ಏನಮ್ಮ ನಿಮ್ಮಿಬ್ಬರ ಮಧ್ಯೆ ಜಟಾಪಟಿ ಜೋರಾಗಿದೆ- ಸುಮಲತಾಗೆ ಸಿದ್ದರಾಮಯ್ಯ ಪ್ರಶ್ನೆ

Public TV
1 Min Read
siddaramaiah sumalatha copy

– ವಿಪಕ್ಷ ನಾಯಕರನ್ನ ಮಂಡ್ಯಕ್ಕೆ ಆಹ್ವಾನಿಸಿದ ಸಂಸದೆ

ಬೆಂಗಳೂರು: ಇಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಸಂಸದೆ ಸುಮಲತಾ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಇಬ್ಬರಿಗೊಬ್ಬರು ಎದುರಾಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಏನಮ್ಮ ನಿಮ್ಮಿಬ್ಬರ ಮಧ್ಯೆ ಜಟಾಪಟಿ ಜೋರಗಿದೆ ಎಂದು ಪ್ರಶ್ನಿಸಿದ್ದಾರೆ.

sumalatha 2 medium

ರಾಜ್ಯಪಾಲರ ಪ್ರಮಾಣವಚನ ಸ್ವೀಕಾರ ಹಿನ್ನೆಲೆ ರಾಜಭವನದ ಗಾಜಿನಮನೆಯಲ್ಲಿ ಎದುರು ಸಿಕ್ಕಾಗ ಸಿದ್ದರಾಮಯ್ಯ ಸುಮಲತಾ ಒಬ್ಬರಿಗೊಬ್ಬರು ಎದುರಾಗಿದ್ದಾರೆ. ಈ ವೇಳೆ ಸಿದ್ದರಾಮಯದ್ಯನವರನ್ನು ಮಂಡ್ಯಕ್ಕೆ ಬರುವಂತೆ ಸುಮಲತಾ ಆಹ್ವಾನಿಸಿದ್ದಾರೆ.

SIDDU 6

ಇದಕ್ಕೂ ಮುನ್ನ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಗಣಿಗಾರಿಕೆ ಕದನದ ಕುರಿತು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಏನಮ್ಮ ನಿಮ್ಮಿಬ್ಬರ ಮಧ್ಯೆ ಜಟಾಪಟಿ ಜೋರಾಗಿದೆ ಎಂದಿದ್ದಾರೆ. ಇದಕ್ಕೆ ಉತ್ತರಿಸಿದ ಸುಮಲತಾ, ಏನಿಲ್ಲ ಸರ್ ಹಾಗೇ ಸ್ವಲ್ಪ ನಡೀತಿದೆ ಎಂದು ಹೇಳಿದ್ದಾರೆ. ಬಳಿಕ ಮಂಡ್ಯಕ್ಕೆ ನೀವು ಒಂದು ಬಾರಿ ಭೇಟಿ ಕೊಡಿ ಸರ್ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಆಗ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಆಯ್ತು ಬರುತ್ತೇನೆ ಎಂದು ಭರವಸೆ ನೀಡಿದ್ದಾರೆ.

HDK 2

ಈ ಮೂಲಕ ಮಂಡ್ಯ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟದಲ್ಲಿ ಸಿದ್ದರಾಮಯ್ಯ ಬೆಂಬಲವನ್ನು ಸುಮಲತಾ ಕೋರಿದ್ದಾರೆ. ಸಿದ್ದರಾಮಯ್ಯನವರನ್ನು ಮಂಡ್ಯಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ಕುರಿತು ಇದೀಗ ಸಾಕಷ್ಟು ಚರ್ಚೆ ನಡೆಯುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *