Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನಿಷ್ಠ ದರ್ಶನ್ ಒಂದು ಫೋನ್ ಮಾಡಬಹುದಿತ್ತು- ಜಗ್ಗೇಶ್ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕನಿಷ್ಠ ದರ್ಶನ್ ಒಂದು ಫೋನ್ ಮಾಡಬಹುದಿತ್ತು- ಜಗ್ಗೇಶ್ ಬೇಸರ

Cinema

ಕನಿಷ್ಠ ದರ್ಶನ್ ಒಂದು ಫೋನ್ ಮಾಡಬಹುದಿತ್ತು- ಜಗ್ಗೇಶ್ ಬೇಸರ

Public TV
Last updated: February 24, 2021 3:49 pm
Public TV
Share
3 Min Read
mys jaggesh
SHARE

– ರಾಮನಗರ ಸರ್ಕಲ್‍ನಲ್ಲಿ ಗಲಾಟೆ ಮಾಡಲು ಸ್ಕೆಚ್
– ಎಷ್ಟು ಜನ ನುಗ್ಗಿದ್ರೂ ಏನೂ ಮಾಡಕ್ಕಾಗಲ್ಲ

ಮೈಸೂರು: ತೋತಾಪುರಿ ಸಿನಿಮಾ ಸೆಟ್‍ನಲ್ಲಿ ನಡೆದ ಗಲಾಟೆ ರಾಮನಗರ ಸರ್ಕಲ್‍ನಲ್ಲಿ ನಡೆಸಲು ಸ್ಕೆಚ್ ಹಾಕಿದ್ದರು. ಆದರೆ ಅದು ವಿಫಲವಾಗಿತ್ತು ಎಂದು ದರ್ಶನ್ ಅಭಿಮಾನಿಗಳು ತಮ್ಮ ಮೇಲೆ ದಾಳಿ ನಡೆಸಿದ್ದರ ಕುರಿತು ನಟ ಜಗ್ಗೇಶ್ ಮಾತನಾಡಿದ್ದಾರೆ.

ಈ ಬಗ್ಗೆ ಅತ್ತಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿತ್ರರಂಗದ ಎಲ್ಲಾ ವಿಭಾಗದಲ್ಲೂ ಕೆಲಸ ಮಾಡಿದ್ದೇನೆ. ಹೀಗಾಗಿ ಚಿತ್ರರಂಗದ ಹಣೆಬರಹ ನನಗೆ ಗೊತ್ತು. ಮುಂಚೆ ನೂರು ದಿನ ಸಿನಿಮಾ ಓಡುತ್ತಿದ್ದವು. ಇವತ್ತು ಒಂದೆರಡು ದಿನ ಸಿನಿಮಾ ಓಡುವುದರ ಮೇಲೆ ಸ್ಟಾರ್ ಡಮ್ ನಿರ್ಧಾರ ಆಗುತ್ತಿದೆ. ಈ ಪರಿಸ್ಥಿತಿಯಿಂದ ನಮ್ಮಂತಹ ಸ್ಟಾರ್‍ಗಳಿಗೆ ಹೆಲ್ಪ್ ಆಗುತ್ತಿದೆ, ನಿರ್ಮಾಪಕರಿಗಲ್ಲ ಎಂದು ತಿಳಿಸಿದರು.

jaggesh

ನಾವು ಒಗ್ಗಟ್ಟಿನ ಮೂಲಮಂತ್ರದಲ್ಲಿ ಬೆಳೆದವರು. ಒಂದು ವಿಚಾರವನ್ನ ಅಳೆದು ತೂಗಿ ವಿಮರ್ಶೆ ಮಾಡಬೇಕು. ನಾನು ಹಳೇ ಕಥೆಯನ್ನ ಮತ್ತೆ ಮತ್ತೆ ಹೇಳುವುದಿಲ್ಲ. ಅಂದು 20 ಹುಡುಗರು ಬಂದು ಗಲಾಟೆ ಮಾಡಿದರು. ತೋತಾಪುರಿ ಸಿನಿಮಾ ಚಿತ್ರೀಕರಣ ನಿಲ್ಲಬಾರದು ಎನ್ನುವುದು ನನ್ನ ಉದ್ದೇಶವಾಗಿತ್ತು. ಬಹಳ ಶಾಂತಿಯುತವಾಗಿ ಇಲ್ಲಿ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಗಲಾಟೆ ನಡೆಯಿತು.

ಈ ಗಲಾಟೆ ಸೆಟ್‍ನಲ್ಲಿ ನಡೆಯಬೇಕಾಗಿದ್ದಲ್ಲ. ರಾಮನಗರ ಸರ್ಕಲ್‍ನಲ್ಲಿ ನಡೆಸುವ ಹುನ್ನಾರ ನಡೆದಿತ್ತು. ನನ್ನ ಚಲನವಲನಗಳನ್ನೆಲ್ಲ ಗಮನಿಸಿದ್ದರು. ಇದನ್ನು ನಾನು ಸಾಬೀತುಪಡಿಸುತ್ತೇನೆ. ಬೇರೆ ಬೇರೆ ಕಾರಣಗಳಿಂದಾಗಿ ರಾಮನಗರ ಸರ್ಕಲ್‍ಗೆ ಅಂದು ಬರಲಿಲ್ಲ. ಬಳಿಕ ಸೆಟ್‍ನಿಂದಲೇ ಯಾರೋ ನನ್ನ ಬಗ್ಗೆ ಮಾಹಿತಿ ಹಂಚಿದ್ದಾರೆ. ಬಳಿಕ ಅಲ್ಲಿಗೆ ಬಂದಿದ್ದಾರೆ. ನಾವು ಮಾಹಿತಿ ಹಂಚಿದವನನ್ನು ಕಂಡು ಹಿಡಿಯುತ್ತೇವೆ ಎಂದರು.

DARSHAN

ಗಲಾಟೆ ಮಾಡಿ, ವಿಡಿಯೋ ಮಾಡಿ ಜಗ್ಗೇಶ್ ಮಾನ ಹರಾಜು ಹಾಕಲು ಯತ್ನಿಸಿದರು. ನಮ್ಮನ್ನು ಬೆಳೆಸುವವರು, ಚಪ್ಪಾಳೆ ತಟ್ಟುವವರು ದೇವರು. ನಾವೇ ದೇವರು ಎಂದು ಬೋರ್ಡ್ ಹಾಕಿಕೊಂಡವರಲ್ಲ. ಚಿರು ಸರ್ಜಾ ತೀರಿಕೊಂಡಾಗ ಎಷ್ಟು ಜನ ಬಾಯಿಕೊಂಡಿರಿ? ಆತ ಸತ್ತು ವರ್ಷ ಆಗಿಲ್ಲ, ಎಷ್ಟು ಜನ ಅವರ ಮನೆಗೆ ಹೋಗಿ ಮನೆಯವರನ್ನು ಸಂತೈಸಿದಿರಿ. ಜಗ್ಗೇಶ್ ಸತ್ತರೂ ಅಷ್ಟೇ ಎಲ್ಲಾ ಮರೆತುಹೋಗುತ್ತಾರೆ. ಜಗತ್ತು ನಶ್ವರ ನಾನು ಎನ್ನುವ ಅಹಂ ಬೇಡ ಎಂದರು.

ಗಲಾಟೆ ನಡೆದ ದಿನ ನಾನು ದೊಡ್ಡದು ಮಾಡಿದ್ದರೆ ನಿರ್ಮಾಪಕನ ಬದುಕಿಗೆ ಪೆಟ್ಟು ಬಿದ್ದಿರುತ್ತಿತ್ತು. ದರ್ಶನ್ ನನ್ನು ನಾನು ಬಹಳ ಪ್ರೀತಿಸುತ್ತೇನೆ. ಅಂದು ಪೋಲಿಸರು ಅವನನ್ನು ಚಪ್ಪಲಿ ಇಲ್ಲದೆ ನಿಲ್ಲಿಸಿದ್ದಾಗ, ಅವನ ಬೆಂಬಲಕ್ಕೆ ಯಾರು ಬಂದಿದ್ದರು? ಜಗ್ಗೇಶ್ ಬಂದಿದ್ದನು ಅಲ್ವಾ? ಅಷ್ಟು ದೊಡ್ಡ ನಟನನ್ನ ಸಣ್ಣ ಹೀರೋಯಿನ್ ಮನೆಯೊಳಗೆ ಚಪ್ಪಲಿ ಇಲ್ಲದೆ ನಿಲ್ಲಿಸೋದು ಸರಿಯಲ್ಲ. ಕಾನೂನು ಪ್ರಕಾರ ಕ್ರಮ ಕೈಗೊಂಡು ಆತನನ್ನು ಕಳುಹಿಸಿ ಎಂದು ಪೋಲಿಸರಿಗೆ ಹೇಳಿದ್ದೆ. ಇದನ್ನು ದರ್ಶನ್ ಕೂಡ ನೆನೆಯಬೇಕು ಎಂದರು.

ಕನ್ನಡದ ರಜನಿಕಾಂತ್ ಅಂತ ನಾನು ದರ್ಶನ್‍ಗೆ ಹೇಳಿದ್ದೆ. ಆತ ಈ ಘಟನೆ ಬಳಿಕ ನನಗೆ ಫೋನ್ ಮಾಡಬಹುದಿತ್ತು ಅಂತ ನನ್ನ ಪತ್ನಿ ಹೇಳುತ್ತಿದ್ದರು, ದರ್ಶನ್‍ಗೆ ಅಪಘಾತವಾದಾಗ ಕರೆ ಮಾಡಿ ವಿಚಾರಿಸಿದ್ರಿ. ಈಗ ಎಲ್ಲಿದ್ದಾರೆ ಅವರೆಲ್ಲಾ ಎಂದು ಪ್ರಶ್ನಿಸಿದ್ದರು. ಇದು ಕೃತಜ್ಞತೆ ಇಲ್ಲದ ಸಮಾಜ. ನನ್ನ ಕೈ ಕೆಳಗೆ ಎಷ್ಟೋ ನಟ, ನಟಿಯರು ತಯಾರಾಗಿದ್ದಾರೆ. ನಾನು ಅನ್ನೋದು, ವಯಸ್ಸು ಅನ್ನೋದು ಆಸತ್ವ ಅಲ್ಲ. ಕಡೆವರೆಗೂ ಬರುವುದು ಗುಣ ಅಷ್ಟೇ, ಅವತ್ತು ಗಲಾಟೆ ಮಾಡಲು ಬಂದಿದ್ದ ಒಂದಿಬ್ಬರು ದಿನಬೆಳಗಾದರೆ ದರ್ಶನ್ ಜೊತೆ ಇರುತ್ತಾರೆ. ಎಲ್ಲ ಕಡೆ ಅವರ ಫೋಟೋ ಇದೆ. ಕೆಲ ಮಾಧ್ಯಮಗಳು ಈ ವಿಚಾರವನ್ನ ತಣ್ಣಗೆ ಮಾಡಬಹುದಿತ್ತು. ಆದರೆ ಯಾಕೆ ಹೀಗೆ ಮಾಡಿದರೋ ಗೊತ್ತಿಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟು ಬಿಡಿ ಎಂದು ಪತ್ರಕರ್ತರ ಮರು ಪ್ರಶ್ನೆಗೆ ಉತ್ತರಿಸದೆ ಹೊರಟರು.

JAGGESH 11

TAGGED:darshanjaggeshPublic TVsandalwoodಜಗ್ಗೇಶ್ದರ್ಶನ್ಪಬ್ಲಿಕ್ ಟಿವಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
4 minutes ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
20 minutes ago
sergio gor and donald trump
Latest

ಇರಾನ್‌ ಡೆಡ್‌ಲೈನ್‌| ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ ಟ್ರಂಪ್‌

Public TV
By Public TV
57 minutes ago
Hubballi Gym Trainer Arrest
Crime

ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡ್ತಿದ್ದ ಜಿಮ್ ಟ್ರೇನರ್ ಅರೆಸ್ಟ್

Public TV
By Public TV
1 hour ago
Goa Car Accident 1
Crime

ಉದ್ಯಮಿಯ ಮಗನ ಶೋಕಿಗೆ ಬಿತ್ತು ಹೆಣ –  ಬೈಕ್‌ಗೆ ಮಿನಿ ಕೂಪರ್‌ ಡಿಕ್ಕಿಯಾಗಿ ಯುವತಿ ಸಾವು, ಚಾಲಕ ಅರೆಸ್ಟ್‌

Public TV
By Public TV
2 hours ago
uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?