುಕ್ತಿಕವಾಗಿ ನೀಡುತ್ತಿರುವ ತಲಾ ರೂ.1 ಲಕ್ಷಗಳ ಪರಿಹಾರಧನ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಿದ್ದಾರೆ.

swamiji 1

> ಕುಂಬಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 09 ಹಳ್ಳಿಗಳು ಬರುತ್ತವೆ.
> ಈಗಾಗಲೇ ಕುಂಬಳಗೋಡು ಗ್ರಾಮ ಪಂಚಾಯತಿಯಲ್ಲಿ ಕೋವಿಡ್ 19 ನಿಂದ ಮೃತಪಟ್ಟ 05 ಕುಟುಂಬಗಳಿಗೆ ತಲಾ ರೂ.1 ಲಕ್ಷಗಳ ಪರಿಹಾರವನ್ನು ನೀಡಲಾಗಿದೆ.
> ಇಂದು ಕೋವಿಡ್ 19 ನಿಂದ ಮೃತಪಟ್ಟ 08 ಕುಟುಂಬಗಳಿಗೆ ತಲಾ ರೂ.1 ಲಕ್ಷ ಗಳ ವಿತರಣೆ ಮಾಡಲಾಗಿದೆ.
> ಆಶಾ ಕಾರ್ಯಕರ್ತರಿಗೆ, ವಾಟರ್‍ಮನ್‍ಗಳಿಗೆ ಹಾಗೂ ಕುಂಬಳಗೋಡು ಗ್ರಾಮ ಪಂಚಾಂತಿಯಲ್ಲಿ “ಡಿ”ಗ್ರೂಪ್ ನೌಕರರಿಗೆ ಇಂದು ಫುಡ್ ಕಿಟ್ ವಿತರಣೆ ಮಾಡಲಾಗುತ್ತಿದೆ.
> ಈಗಾಗಲೇ ಹೋಂ ಐಸೋಲೇಷನ್‍ನಲ್ಲಿರುವ 250 ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಲಾಗಿದೆ.
> ಹಳ್ಳಿಗಳಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
> ಸ್ಯಾನಿಟೈಸರ್, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಇವುಗಳ ಬಗ್ಗೆ ಇಲವು ಮೂಡಿಸಲಾಗುತ್ತಿದೆ
> ಕೊರೊನಾ ಬಗ್ಗೆ ಜನರಲ್ಲಿ ಧೈರ್ಯ ತುಂಬುವ ಮೂಲಕ ನಾವಿದ್ದೇವೆ ಎಂದು ಭರವಸೆ ನೀಡುವುದರ ಜೊತೆ ವೈಯಕ್ತಿಕ ನೆರವು ನೀಡುತ್ತಿದ್ದೇವೆ
>  ವಯಸ್ಕರು ಮುನ್ನೆಚ್ಚರಿಕೆ ವಹಿಸುವ ಸಂಬಂಧ ಅರಿವು ಮೂಡಿಸಲಾಗುತ್ತಿದೆ
> ಮಹಿಳೆಯರು, ಯುವಜನರು ಹಾಗೂ ಜನಪ್ರತಿನಿಧಿಗಳು ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಬಗ್ಗೆ ಜನಾಂದೋಲನ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ

TAGGED:CoronaCoronavirusCovid 19Public TVsandalwoodST Somashekarupendraಉಪೇಂದ್ರಎಸ್ ಟಿ ಸೋಮಶೇಖರ್ಕೊರೊನಾಕೋವಿಡ್ 19ಪಬ್ಲಿಕ್ ಟಿವಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
9 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
11 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
15 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
21 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
22 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
28 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?