ಮುಂಬೈ: ಕಾರ್ಮಿಕರು ತಂಗಿದ್ದ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಈ ವೇಳೆ ಕಿವುಡ ಕಾರ್ಮಿಕನೊಬ್ಬ ಹೊರಗೆ ಬರಲಾಗದೆ ಸಜೀವ ದಹನವಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತನನ್ನು 25 ವರ್ಷದವನೆಂದು ಗುರುತಿಸಲಾಗಿದೆ. ಈತನಿಗೆ ಕಿವುಡುತನವಿತ್ತು. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಾಗ ಹೊರಗೆ ಬರಲಾಗದೆ ಸಾವನ್ನಪ್ಪಿದ್ದಾನೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾನೆ.
ನಿನ್ನೆ ಬೆಳಗ್ಗೆ 6. 30 ರ ಸುಮಾರಿಗೆ ಕಾರ್ಮಿಕರು ವಾಸವಾಗಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಅನಾಹುತದಿಂದಾಗಿ 120 ಮನೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಮತ್ತು ಒರ್ವ ಕಾರ್ಮಿಕ ಸುಟ್ಟು ಸಜೀವ ದಹನವಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಗ್ನಿಶಾಮಕದಳ ಸಿಬ್ಬಂದಿ ತಿಳಿಸಿದ್ದಾರೆ.
ಅಡುಗೆ ಮಾಡುವ ಸಮಯದಲ್ಲಿ ಅನಿಲ ಸೋರಿಕೆಯಾಗಿದೆ. ಆಗ ಬೇರೆ ಕೋಣೆಗಳಿಗೂ ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ. ಬೆಂಕಿನಂದಿಸಲು ಅಗ್ನಿಶಾಮಕದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.