ಓರ್ವ ವಿದ್ಯಾರ್ಥಿನಿಗಾಗಿ 70 ಆಸನದ ದೊಡ್ಡ ಬೋಟ್ ಓಡಿಸಿದ ಸರ್ಕಾರ

Public TV
2 Min Read
boat

– ಪರೀಕ್ಷೆ ಮುಗಿಸಿ ಬರುವರೆಗೂ ವಿದ್ಯಾರ್ಥಿನಿಗಾಗಿ ಕಾಯ್ತಿದ್ದ ದೋಣಿ
– 4 ಸಾವಿರ ಖರ್ಚು ಆದ್ರೂ 18 ರೂ. ಪಡೆದ ಸಿಬ್ಬಂದಿ

ತಿರುವನಂತಪುರಂ: ಕೊರೊನಾ ಲಾಕ್‍ಡೌನ್‍ನಿಂದಾಗಿ ಮುಂದೂಡಲ್ಪಟ್ಟ ಪರೀಕ್ಷೆಗಳು ಪುನರಾರಂಭಗೊಂಡಿವೆ. ಇದೀಗ 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಪರೀಕ್ಷಾ ಕೇಂದ್ರಕ್ಕೆ ಹೋಗಲು 70 ಆಸನ ಸಾಮರ್ಥ್ಯದ ಬೋಟ್ ಓಡಿಸಿರುವ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಕಾಂಜಿರಮ್‍ನಲ್ಲಿ ನಡೆದಿದೆ. ಇದೀಗ ಕೇರಳ ಜಲಸಾರಿಗೆ ವಿಭಾಗ (ಎಸ್‍ಡಬ್ಲ್ಯೂಟಿಡಿ)ದ ಅಧಿಕಾರಿಗಳ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಸಂದ್ರ ಬಾಬು ಜಲಸಾರಿಗೆ ಅಧಿಕಾರಿಗಳು ಮೂಲಕ ಪರೀಕ್ಷೆ ಬರೆದ ವಿದ್ಯಾರ್ಥಿನಿ. ಸಂದ್ರ ಕೂಲಿ ಕಾರ್ಮಿಕ ದಂಪತಿಯ ಪುತ್ರಿಯಾಗಿದ್ದಾಳೆ. ಕಳೆದ ಒಂದು ವರ್ಷದಿಂದ ಸಂದ್ರ ಬಾಬು ಕೊಟ್ಟಾಯಂ ಜಿಲ್ಲೆಯ ಕಾಂಜಿರಾಮ್‍ನ ಎಸ್‍ಎನ್‍ಡಿಪಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಓದುತ್ತಿದ್ದಾಳೆ. ವಿದ್ಯಾರ್ಥಿನಿ ಆಲಪ್ಪುಳದಲ್ಲಿರುವ ಎಂಎನ್ ಬ್ಲಾಕ್‍ನಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದಳು.

Alappuzha boat lone student 1200

ದ್ಯಾರ್ಥಿನಿ ಎಂಎನ್ ಬ್ಲಾಕ್‍ನಿಂದ ತನ್ನ ಶಾಲೆಗೆ ತಲುಪಲು ಕೊಟ್ಟಾಯಂ ಜಿಲ್ಲೆಯ ಗಡಿ ಗ್ರಾಮವಾದ ಕಾಂಜಿರಮ್‍ಗೆ ಸರ್ಕಾರಿ ಬೋಟ್ ಸೇವೆ ಇದೆ. ಕೊರೊನಾ ಲಾಕ್‍ಡೌನ್‍ನಿಂದಾಗಿ ಕುಟ್ಟನಾಡ್ ಪ್ರದೇಶದ ನಾನ ಕಡೆ ಸಂಪರ್ಕ ಕಲ್ಪಿಸುವ ಪ್ರಯಾಣಿಕರ ಬೋಟ್‍ಗಳ ಸಂಚಾರ ನಿಂತಿವೆ. ಈ ಮಧ್ಯೆ ಕೇರಳ ಸರ್ಕಾರ 12ನೇ ತರಗತಿ ಪರೀಕ್ಷೆ ದಿನಾಂಕವನ್ನು ನಿಗದಿಪಡಿಸಿತ್ತು. ಹೀಗಾಗಿ ಬೋಟ್ ಸಂಚಾರವಿಲ್ಲದೆ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರ ಹೋಗಲು ಸಾಧ್ಯವಿರಲಿಲ್ಲ.

ಈ ವೇಳೆ ಕೇರಳ ಜಲಸಾರಿಗೆ ಇಲಾಖೆ ವಿದ್ಯಾರ್ಥಿನಿ ನೆರವಿಗೆ ಬಂದಿದ್ದು, ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಸಹಾಯ ಮಾಡಿದೆ. ಮೇ 29 ಮತ್ತು 30 ರಂದು ಎರಡು ದಿನ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರಕ್ಕೆ ಹೋಗಲು 70 ಆಸನಗಳ ಸಾಮರ್ಥ್ಯದ ಬೋಟ್‍ಅನ್ನು ಆಕೆಯಾಗಿ ಓಡಿಸಲಾಗಿದೆ. ಈ ಬೋಟ್‍ನಲ್ಲಿ ಚಾಲಕ, ನೇವಿಗೇಟರ್, ಬೋಟ್ ಮಾಸ್ಟರ್ ಮತ್ತು ಇಬ್ಬರು ಸಹಾಯಕರು ಸೇರಿ ಒಟ್ಟು ಐದು ಸಿಬ್ಬಂದಿಯನ್ನು ನೇಮಿಸಲಾಗಿತ್ತು.

kerala lockdown

ವಿದ್ಯಾರ್ಥಿನಿಯನ್ನ ಸೋಮವಾರ ಬೆಳಗ್ಗೆ 11.30ಕ್ಕೆ ಕೊಟ್ಟಾಯಂ ನಿಲ್ದಾಣದಿಂದ ಕಾಂಜಿರಮ್‍ನ ಎಸ್‍ಎನ್‍ಡಿಪಿ ಹೈಯರ್ ಸೆಕೆಂಡರಿ ಶಾಲೆಯ ಮುಂಭಾಗದಲ್ಲಿರುವ ಜೆಟ್ಟಿಯಲ್ಲಿ ಇಳಿಸಲಾಯಿತು. ಅಲ್ಲಿಯೇ ವಿದ್ಯಾರ್ಥಿನಿಗಾಗಿ ಬೋಟ್ ಕಾಯುತ್ತಿತ್ತು. ಮತ್ತೆ ವಿದ್ಯಾರ್ಥಿನಿ ಪರೀಕ್ಷೆ ಬರೆದು ಮುಗಿಸಿದ ಬಳಿಕ ಬೋಟ್ ಮೂಲಕ ಮನೆಗೆ ತಲುಪಿಸಿದ್ದೇವೆ ಎಂದು ಬೋಟ್ ಅಧಿಕಾರಿ ತಿಳಿಸಿದ್ದಾರೆ.

ಇಲಾಖೆ ಸಚಿವ ಮತ್ತು ಎಸ್‍ಡಬ್ಲ್ಯೂಟಿಡಿ ನಿರ್ದೇಶಕ ಶಾಜಿ ವಿ.ನಾಯರ್ ಅವರು ಪರೀಕ್ಷೆ ಬರೆಯಲು ನನಗೆ ಸಹಾಯ ಮಾಡಿದರು. ಮೊದಲು ನನ್ನ ಪೋಷಕರು ಸಾಮಾಜಿಕ ಕಾರ್ಯಕರ್ತರ ಸಹಾಯದಿಂದ ಸಾರಿಗೆ ಇಲಾಖೆಯನ್ನು ಸಂಪರ್ಕಿಸಿದ್ದರು. ಎಸ್‍ಡಬ್ಲ್ಯೂಟಿಡಿ ಸಚಿವರು ಸಹಾಯ ಮಾಡುವುದಾಗಿ ಭರವಸೆ ನೀಡಿದೆ. ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ದೊಡ್ಡ ಸಹಾಯವಾಗಿದೆ ಎಂದು ಸಂದ್ರ ಸಂತಸದಿಂದ ಹೇಳಿದ್ದಾಳೆ.

Sandra alappuzha boat student 650

ಈ ಬಗ್ಗೆ ಮಾತನಾಡಿದ ಶಾಜಿ ವಿ.ನಾಯರ್ ಮಾತನಾಡಿ, ಈ ಸೇವೆಯನ್ನು ನಿರ್ವಹಿಸಲು ಸರ್ಕಾರ ಮತ್ತು ಸಚಿವರು ಸಂಪೂರ್ಣ ಬೆಂಬಲ ನೀಡಿದರು. ವಿದ್ಯಾರ್ಥಿನಿಯ ಪ್ರಯಾಣಕ್ಕೆ 4,000 ರೂಪಾಯಿ ಖರ್ಚಾಗಿದೆ. ಆದರೆ ಆಕೆಯಿಂದ ಒಂದು ದಿನದ ಪ್ರಯಾಣಕ್ಕೆ ನಿಗದಿತ ಪ್ರಯಾಣ ದರ 18 ರೂ. ಮಾತ್ರ ಪಡೆಯಲಾಗಿದೆ. ಆರ್ಥಿಕ ನಷ್ಟದ ಬಗ್ಗೆ ನಾವು ಯೋಚಿಸಲಿಲ್ಲ. ಏಕೆಂದರೆ ವಿದ್ಯಾರ್ಥಿನಿ ತನ್ನ ಪರೀಕ್ಷೆಯನ್ನು ಬರೆಯುವುದು ನಮಗೆ ಮುಖ್ಯವಾಗಿತ್ತು ಎಂದು ಹೇಳಿದರು.

corona 27

Share This Article
Leave a Comment

Leave a Reply

Your email address will not be published. Required fields are marked *