Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಟ್ಟಕಡೆಯ ಮನುಷ್ಯನಿಗೂ ಕಡಿಮೆ ದರದಲ್ಲಿ ಮರಳು ಲಭ್ಯ: ಸಚಿವ ನಿರಾಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಟ್ಟಕಡೆಯ ಮನುಷ್ಯನಿಗೂ ಕಡಿಮೆ ದರದಲ್ಲಿ ಮರಳು ಲಭ್ಯ: ಸಚಿವ ನಿರಾಣಿ

Bengaluru City

ಕಟ್ಟಕಡೆಯ ಮನುಷ್ಯನಿಗೂ ಕಡಿಮೆ ದರದಲ್ಲಿ ಮರಳು ಲಭ್ಯ: ಸಚಿವ ನಿರಾಣಿ

Public TV
Last updated: February 18, 2021 7:18 pm
Public TV
Share
2 Min Read
NIRANI 3
SHARE

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ‘ಮನೆಬಾಗಿಲಿಗೆ’ ರಾಜ್ಯ ಸರ್ಕಾರ ಹೋಗುವ ವಿನೂತನ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದರು.

ಇಂದು ವಿಕಾಸಸೌಧದಲ್ಲಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ಸ್ ನಿಯೋಗವು ಭೇಟಿ ಆಗಿ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ನಿರಾಣಿ, ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯ ನೆರವು ನೀಡಲಿದ್ದೇವೆ. ‘ಉದ್ಯಮಸ್ನೇಹಿ’ ಮಾಡುವುದು ತಮ್ಮ ಮುಂದಿರುವ ಮೊದಲ ಸವಾಲು. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ. ಮರಳು, ಕಲ್ಲು ಕ್ವಾರಿ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

NIRANI

2021- 2026ನೇ ಸಾಲಿನ ಹೊಸ ಮರಳು ನೀತಿ ಜಾರಿಗೆ ಬರಲಿದೆ. ಇದರಲ್ಲಿ ಅನೇಕ ಹೊಸ ಹೊಸ ಸುಧಾರಣೆಗಳನ್ನು ಜಾರಿಗೆ ಮಾಡುತ್ತಿದ್ದೇವೆ. ಕಟ್ಟಕಡೆಯ ಮನುಷ್ಯನಿಗೂ ಸುಲಭವಾಗಿ ಮರಳು ಸಿಗಬೇಕು ಎಂಬುವುದೇ ನಮ್ಮ ಮುಖ್ಯ ಉದ್ದೇಶ ಎಂದು ಹೇಳಿದರು.

ಬಜೆಟ್‍ನಲ್ಲಿ ಕ್ವಾರಿ ಮತ್ತು ಸ್ಟೋರ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ ಮುಂದಿಟ್ಟಿರುವ ಬೇಡಿಕೆಗಳನ್ನು ಸೇರ್ಪಡೆ ಮಾಡಲಾಗುವುದು. ನೀವು ಯಾವುದೇ ಆತಂಕಪಡಬೇಕಾಗಿಲ್ಲ ಎಂದು ಅಭಯ ನೀಡಿದರು. ಈಗಾಗಲೇ ಇಲಾಖೆಗಳಲ್ಲಿ ಕೆಲವು ಮಹತ್ವದ ಸುಧಾರಣೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಬೇಡಿಕೆ ಈಡೇರಿಸುವೆ: ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ಸ್ ಕೆಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಸಚಿವರ ಗಮನಕ್ಕೆ ತಂದರು. ಕಟ್ಟಡ, ಕಲ್ಲು, ಖನಿಜವು ನಿರ್ದಿಷ್ಟವಲ್ಲದ ಖನಿಜವಾಗಿದ್ದು ಇದಕ್ಕಾಗಿ ಕೆ.ಎಂ.ಎಂ.ಆರ್.ಸಿ.ಆರ್. ಕಾಯ್ದೆಯಲ್ಲಿ ಪ್ರತ್ಯೇಕವಾದ ಅಧ್ಯಯನ ರೂಪಿಸುವುದು, 15 ಎಕರೆ ಪ್ರದೇಶದ ವಿಸ್ತೀರ್ಣದ ಮೇಲ್ಪಟ್ಟ ಕ್ವಾರಿಗಳ ಸಮೂಹಕ್ಕೆ ಪ್ರತ್ಯೇಕವಾದ ಕ್ಲಷ್ಟರ್ ಮ್ಯಾಗ್ಸಿನ್‍ನ ಸ್ಥಾಪನೆಗಾಗಿ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವಂತೆ ಸಚಿವ ನಿರಾಣಿ ಅವರಿಗೆ ಮನವಿ ಮಾಡಿದರು.

NIRANI 2

ಎಂಎಂಡಿಆರ್ ಕಾಯ್ದೆಯಡಿ 5 ಲಕ್ಷ ರೂ.ನಂತೆ ಪ್ರಕರಣವನ್ನು ಒಮ್ಮೆಗೆ ಇತ್ಯರ್ಥಪಡಿಸುವುದು, ಇಲಾಖೆ ವತಿಯಿಂದ ಈ ಹಿಂದೆ ಕೈಗೊಳ್ಳಲಾದ ಡ್ರೋಣ್ ಸರ್ವೇಯ ವರದಿಯು ಅವೈಜ್ಞಾನಿಕ ಹಾಗೂ ಏಕಪಕ್ಷೀಯವಾಗಿರುವುದರಿಂದ ಅದರ ಆಧಾರದ ಮೇಲೆ ವಿಧಿಸಲಾಗಿರುವ 5 ಪಟ್ಟು ದಂಡವನ್ನು ರದ್ದುಪಡಿಸುವುದು, ಕಲ್ಲು ಗಣಿ ಗುತ್ತಿಗೆದಾರರಿಂದ ಸಾಗಾಣಿಕೆಯ ರಾಜಧನ (ಎಂಡಿಪಿ/ಎಂಡಿಆರ್) ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸಬೇಕೆಂದು ಒತ್ತಾಯಿಸಿದರು.

ಕೆಎಂಎಂಸಿಆರ್ ಕಾಯ್ದೆ 44(3) ತೆರವುಗೊಳಿಸಿ ಕಾಯ್ದೆ 44 (4) ಸಹ ತೆರವು ಮಾಡಬೇಕು, ಕಟ್ಟಡ ಕಲ್ಲಿಗೆ ಸಂಬಂಧಿಸಿದಂತೆ ಡಿಎಂಎಫ್ ಶುಲ್ಕವನ್ನು ಶೇ.10ಕ್ಕೆ ಕಡಿತ, ಸ್ಪಸಿಫೈಡ್ ಮಿನರಲ್ಸ್‍ಗೆ 30 ವರ್ಷಗಳ ಅವಧಿಗೆ ಲೀಸ್ ನೀಡಿರುವಂತೆ ನಾನ್‍ಸ್ಪಸಿಫೈಡ್ ಕಟ್ಟಡದ ಕಲ್ಲುಗುಣಿಗೆ ಗುತ್ತಿಗೆಗೂ ಕೂಡ 30 ವರ್ಷಗಳ ಕಾಲಾವಧಿಯವರೆಗೆ ಲೀಸ್ ಮಂಜೂರು ಮಾಡಬೇಕೆಂದು ಕೋರಿದರು.

ಪಟ್ಟಾ ಜಮೀನಿನಲ್ಲಿ ಕಲ್ಲುಗುಣಿ ಗುತ್ತಿಗೆಗೆ ರಾಜಧನ ಕಡಿಮೆ ಮಾಡಿ ಎಎಪಿಪಿಯನ್ನು ತೆಗೆದುಹಾಕಬೇಕು, ಕ್ರಷರ್ ಮತ್ತು ಎಂಸ್ಟ್ಯಾಂಡ್ ಘಟಕ ಹೊಂದಿರುವವರಿಗೆ 31ಝೆಡ್‍ಸಿ ನಿಯಮದಡಿ ಕಲ್ಲುಗಣಿ ಮಂಜೂರು ಮಾಡಲು ಅವಕಾಶ ಕಲ್ಪಿಸಿ, ಈ ಕಾಯ್ದೆಯು 6 ತಿಂಗಳು ಕಾಲ ಜಾರಿಯಲ್ಲಿದ್ದು ಇದನ್ನು ತೆರವುಗೊಳಿಸಿ ಕಾಯ್ದೆಯನ್ನು ಮುಂದುವರೆಸುವಂತೆ ನಿಯೋಗ ಮನವರಿಕೆ ಮಾಡಿಕೊಟ್ಟಿತ್ತು.

NIRANI 1

ಈ ಎಲ್ಲಾ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಆಲಿಸಿದ ಸಚಿವ ನಿರಾಣಿ ಅವರು ಈಡೇರಿಸುವ ಭರವಸೆ ನೀಡಿದರು. ನಿಯೋಗದಲ್ಲಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ಸ್ ಗೌರವಾಧ್ಯಕ್ಷ ದತ್ತಾತ್ರಿ.ಎಸ್., ಅಧ್ಯಕ್ಷ ಸಂಜೀವ ಹಟ್ಟಿಹೊಳಿ, ಉಪಾಧ್ಯಕ್ಷರಾದ ಡಿ.ಸಿದ್ದರಾಜು, ಎನ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಹಾಜರಿದ್ದರು.

TAGGED:bengalurubudgetMurugesh niraniPublic TVSandಕ್ವಾರಿಪಬ್ಲಿಕ್ ಟಿವಿಬಜೆಟ್ಬೆಂಗಳೂರುಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
36 minutes ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
40 minutes ago
DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
1 hour ago
Hassan Youth Died suspiciously in factory
Crime

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

Public TV
By Public TV
2 hours ago
pm modi 4
Latest

ಇಂದು ಪ್ರಧಾನಿ ಮೋದಿಯಿಂದ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ಉದ್ಘಾಟನೆ

Public TV
By Public TV
2 hours ago
Transport Employees Strike Bengaluru Chalo
Bengaluru City

ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?