ಕರ್ನಾಟಕ ಕ್ರಿಕೆಟ್ ಪ್ರೇಮಿಗಳಿಗೆ ಬಹಳ ಕಠಿಣ – ಇಂದಿನ ಪಂದ್ಯದ ಬಗ್ಗೆ ಕಿಚ್ಚ ಮಾತು

Public TV
1 Min Read
sudeep 1

ಬೆಂಗಳೂರು: ಲಾಕ್‍ಡೌನ್ ಬಳಿಕ ಶುರುವಾಗಿರುವ ಐಪಿಎಲ್ 2020 ದಿನದಿಂದ ದಿನಕ್ಕೆ ರೋಚಕತೆ ಹೆಚ್ಚಿಸುತ್ತಿದೆ. ಇದೀಗ 2020ರ ಐಪಿಎಲ್ ಆವೃತ್ತಿಯ ಇಂದಿನ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಇದಕ್ಕಾಗಿ ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿದ್ದಾರೆ. ಇತ್ತ ಕಿಚ್ಚ ಸುದೀಪ್ ಕೂಡ ಇಂದು ನಡೆಯುವ ಪಂದ್ಯದ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾತನಾಡಿದ್ದಾರೆ.

Kotigobba Sudeep 1

“ಇಂದಿನ ಪಂದ್ಯವು ಕರ್ನಾಟಕದ ಕ್ರಿಕೆಟ್ ಪ್ರಿಯರಿಗೆ ಬಹಳ ಕಠಿಣವಾಗಲಿದೆ. ಯಾಕೆಂದರೆ ಒಂದು ಕಡೆ ನಮ್ಮೂರಿನ ತಂಡ ಆರ್‌ಸಿಬಿ. ಎದುರಾಳಿಯಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ (ಹೆಚ್ಚು ಕರ್ನಾಟಕದ ಆಟಗಾರರು) ಆಡುತ್ತಿದ್ದಾರೆ. ಆದ್ದರಿಂದ ನಾವು ಹಿಂದೆ ಕುಳಿತುಕೊಂಡು ಆಟವನ್ನು ನೋಡಿ ಎಂಜಾಯ್ ಮಾಡುವ ಸಮಯ ಅಷ್ಟೇ” ಎಂದು ನಟ ಸುದೀಪ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕನ್ನಡಿಗರ ನಡ್ವೆ ಬಿಗ್‍ಫೈಟ್- ಇತ್ತಂಡಗಳ ಬಲಾಬಲ ಇಂತಿದೆ

KXIP vs RCB

ಇಂದಿನ ಪಂದ್ಯದಲ್ಲಿ ಇಬ್ಬರು ಆಟಗಾರರ ಮೇಲೆ ಸುದೀಪ್ ಹೆಚ್ಚಿನ ಭರವಸೆ ಇಟ್ಟಿದ್ದಾರೆ. ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಗೂ ಕಳೆದ ಪಂದ್ಯದಲ್ಲಿ ಶತಕ ಮಿಸ್ ಮಾಡಿಕೊಂಡ ಪಂಜಾಬ್ ಆಟಗಾರ ಕನ್ನಡಿಗ ಮಾಯಾಂಕ್ ಅಗರ್ವಾಲ್ ಮೇಲೆ ಸುದೀಪ್ ಭರವಸೆ ಇಟ್ಟುಕೊಂಡಿದ್ದಾರೆ. ಇದನ್ನೂ ಓದಿ: ಡೇವಿಡ್ ವಾರ್ನರ್ ದಾಖಲೆ ಮುರಿದ ರೋಹಿತ್ ಶರ್ಮಾ

kichcha sudeepa

ಪಂಜಾಬ್ ತಂಡದಲ್ಲಿ ಕನ್ನಡಿಗರು ಪ್ರಮುಖ ಪಾತ್ರ ವಹಿಸಿದ್ದು, ಅನಿಲ್ ಕುಂಬ್ಳೆ ಅವರ ಮಾರ್ಗದರ್ಶನದಲ್ಲಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆರಂಭಿಕರಾಗಿ ಮಯಾಂಕ್ ತಮ್ಮ ಸಾಮರ್ಥ್ಯವನ್ನು ಮೊದಲ ಪಂದ್ಯದಲ್ಲೇ ಸಾಬೀತು ಪಡಿಸಿದ್ದು, ಡೆಲ್ಲಿ ವಿರುದ್ಧ 60 ಎಸೆತಗಳಲ್ಲಿ 89 ರನ್ ಸಿಡಿಸಿ ಮಿಂಚಿದ್ದರು.

ಇತ್ತ ಆರ್‌ಸಿಬಿ ಪರ ಕನ್ನಡಿಗ, ಯುವ ಆಟಗಾರ ದೇವದತ್ ಪಡಿಕ್ಕಲ್ ಎಲ್ಲರ ಗಮನ ಸೆಳೆದಿದ್ದು, ಡೆಬ್ಯು ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿದ್ದರು. ಸದ್ಯ ಪಂಜಾಬ್ ವಿರುದ್ಧ ದೇವದತ್ ಪಡಿಕ್ಕಲ್ ಯಾವ ರೀತಿ ಬ್ಯಾಟ್ ಬೀಸಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

Share This Article
Leave a Comment

Leave a Reply

Your email address will not be published. Required fields are marked *