ಬೆಂಗಳೂರು: ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದ್ದು, ಯುವಕನ ಕೊಲೆ ಮಾಡಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ಕೂಲಿ ಕೆಲಸ ಮಾಡುತ್ತಿದ್ದ ಅನಿಲ್ ನನ್ನು ಆಕಾಶ್ ಕೊಲೆ ಮಾಡಿದ್ದಾನೆ. ಕೂಲಿ ಕೆಲಸ ಮಾಡುತ್ತಿದ್ದ ಯುವಕರ ಮಧ್ಯೆ ಈ ಗಲಾಟೆ ನಡೆದಿದೆ. ಮೃತ ಅನಿಲ್ ಹಾಗೂ ಅರೋಪಿ ಆಕಾಶ್ ಇಬ್ಬರೂ ಮಧ್ಯಪ್ರದೇಶದವರಾಗಿದ್ದು, ಇಬ್ಬರೂ ಮೊಬೈಲ್ ಚಾರ್ಜ್ ಹಾಕೋಕೆ ಒಂದೇ ಸ್ವಿಚ್ ಬಳಕೆ ಮಾಡುತ್ತಿದ್ದರು. ಈ ವೇಳೆ ಚಾರ್ಜ್ ಹಾಕುವ ಸಂಬಂಧ ಜಗಳ ಮಾಡಿಕೊಂಡಿದ್ದಾರೆ.
ಜಗಳ ವಿಕೋಪಕ್ಕೆ ತಿರುಗಿದ್ದು, ಆಕಾಶ್, ಅನಿಲ್ ನನ್ನು ಕೋಲಿನಿಂದ ಹೊಡೆದಿದ್ದಾನೆ. ಇಬ್ಬರ ಜಗಳ ಅತಿರೇಕಕ್ಕೆ ಹೋಗಿದ್ದು, ಬಳಿಕ ಅನಿಲ್ಗೆ ಗಂಭೀರಗಾಯಗಳಾಗಿವೆ. ಆಸ್ಪತ್ರೆಗೆ ಕರೆದೊಯ್ಯುವಾಗ ಯುವಕ ಸಾವನಪ್ಪಿದ್ದಾನೆ. ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.