Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನಿಷ್ಠ ದರ್ಶನ್ ಒಂದು ಫೋನ್ ಮಾಡಬಹುದಿತ್ತು- ಜಗ್ಗೇಶ್ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕನಿಷ್ಠ ದರ್ಶನ್ ಒಂದು ಫೋನ್ ಮಾಡಬಹುದಿತ್ತು- ಜಗ್ಗೇಶ್ ಬೇಸರ

Cinema

ಕನಿಷ್ಠ ದರ್ಶನ್ ಒಂದು ಫೋನ್ ಮಾಡಬಹುದಿತ್ತು- ಜಗ್ಗೇಶ್ ಬೇಸರ

Public TV
Last updated: February 24, 2021 3:49 pm
Public TV
Share
3 Min Read
mys jaggesh
SHARE

– ರಾಮನಗರ ಸರ್ಕಲ್‍ನಲ್ಲಿ ಗಲಾಟೆ ಮಾಡಲು ಸ್ಕೆಚ್
– ಎಷ್ಟು ಜನ ನುಗ್ಗಿದ್ರೂ ಏನೂ ಮಾಡಕ್ಕಾಗಲ್ಲ

ಮೈಸೂರು: ತೋತಾಪುರಿ ಸಿನಿಮಾ ಸೆಟ್‍ನಲ್ಲಿ ನಡೆದ ಗಲಾಟೆ ರಾಮನಗರ ಸರ್ಕಲ್‍ನಲ್ಲಿ ನಡೆಸಲು ಸ್ಕೆಚ್ ಹಾಕಿದ್ದರು. ಆದರೆ ಅದು ವಿಫಲವಾಗಿತ್ತು ಎಂದು ದರ್ಶನ್ ಅಭಿಮಾನಿಗಳು ತಮ್ಮ ಮೇಲೆ ದಾಳಿ ನಡೆಸಿದ್ದರ ಕುರಿತು ನಟ ಜಗ್ಗೇಶ್ ಮಾತನಾಡಿದ್ದಾರೆ.

ಈ ಬಗ್ಗೆ ಅತ್ತಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿತ್ರರಂಗದ ಎಲ್ಲಾ ವಿಭಾಗದಲ್ಲೂ ಕೆಲಸ ಮಾಡಿದ್ದೇನೆ. ಹೀಗಾಗಿ ಚಿತ್ರರಂಗದ ಹಣೆಬರಹ ನನಗೆ ಗೊತ್ತು. ಮುಂಚೆ ನೂರು ದಿನ ಸಿನಿಮಾ ಓಡುತ್ತಿದ್ದವು. ಇವತ್ತು ಒಂದೆರಡು ದಿನ ಸಿನಿಮಾ ಓಡುವುದರ ಮೇಲೆ ಸ್ಟಾರ್ ಡಮ್ ನಿರ್ಧಾರ ಆಗುತ್ತಿದೆ. ಈ ಪರಿಸ್ಥಿತಿಯಿಂದ ನಮ್ಮಂತಹ ಸ್ಟಾರ್‍ಗಳಿಗೆ ಹೆಲ್ಪ್ ಆಗುತ್ತಿದೆ, ನಿರ್ಮಾಪಕರಿಗಲ್ಲ ಎಂದು ತಿಳಿಸಿದರು.

jaggesh

ನಾವು ಒಗ್ಗಟ್ಟಿನ ಮೂಲಮಂತ್ರದಲ್ಲಿ ಬೆಳೆದವರು. ಒಂದು ವಿಚಾರವನ್ನ ಅಳೆದು ತೂಗಿ ವಿಮರ್ಶೆ ಮಾಡಬೇಕು. ನಾನು ಹಳೇ ಕಥೆಯನ್ನ ಮತ್ತೆ ಮತ್ತೆ ಹೇಳುವುದಿಲ್ಲ. ಅಂದು 20 ಹುಡುಗರು ಬಂದು ಗಲಾಟೆ ಮಾಡಿದರು. ತೋತಾಪುರಿ ಸಿನಿಮಾ ಚಿತ್ರೀಕರಣ ನಿಲ್ಲಬಾರದು ಎನ್ನುವುದು ನನ್ನ ಉದ್ದೇಶವಾಗಿತ್ತು. ಬಹಳ ಶಾಂತಿಯುತವಾಗಿ ಇಲ್ಲಿ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಗಲಾಟೆ ನಡೆಯಿತು.

ಈ ಗಲಾಟೆ ಸೆಟ್‍ನಲ್ಲಿ ನಡೆಯಬೇಕಾಗಿದ್ದಲ್ಲ. ರಾಮನಗರ ಸರ್ಕಲ್‍ನಲ್ಲಿ ನಡೆಸುವ ಹುನ್ನಾರ ನಡೆದಿತ್ತು. ನನ್ನ ಚಲನವಲನಗಳನ್ನೆಲ್ಲ ಗಮನಿಸಿದ್ದರು. ಇದನ್ನು ನಾನು ಸಾಬೀತುಪಡಿಸುತ್ತೇನೆ. ಬೇರೆ ಬೇರೆ ಕಾರಣಗಳಿಂದಾಗಿ ರಾಮನಗರ ಸರ್ಕಲ್‍ಗೆ ಅಂದು ಬರಲಿಲ್ಲ. ಬಳಿಕ ಸೆಟ್‍ನಿಂದಲೇ ಯಾರೋ ನನ್ನ ಬಗ್ಗೆ ಮಾಹಿತಿ ಹಂಚಿದ್ದಾರೆ. ಬಳಿಕ ಅಲ್ಲಿಗೆ ಬಂದಿದ್ದಾರೆ. ನಾವು ಮಾಹಿತಿ ಹಂಚಿದವನನ್ನು ಕಂಡು ಹಿಡಿಯುತ್ತೇವೆ ಎಂದರು.

DARSHAN

ಗಲಾಟೆ ಮಾಡಿ, ವಿಡಿಯೋ ಮಾಡಿ ಜಗ್ಗೇಶ್ ಮಾನ ಹರಾಜು ಹಾಕಲು ಯತ್ನಿಸಿದರು. ನಮ್ಮನ್ನು ಬೆಳೆಸುವವರು, ಚಪ್ಪಾಳೆ ತಟ್ಟುವವರು ದೇವರು. ನಾವೇ ದೇವರು ಎಂದು ಬೋರ್ಡ್ ಹಾಕಿಕೊಂಡವರಲ್ಲ. ಚಿರು ಸರ್ಜಾ ತೀರಿಕೊಂಡಾಗ ಎಷ್ಟು ಜನ ಬಾಯಿಕೊಂಡಿರಿ? ಆತ ಸತ್ತು ವರ್ಷ ಆಗಿಲ್ಲ, ಎಷ್ಟು ಜನ ಅವರ ಮನೆಗೆ ಹೋಗಿ ಮನೆಯವರನ್ನು ಸಂತೈಸಿದಿರಿ. ಜಗ್ಗೇಶ್ ಸತ್ತರೂ ಅಷ್ಟೇ ಎಲ್ಲಾ ಮರೆತುಹೋಗುತ್ತಾರೆ. ಜಗತ್ತು ನಶ್ವರ ನಾನು ಎನ್ನುವ ಅಹಂ ಬೇಡ ಎಂದರು.

ಗಲಾಟೆ ನಡೆದ ದಿನ ನಾನು ದೊಡ್ಡದು ಮಾಡಿದ್ದರೆ ನಿರ್ಮಾಪಕನ ಬದುಕಿಗೆ ಪೆಟ್ಟು ಬಿದ್ದಿರುತ್ತಿತ್ತು. ದರ್ಶನ್ ನನ್ನು ನಾನು ಬಹಳ ಪ್ರೀತಿಸುತ್ತೇನೆ. ಅಂದು ಪೋಲಿಸರು ಅವನನ್ನು ಚಪ್ಪಲಿ ಇಲ್ಲದೆ ನಿಲ್ಲಿಸಿದ್ದಾಗ, ಅವನ ಬೆಂಬಲಕ್ಕೆ ಯಾರು ಬಂದಿದ್ದರು? ಜಗ್ಗೇಶ್ ಬಂದಿದ್ದನು ಅಲ್ವಾ? ಅಷ್ಟು ದೊಡ್ಡ ನಟನನ್ನ ಸಣ್ಣ ಹೀರೋಯಿನ್ ಮನೆಯೊಳಗೆ ಚಪ್ಪಲಿ ಇಲ್ಲದೆ ನಿಲ್ಲಿಸೋದು ಸರಿಯಲ್ಲ. ಕಾನೂನು ಪ್ರಕಾರ ಕ್ರಮ ಕೈಗೊಂಡು ಆತನನ್ನು ಕಳುಹಿಸಿ ಎಂದು ಪೋಲಿಸರಿಗೆ ಹೇಳಿದ್ದೆ. ಇದನ್ನು ದರ್ಶನ್ ಕೂಡ ನೆನೆಯಬೇಕು ಎಂದರು.

ಕನ್ನಡದ ರಜನಿಕಾಂತ್ ಅಂತ ನಾನು ದರ್ಶನ್‍ಗೆ ಹೇಳಿದ್ದೆ. ಆತ ಈ ಘಟನೆ ಬಳಿಕ ನನಗೆ ಫೋನ್ ಮಾಡಬಹುದಿತ್ತು ಅಂತ ನನ್ನ ಪತ್ನಿ ಹೇಳುತ್ತಿದ್ದರು, ದರ್ಶನ್‍ಗೆ ಅಪಘಾತವಾದಾಗ ಕರೆ ಮಾಡಿ ವಿಚಾರಿಸಿದ್ರಿ. ಈಗ ಎಲ್ಲಿದ್ದಾರೆ ಅವರೆಲ್ಲಾ ಎಂದು ಪ್ರಶ್ನಿಸಿದ್ದರು. ಇದು ಕೃತಜ್ಞತೆ ಇಲ್ಲದ ಸಮಾಜ. ನನ್ನ ಕೈ ಕೆಳಗೆ ಎಷ್ಟೋ ನಟ, ನಟಿಯರು ತಯಾರಾಗಿದ್ದಾರೆ. ನಾನು ಅನ್ನೋದು, ವಯಸ್ಸು ಅನ್ನೋದು ಆಸತ್ವ ಅಲ್ಲ. ಕಡೆವರೆಗೂ ಬರುವುದು ಗುಣ ಅಷ್ಟೇ, ಅವತ್ತು ಗಲಾಟೆ ಮಾಡಲು ಬಂದಿದ್ದ ಒಂದಿಬ್ಬರು ದಿನಬೆಳಗಾದರೆ ದರ್ಶನ್ ಜೊತೆ ಇರುತ್ತಾರೆ. ಎಲ್ಲ ಕಡೆ ಅವರ ಫೋಟೋ ಇದೆ. ಕೆಲ ಮಾಧ್ಯಮಗಳು ಈ ವಿಚಾರವನ್ನ ತಣ್ಣಗೆ ಮಾಡಬಹುದಿತ್ತು. ಆದರೆ ಯಾಕೆ ಹೀಗೆ ಮಾಡಿದರೋ ಗೊತ್ತಿಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟು ಬಿಡಿ ಎಂದು ಪತ್ರಕರ್ತರ ಮರು ಪ್ರಶ್ನೆಗೆ ಉತ್ತರಿಸದೆ ಹೊರಟರು.

JAGGESH 11

TAGGED:darshanjaggeshPublic TVsandalwoodಜಗ್ಗೇಶ್ದರ್ಶನ್ಪಬ್ಲಿಕ್ ಟಿವಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Andhra Pradesh Firecracker Factory Blast 18 Dead
Crime

ಆಂಧ್ರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 18 ಮಂದಿ ದುರ್ಮರಣ

Public TV
By Public TV
12 minutes ago
Ranji Trophy Jammu and Kashmir
Cricket

Ranji Trophy: ಚೊಚ್ಚಲ ರಣಜಿ ಟ್ರೋಫಿ ಪ್ರಶಸ್ತಿ ಗೆದ್ದ ಜಮ್ಮು-ಕಾಶ್ಮೀರ; ತವರಲ್ಲಿ ಕರ್ನಾಟಕಕ್ಕೆ ಸೋಲಿನ ಕಹಿ

Public TV
By Public TV
1 hour ago
R Ashok
Bengaluru City

ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್

Public TV
By Public TV
2 hours ago
Israel Iran airstrikes
Latest

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Public TV
By Public TV
2 hours ago
West Bengal Pink Booth SHINING Patrol
Latest

ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Public TV
By Public TV
2 hours ago
Bahrain 2
Latest

ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?