ಮಂಡ್ಯ: ಐಸೋಲೇಷನ್ ವಾರ್ಡ್ ನಲ್ಲಿ ಆರೈಕೆ ಮಾಡುವವರು ಇಲ್ಲದ ಕಾರಣ ಕಾಮೇಗೌಡರು ಅನ್ನ ನೀರು ಸೇವಿಸುವುದನ್ನು ತ್ಯಜಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡು ಕೆರೆ ಕಟ್ಟೆಗಳು ನಿರ್ಮಿಸಿ ಪ್ರಖ್ಯಾತಿಯಾಗಿದ್ದಾರೆ. ಇತ್ತೀಚೆಗೆ ಕಾಲು ನೋವಿನಿಂದ ಬಳಲುತ್ತಿದ್ದ ಕಾಮೇಗೌಡರು ಮಳವಳ್ಳಿ ಮತ್ತು ಮಂಡ್ಯದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿದ್ದರಿಂದ ಕಾಮೇಗೌಡರನ್ನು ಮಂಡ್ಯದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಲಿದ್ದಾರೆ ಕಾಮೇಗೌಡರು- ಸಿನಿಮಾ ಆಗಲಿದೆ ಸಾಧನೆ
ಕಾಲು ನೋವಿನಿಂದ ಬಳಲುತ್ತಿದ್ದ ಕಾಮೇಗೌಡರು ಮನೆಯಲ್ಲಿ ಶೌಚಾಲಯ ಸೇರಿದಂತೆ ಎಲ್ಲದಕ್ಕೂ ಮಕ್ಕಳನ್ನೇ ಅವಲಂಬಿಸಿದ್ದರು. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿದ್ದು, ಇತರೆ ಕೆಲಸಗಳ ಆರೈಕೆ ಇಲ್ಲದೆ ಕಾಮೇಗೌಡರು ಸೊರಗಿದ್ದಾರೆ. ಅನ್ನ ಆಹಾರ ಸೇವಿಸಿದ್ರೆ ಶೌಚಾಲಯಕ್ಕೆ ಹೋಗಬೇಕಾಗುತ್ತೆ ಎಂಬ ಕಾರಣಕ್ಕೆ ಊಟವನ್ನು ಕಾಮೇಗೌಡರು ಸೇವಿಸುತ್ತಿಲ್ಲ. ಇತ್ತ ಕಾಮೇಗೌಡರ ಇಬ್ಬರು ಮಕ್ಕಳು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಇದನ್ನೂ ಓದಿ: ಗುಡ್ಡಗಾಡಿನಲ್ಲಿ 16 ಕೆರೆ- ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಮೆಚ್ಚುಗೆ