ಹಾಸನ: ಸುಮಾರು ಒಂದೂವರೆ ವರ್ಷದ ಹೆಣ್ಣು ಮಗುವನ್ನು ಪೋಷಕರು ಬೇಲಿಗೆ ಎಸೆದು ಹೋಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ವಿದ್ಯಾನಗರ ಸಮೀಪ ನಡೆದಿದೆ.
ಮಗುವನ್ನು ಬಟ್ಟೆಯಲ್ಲಿ ಸುತ್ತಿ ಬೇಲಿಗೆ ಎಸೆದು ಹೋಗಿದ್ದಾರೆ. ಚಳಿ ಮತ್ತು ಹಸಿವು ತಾಳಲಾರದೆ ಮಗುವಿನ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿದ ಸ್ಥಳೀಯ ನಿವಾಸಿ ತಮನ್ನಾ ಮಗುವನ್ನು ಮನೆಗೆ ಕರೆತಂದು ಹಾಲು ಕುಡಿಸಿ ಪೋಷಣೆ ಮಾಡಿದ್ದಾರೆ.
ಮಾಹಿತಿ ತಿಳಿದ ಪತ್ರಕರ್ತರೊಬ್ಬರು ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮಗುವನ್ನು ವಶಕ್ಕೆ ಪಡೆದಿದ್ದು, ಯಾರಿಗಾದರೂ ಮಗುವಿನ ಪೋಷಕರ ಬಗ್ಗೆ ತಿಳಿದಿದ್ದರೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.