ಕಂಟೈನ್ಮೆಂಟ್‍ ವಲಯದಲ್ಲಿರುವ ಜಾನುವಾರುಗಳಿಗೆ ಮೇವು ವಿತರಿಸಿದ ಪೊಲೀಸರು

Public TV
1 Min Read
cng police

ಚಾಮರಾಜನಗರ: ಸೀಲ್‍ಡೌನ್ ಪ್ರದೇಶಲ್ಲಿನ ನಿವಾಸಿಯೊಬ್ಬರ ಜಾನುವಾರುಗಳಿಗೆ ಮೇವು ಇಲ್ಲ ಎಂಬ ಸುದ್ದಿ ತಿಳಿದ ಚಾಮರಾಜನಗರ ಜಿಲ್ಲಾ ಪೊಲೀಸರು ಮೇವು ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಸಿದ್ದಪ್ಪ ಎಂಬುವವರು ಕಂಟೈನ್ಮೆಂಟ್ ಜೋನ್‍ನಲ್ಲಿರುವ ಕಾರಣ ಜಾನುವಾರುಗಳಿಗೆ ಮೇವು ಒದಗಿಸಲಾಗದೇ ಸಂಕಷ್ಟಕ್ಕೆ ಸಿಲುಕಿದ್ದರು. ಈ ಸಂಬಂಧ ಲೋಕೇಶ್‌ ಎಂಬುವವರು ಜಿಲ್ಲಾ ಪೊಲೀಸರಿಗೆ ವಿಚಾರ ತಿಳಿಸಿದ್ದರು. ವಿಚಾರ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಂತೇಮರಳ್ಳಿಯ ಪೊಲೀಸರಿಗೆ ಮೇವು ತಲುಪಿಸುವಂತೆ ಸೂಚಿಸಿದ್ದರು.

cng police 2

ಮೇಲಾಧಿಕಾರಿ ಸೂಚನೆಯ ಬೆನ್ನಲ್ಲೇ ಸಂತೇಮರಳ್ಳಿ ಠಾಣೆಯ ಪೊಲೀಸರು ಮಧ್ಯರಾತ್ರಿಯೆ ಕಂಟೈನ್ಮೆಂಟ್ ನಿವಾಸಿಯ ಜಾನುವಾರುಗಳಿಗೆ ಮೇವನ್ನು ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈಗ ಜಿಲ್ಲಾ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಸಾಮಾಜಿಕ ಜಾಲತಾಣದ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *