ಚಿಕ್ಕಬಳ್ಳಾಪುರ: ಟೈಲ್ಸ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಕಣಿವೆ ಪ್ರದೇಶದಲ್ಲಿ ನಡೆದಿದೆ.
ಶ್ರೀನಿವಾಸಪುರ ಮೂಲದ ವೆಂಕಟೇಶ್ ಮೃತ ಲಾರಿ ಚಾಲಕ ಅಂತ ತಿಳಿದುಬಂದಿದೆ. ಚಿಂತಾಮಣಿಯಿಂದ ಬಾಗೇಪಲ್ಲಿ ಗೆ ಟೈಲ್ಸ್ ಸಾಗಾಟ ಮಾಡಲಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಣಿವೆ ಪ್ರದೇಶದ ತಡೆಗೋಡೆಯನ್ನ ಭೇದಿಸಿಕೊಂಡು ಉರುಳಿಬಿದ್ದಿದೆ.
ಅಪಘಾತದಲ್ಲಿ ಕ್ಲೀನರ್ ಶ್ರೀಕಾಂತ್ ಗಾಯಗೊಂಡಿದ್ದಾನೆ. ಈ ಸಂಬಂಧ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.