Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಬ್ಬರ ಹಿಂದೆ ಒಬ್ಬರು – ಒಂದೇ ಕುಟುಂಬದ ಮೂವರು ಸೇರಿ ಐವರು ನೀರುಪಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಒಬ್ಬರ ಹಿಂದೆ ಒಬ್ಬರು – ಒಂದೇ ಕುಟುಂಬದ ಮೂವರು ಸೇರಿ ಐವರು ನೀರುಪಾಲು

Chikkamagaluru

ಒಬ್ಬರ ಹಿಂದೆ ಒಬ್ಬರು – ಒಂದೇ ಕುಟುಂಬದ ಮೂವರು ಸೇರಿ ಐವರು ನೀರುಪಾಲು

Public TV
Last updated: November 25, 2020 9:15 pm
Public TV
Share
2 Min Read
Chikkamagaluru Lake
SHARE

– ಮಾಲೀಕನಿಗಾಗಿ ಕೆರೆ ಬಳಿ ಕಾದು ಕೂತ ಶ್ವಾನ

ಚಿಕ್ಕಮಗಳೂರು: ಅಣ್ಣನನ್ನು ಕಾಪಾಡಲು ತಮ್ಮ. ತಮ್ಮನನ್ನು ಕಾಪಾಡಲು ಮತ್ತೊಬ್ಬ ಅಣ್ಣ. ಹೀಗೆ ಒಬ್ಬರನೊಬ್ಬರು ಕಾಪಾಡಲು ಹೋಗಿ ಒಂದೇ ಕುಟುಂಬದ ಮೂವರು ಸೇರಿದಂತೆ ಐವರು ನೀರುಪಾಲಾಗಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಸಮೀಪದ ಹರೇಕೆರೆಯಲ್ಲಿ ನಡೆದಿದೆ.

ಮೃತರೆಲ್ಲರೂ 20 ರಿಂದ 24 ವರ್ಷದ ಯುವಕರಾಗಿದ್ದು, ಮೃತರ ಯುವಕರನ್ನು ಸುದೀಪ್, ಸಂದೀಪ್, ದಿಲೀಪ್, ರಘು ಹಾಗೂ ದೀಪಕ್ ಎಂದು ಗುರುತಿಸಲಾಗಿದೆ. ನವೆಂಬರ್ 20ರಂದು ಸಂದೀಪ್ ಅಕ್ಕ ಸಂಧ್ಯಾಳ ಮದುವೆಯಾಗಿತ್ತು. ನಿನ್ನೆ ತಾನೇ ಬೀಗರ ಊಟದ ಕಾರ್ಯಕ್ರಮವೂ ಮುಗಿದಿತ್ತು. ಇಂದು ಅಕ್ಕ-ಬಾವನನ್ನು ಬಾವನ ಮನೆಗೆ ಕಳಿಸಿ ಮದುವೆ ನಂತರದ ಕಾರ್ಯದಲ್ಲಿ ತೊಡಗಿದ್ದರು. ಬೀಗರ ಊಟಕ್ಕೆ ತಂದಿದ್ದ ಪಾತ್ರೆಗಳನ್ನು ವಾಪಸ್ ಕೊಡಲು ತಯಾರಾಗಿದ್ದರು.

Chikkamagaluru Lake 3

ಪಾತ್ರೆ ಕೊಡಲು ಹೋಗಿದ್ದರೆ ಐವರು ಯುವಕರು ಸಾವಿನಿಂದ ಪಾರಾಗುತ್ತಿದ್ದರೋ ಏನೋ. ಆದರೆ ವಿಧಿ ಅವರನ್ನು ಸಾವಿನ ಮನೆಗೆ ದೂಡಿದೆ. ಕೆರೆಯಲ್ಲಿ ಮೀನು ಹಿಡಿದು ತಂದು ಅಡುಗೆ ಮಾಡಿ ಊಟದ ಬಳಿಕ ಪಾತ್ರೆ ಕೊಡಲು ಹೋಗೋಣವೆಂದು ಐವರು ಅಣ್ಣತಮ್ಮಂದಿರು ಕೆರೆಗೆ ಹೋಗಿದ್ದಾರೆ. ಮೀನಿಗೆ ಗಾಳ ಹಾಕುವ ಮುನ್ನ ಈಜಲು ನೀರಿಗೆ ಇಳಿದಿದ್ದಾರೆ. ಆದರೆ ಸುಮಾರು 30 ಅಡಿ ಆಳವಿದ್ದ ಕಾರಣ ಓರ್ವ ನೀರಿನಲ್ಲಿ ಮುಳುಗಿದ್ದಾನೆ. ಅವನನ್ನ ರಕ್ಷಿಸಲು ಮತ್ತೊಬ್ಬ ನೀರಿಗಿಳಿದಿದ್ದಾನೆ.

Chikkamagaluru Lake 5

ಹೀಗೆ ಒಬ್ಬರನ್ನೊಬ್ಬರು ರಕ್ಷಿಸಲು ಒಟ್ಟು ಆರು ಜನ ನೀರಿಗೆ ಇಳಿದಿದ್ದಾರೆ. ಆದರೆ ಬಾನು ಎಂಬುವನು ಈಜಿ ದಡಸೇರಿದ್ದಾನೆ. ದಡದಲ್ಲಿದ್ದ ಬಾನು ಮಕ್ಕಳು ನೀರಿಗೆ ಬರುತ್ತಾವೆಂದು ಆತ ದಡಕ್ಕೆ ವಾಪಸ್ ಬಂದಿದ್ದಾನೆ. ಉಳಿದ ಐವರು ಯುವಕರು ನೋಡ-ನೋಡುತ್ತಿದ್ದಂತೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಮನೆಯವರು ಕೆರೆ ಬಳಿ ಹೋದಾಗ ಮೃತ ಸಂದೀಪ್ ಪ್ರೀತಿಯಿಂದ ಸಾಕಿದ್ದ ನಾಯಿ ಡ್ಯಾನಿ ಕೂಡ ಮಾಲೀಕನಿಗಾಗಿ ಕೆರೆ ಬಳಿ ಅನಾಥನಂತೆ ಕೂತಿತ್ತು. ಕೊನೆಗೆ ಸಂದೀಪ್ ಮೃತದೇಹ ಸಿಕ್ಕ ಬಳಿಕ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ತರುವಾಗ ನಾಯಿ ಅಂಬುಲೆನ್ಸ್ ಹಿಂದೆ ಮಗುವಂತೆ ಓಡಿ ಬಂದಿದ್ದು ಸ್ಥಳೀಯರ ಕಣ್ಣಲ್ಲಿ ನೀರು ತರಿಸಿತ್ತು.

Chikkamagaluru Lake 4

ಒಂದೇ ಕುಟುಂಬದ ಮೂವರು ನೀರುಪಾಲು: ಈ ಐವರು ಯುವಕರಲ್ಲಿ ಒಂದೇ ಕುಟುಂಬದ ಮೂರು ನೀರುಪಾಲಾಗಿರೋದು ಮತ್ತೊಂದು ಮಹಾ ದುರಂತ. ಮದುವೆಗಾಗಿ ಸಂಬಂಧಿಗಳ ಮನೆಗೆ ಬಂದಿದ್ದ ತಾಲೂಕಿನ ಹಂಚರವಳ್ಳಿ ಗ್ರಾಮದ ಕೃಷ್ಣಮೂರ್ತಿ-ಕುಸುಮ ದಂಪತಿಯ ಮೂವರು ಮಕ್ಕಳು ನೀರಿಪಾಲಾಗಿದ್ದಾರೆ. ಸಂತೋಷದಿಂದ ಅಕ್ಕನ ಮದುವೆ ಮಾಡಿ ದಿಲೀಪ್, ದೀಪಕ್ ಮತ್ತು ಸುದೀಪ್ ಅಕ್ಕ ಗಂಡನಮನೆ ಸೇರುತ್ತಿದ್ದಂತೆ ಇತ್ತ ತಮ್ಮಂದಿರು ಸಾವಿನ ಮನೆ ಸೇರಿದ್ದಾರೆ.

Chikkamagaluru Lake 2

ನಾಯಿಯನ್ನು ಕಂಡು ಕಣ್ಣೀರಿಟ್ಟ ಜನ: ಐವರು ಸಾವಿನ ವಿಷಯ ಕೇಳಿ ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿತ್ತು. ಇಡೀ ಊರಿನ ಜನ ಕೆರೆ ಬಳಿ ಜಮಾಯಿಸಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆದರೆ ಮೃತ ಸಂದೀಪ್ ಪ್ರೀತಿಯಿಂದ ಸಾಕಿದ್ದ ನಾಯಿ ಕೆರೆ ಬಳಿ ಮಾಲೀಕನಿಗಾಗಿ ಕಾದು ಕೂತಿತ್ತು. ನನ್ನೊಡೆಯ ಬರುತ್ತಾನೆಂದು ಅತ್ತಿತ್ತ ತಲೆಯಾಡಿಸುತ್ತಾ ಎದುರು ಬರುವವರನ್ನ ನೋಡಿ ಸುಮ್ಮನಾಗುತ್ತಿತ್ತು. ಕೊನೆ-ಕೊನೆಗೆ ಒಂದೊಂದು ಮೃತದೇಹ ಪತ್ತೆಯಾದಾಗಲು ಕುಟುಂಬಸ್ಥರ ನೋವು ಹೇಳತೀರದ್ದಾಗಿತ್ತು. ಸಂದೀಪ್‍ನನ್ನ ನೆನೆದು ಮಂಕಾಗಿ ಕೂತಿದ್ದ ನಾಯಿ ಡ್ಯಾನಿ ಅವನನ್ನ ನೆನೆದು ಕಣ್ಣೀರಿಟ್ಟಿತ್ತು.

TAGGED:ChikkamagalurudoglakemarriagepolicePublic TVಕೆರೆಚಿಕ್ಕಮಗಳೂರುನಾಯಿಪಬ್ಲಿಕ್ ಟಿವಿಪೊಲೀಸ್ಮದುವೆ
Share This Article
Facebook Whatsapp Whatsapp Telegram

Cinema news

Jailer
ತಲೈವಾ ನಟನೆಯ ಜೈಲರ್-2 ಸಿನಿಮಾಗೆ ವಿದ್ಯಾ ಬಾಲನ್ ಎಂಟ್ರಿ!
Bollywood Cinema Latest South cinema Top Stories
Samantha Ruth Prabhu Raj Nidimoru
ಮದ್ವೆ ಬಳಿಕ ಕಾಣಿಸಿಕೊಂಡ ಸಮಂತಾ-ರಾಜ್ ನಿಡಿಮೋರು..!
Cinema Latest Top Stories
Miraj
ʻದೇವರು ರುಜು ಮಾಡಿದನುʼ ಚಿತ್ರದ ಸಾಂಗ್ ರಿಲೀಸ್ – ವಿರಾಜ್ ಬಿಂದಾಸ್ ಕುಣಿತ
Cinema Latest Sandalwood
gilli rajat
ರಜತ್‌ ಆಚೆ ಕಳಿಸಿಯೇ ನಾನು ಆಚೆ ಹೋಗೋದು: ಸುದೀಪ್‌ ಎದುರೇ ಗಿಲ್ಲಿ ಸವಾಲ್‌
Cinema Latest Top Stories TV Shows

You Might Also Like

Shamanuru
Bengaluru City

ಶಾಮನೂರು ಅಂತ್ಯಕ್ರಿಯೆಗೆ ಸ್ಥಳ ನಿಗದಿ – ಸೋಮವಾರ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

Public TV
By Public TV
6 hours ago
Shamanur Shivashankarappa
Bengaluru City

ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

Public TV
By Public TV
6 hours ago
big bulletin 14 December 2025 part 1
Big Bulletin

ಬಿಗ್‌ ಬುಲೆಟಿನ್‌ 14 December 2025 ಭಾಗ-1

Public TV
By Public TV
6 hours ago
big bulletin 14 December 2025 part 2
Big Bulletin

ಬಿಗ್‌ ಬುಲೆಟಿನ್‌ 14 December 2025 ಭಾಗ-2

Public TV
By Public TV
6 hours ago
big bulletin 14 December 2025 part 3
Big Bulletin

ಬಿಗ್‌ ಬುಲೆಟಿನ್‌ 14 December 2025 ಭಾಗ-3

Public TV
By Public TV
7 hours ago
Team India 3
Cricket

ಧರ್ಮಶಾಲಾದಲ್ಲಿ ಟೀಂ ಇಂಡಿಯಾ ದರ್ಬಾರ್‌ – ಆಫ್ರಿಕಾ ವಿರುದ್ಧ 7 ವಿಕೆಟ್‌ಗಳ ಜಯ, ಸರಣಿ 2-1 ಮುನ್ನಡೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?