Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಬ್ಬಿಣದ ಅದಿರು ರಫ್ತಿಗೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಬ್ಬಿಣದ ಅದಿರು ರಫ್ತಿಗೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ

Bengaluru City

ಕಬ್ಬಿಣದ ಅದಿರು ರಫ್ತಿಗೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ

Public TV
Last updated: May 26, 2021 7:01 pm
Public TV
Share
3 Min Read
nirani 3
SHARE

ಬೆಂಗಳೂರು: ರಾಜ್ಯದಿಂದ ವಿದೇಶಕ್ಕೆ ಕಬ್ಬಿಣದ ಅದಿರು ರಫ್ತು ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿರುವುದರಿಂದ ಸುಪ್ರೀಂಕೋರ್ಟ್ ನಲ್ಲಿ ವಿಧಿಸಿರುವ ನಿಷೇಧವನ್ನು ತೆರವುಗೊಳಿಸುವಂತೆ ಮೇಲ್ಮನವಿ ಅರ್ಜಿ ಹಾಕಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ತೀರ್ಮಾನಿಸಿದೆ. ಉನ್ನತಾಧಿಕಾರಿಗಳ ಸಮಿತಿ(ಸಿಇಸಿ)ಯ ಅಭಿಪ್ರಾಯ ಪಡೆದು ಕಬ್ಬಿಣದ ಅದಿರು ರಫ್ತು ಮಾಡಲು ವಿಧಿಸಿರುವ ನಿಷೇಧವನ್ನು ತೆರವು ಮಾಡುವಂತೆ ಮನವಿ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಗುರುವಾರ ವಿಕಾಸಸೌಧದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿ ನಡೆಸಿದರು. ವಿದೇಶಕ್ಕೆ ರಫ್ತು ಮಾಡುವ ಸಂಬಂಧ ಅಭಿಪ್ರಾಯ ಕೇಳಲಾಗಿತ್ತು. ಕರ್ನಾಟಕದಿಂದ ಕಬ್ಬಿಣದ ಅದಿರನ್ನು ವಿದೇಶಕ್ಕೆ ರಫ್ತು ಮಾಡುವ ವಿಚಾರದಲ್ಲಿ ಕೇಂದ್ರದಿಂದ ಯಾವುದೇ ತಕರಾರು ಇಲ್ಲ ಎಂದು ಸ್ಪಷ್ಟಪಡಿಸಿದರು.

MINING 3

ದೇಶದ ಯಾವುದೇ ರಾಜ್ಯಗಳಲ್ಲೂ ವಿದೇಶಕ್ಕೆ ಕಬ್ಬಿಣದ ಅದಿರು ರಫ್ತು ಮಾಡಲು ನಿಷೇಧ ಹೇರಿಲ್ಲ. ಕರ್ನಾಟಕದಲ್ಲಿ ಮಾತ್ರ ಇರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಬರುತ್ತಿದ್ದ ವರಮಾನವು ನಿಂತು ಹೋಗಿದೆ. ಕೇಂದ್ರ ಸರ್ಕಾರವೂ ನಮಗೆ ಸಂಪೂರ್ಣವಾದ ಸಹಕಾರವನ್ನು ನೀಡುತ್ತಿದೆ. ನ್ಯಾಯಾಲಯದಲ್ಲಿ ಕಾನೂನಿನ ನೆರವು ನೀಡುವುದಾಗಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಮ್ಮ ನಿಲುವನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರಕ್ಕೆ ಹೆಚ್ಚಿನ ವರಮಾನ ತಂದುಕೊಡುವ ಪ್ರಮುಖ ಮೂಲವು ಇದಾಗಿದೆ. ಈ ಎಲ್ಲ ಅಂಶಗಳನ್ನು ಪ್ರಹ್ಲಾದ್ ಜೋಶಿ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ರಾಜ್ಯದ ನಿಲುವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಮಾಹಿತಿ ನೀಡಿದರು. ಅದಿರು ರಫ್ತು ಮಾಡುವ ಸರ್ಕಾರದ ನಿಲುವನ್ನು ಸಿಇಸಿಯವರೆಗೂ ಮನವರಿಕೆ ಮಾಡಿಕೊಡಲಾಗುವುದು. ಕಾನೂನಿನ ಇತಿಮಿತಿಯಲ್ಲೇ ಮಾಡಲಿದ್ದೇವೆ ಎಂದು ಪುನರುಚ್ಚರಿಸಿದರು.

MINING 2

ದಿನದ 24 ಗಂಟೆಯವರೆಗೆ ಮೈನಿಂಗ್‍ಗೆ ಅವಕಾಶ ಇದೆ. ಸಾಗಾಣಿಕೆಗೆ ಮಾತ್ರ 12 ಗಂಟೆ ಇದೆ. ಇದರಿಂದ ನಮ್ಮ ಕಾರ್ಖಾನೆಯವರಿಗೆ ಸಮಸ್ಯೆಯಾಗಿದೆ ಎಂದು ಮನವಿ ಬಂದಿದೆ. ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಗಣಿ ಕಂಪನಿಗಳಿಂದ ಸಂಗ್ರಹಣೆ ಮಾಡಿರುವ ರಾಯಲ್ಟಿ ಹಣವೂ ಸುಪ್ರೀಂಕೋರ್ಟ್ ನಲ್ಲಿದೆ. ಇದನ್ನು ಬಳಸಿಕೊಂಡು ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸಬಹುದು. ಇದನ್ನು ರಾಜ್ಯಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವುದಾಗಿ ಹೇಳಿದರು.

ಪ್ರಸ್ತುತ ರಾಜ್ಯದಲ್ಲಿ 35 ದಶಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಉತ್ಪಾದನೆಯಾಗುತ್ತದೆ. 2030ರ ವೇಳೆಗೆ ಇದನ್ನು 70 ದಶಲಕ್ಷ ಮೆಟ್ರಿಕ್ ಟನ್ ಗೆ ಕೊಂಡೊಯ್ಯುವ ಗುರಿ ಹಾಕಿಕೊಳ್ಳಲಾಗಿದೆ. 100 ಮೈನಿಂಗ್ ಹೊಸದಾಗಿ ಮಾಡುವ ಬಗ್ಗೆ ಗುರಿಹೊಂದಲಾಗಿದೆ. 3 ಸಾವಿರ ಅರ್ಜಿಗಳು ಬಂದಿವೆ. ಅದನ್ನು ತ್ವರಿತವಾಗಿ ವಿಲೇವಾರಿ ಮಾಡಲು ನಿರ್ಧಾರ ಮಾಡಲಾಗಿದೆ. ಆತ್ಮ ನಿರ್ಭರ್ ಅಡಿಯಲ್ಲಿ 500 ಮೈನಿಂಗ್ ಮಾಡಲು ನಿರ್ದೇಶನ ಮಾಡಲಾಗಿದೆ. ಎರಡು ವರ್ಷದಲ್ಲಿ 100 ಮೈನಿಂಗ್ ಮಾಡಲು ಶ್ರಮ ವಹಿಸುತ್ತೇವೆ ಎಂದು ಸಚಿವ ನಿರಾಣಿ ತಿಳಿಸಿದರು.

MINING 1197922f

ರಾಜ್ಯದಲ್ಲಿ ಮೈನಿಂಗ್ ಸಂಪನ್ಮೂಲ ಚೆನ್ನಾಗಿದೆ, ಗೋಲ್ಡ್ ಮೈನಿಂಗ್ ರಾಜ್ಯದಲ್ಲಿ ಚೆನ್ನಾಗಿದೆ. ಖನಿಜ ಸಂಪತ್ತನ್ನು ಉಪಯೋಗಿಸಿಕೊಳ್ಳಲು ಸಲಹೆ ಬಂದಿದೆ. ರಾಜ್ಯದಲ್ಲಿ ಒಟ್ಟು ಎಷ್ಟು ಪ್ರಮಾಣದಲ್ಲಿ ಅದಿರು ಇದೆ ಎಂಬುದು ಯಾರಿಗೂ ಸರಿಯಾಗಿ ತಿಳಿಯುತ್ತಿಲ್ಲ. ಹೀಗಾಗಿ ಇದನ್ನು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲು ಇಲಾಖೆ ತೀರ್ಮಾನಿಸಿದೆ. ಎಲ್ಲಿ, ಎಷ್ಟು ಪ್ರಮಾಣದಲ್ಲಿದೆ? ಇದರ ಗುಣಮಟ್ಟ ಇತ್ಯಾದಿಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಸಮೀಕ್ಷೆ ನಡೆಸುತ್ತೇವೆ ಎಂದರು.

ಯಡಿಯೂರಪ್ಪ ನಮ್ಮ ನಾಯಕರು
ನಾಯಕತ್ವ ಬದಲಾವಣೆ ನನಗೆ ಗೊತ್ತಿಲ್ಲ. ಬಿಎಸ್‍ವೈ ಇಳಿ ವಯಸ್ಸಿನಲ್ಲಿಯೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಇಳಿ ವಯಸ್ಸಿನಲ್ಲಿ ಇಷ್ಟು ಕೆಲಸ ಮಾಡುತ್ತಿದ್ದಾರೆ. ಅವರ ಅನುಭವವನ್ನು ರಾಜ್ಯಕ್ಕೆ ಧಾರೆ ಎರೆದಿದ್ದಾರೆ. ಮುಂದಿನ ಎರಡು ವರ್ಷದವರೆಗೆ ಅವರೇ ಮುಂದುವರೆಯಬೇಕು. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ. ಸಿಎಂ ಸೀಟು ಖಾಲಿ ಇಲ್ಲ, ಇದ್ದಿದ್ದರೆ ಮಾತನಾಡಬಹುದಿತ್ತು. ಆದರೆ ಬಿಎಸ್‍ವೈ ಆ ಸ್ಥಾನದಲ್ಲಿ ಇದ್ದಾರೆ ಎನ್ನುವ ಮೂಲಕ ನಾಯಕತ್ವ ಬದಲಾವಣೆಯನ್ನು ತಳ್ಳಿಹಾಕಿದರು.

BSY 7

ನಾವು ಕೊರೊನಾ ಸಂಬಂಧ, ನಮ್ಮ ಇಲಾಖೆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತೇವೆ. ಹೈ ಕಮಾಂಡ್ ಯಾವ ನಿರ್ಧಾರ ತೆಗೆದುಕೊಂಡರೂ ನಾವು ಬದ್ಧ ಎಂದು ಗೊಂದಲಗಳಿಗೆ ತೆರೆಎಳೆದರು. ಮುಂದಿನ ಚುನಾವಣೆಯಲ್ಲಿ ಎಮ್‍ಎಲ್‍ಎ ಸೀಟ್ ಕೊಡುವುದಿಲ್ಲ ಎಂದು ಪಕ್ಷ ತೀಮಾ9ನ ಮಾಡಿದರೆ ಅದಕ್ಕೂ ಬದ್ಧ. ನಮ್ಮ ಪಕ್ಷ ಏನೇ ಹೇಳಿದರೂ ಕೇಳುತ್ತೇವೆ ಎಂದು ಸ್ಪಷ್ಟಪಡಿಸಿದರು.

TAGGED:ExportIronMiningMurugesh niraniPublic TVಕಬ್ಬಿಣಪಬ್ಲಿಕ್ ಟಿವಿಮುರುಗೇಶ್ ನಿರಾಣಿಮೈನಿಂಗ್ರಫ್ತು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
2 minutes ago
bjp leader son
Court

BJP ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಕೇಸ್‌ – ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

Public TV
By Public TV
7 minutes ago
Hi tech thieves arrested for stealing copper wire while wearing BSNL uniforms bengaluru Police
Bengaluru City

ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌

Public TV
By Public TV
13 minutes ago
Public TV Vidhyapeeta
Bengaluru City

ಪಬ್ಲಿಕ್ ಟಿವಿ ‘ವಿದ್ಯಾಪೀಠʼದಲ್ಲಿ ಪಿಯುಸಿ 90% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ

Public TV
By Public TV
27 minutes ago
nicolas maduro
Latest

ಮಡುರೊ ಬಂಧನಕ್ಕೆ ಮುನ್ನ ಪಾಲಿಮಾರ್ಕೆಟ್‌ನಲ್ಲಿ ಬೆಟ್ಟಿಂಗ್‌ – ಕೋಟಿ ಕೋಟಿ ದೋಚಿದ್ದ ಅಮೆರಿಕದ ಸೈನಿಕ ಅರೆಸ್ಟ್‌

Public TV
By Public TV
36 minutes ago
BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?