Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಲಘಟಗಿ ತೊಟ್ಟಿಲಿನಲ್ಲಿ ಜೂನಿಯರ್ ಚಿರು – ಈ ತೊಟ್ಟಿಲಿನ ವಿಶೇಷತೆ ಏನು?

Public TV
Last updated: November 12, 2020 3:07 pm
Public TV
Share
3 Min Read
jr chiru meghana raj vanita guttal 2 8 e1605167413654
SHARE

ಬೆಂಗಳೂರು: ರಾಜ್ಯ ಮಾತ್ರವಲ್ಲ ಹೊರ ರಾಜ್ಯದಲ್ಲಿಯೂ ಧಾರವಾಡ ಜಿಲ್ಲೆಯ ಕಲಘಟಗಿ ತೊಟ್ಟಿಲು ಫೇಮಸ್. ಯಾರೇ ಗಣ್ಯ ವ್ಯಕ್ತಿಗಳಿಗೆ ಮಗು ಜನಿಸಿದರೂ ತೊಟ್ಟಿಲಿನ ವಿಚಾರದಲ್ಲಿ ನೆನಪಾಗುವುದು ಕಲಘಟಗಿ ಎಂದರೆ ತಪ್ಪಾಗಲಿಕ್ಕಿಲ್ಲ. ಈಗ ಚಿರಂಜೀವಿ ಮತ್ತು ಮೇಘನಾ ದಂಪತಿ ಪುತ್ರನನ್ನು ಈ ತೊಟ್ಟಿಲಿಗೆ ಹಾಕಿ ತೂಗಿದ್ದಾರೆ.

jr chiru meghana raj vanita guttal 2 9 e1605167280837

ರಾಮಾಯಣ, ಮಾಹಾಭಾರತ, ಪೌರಾಣಿಕ ಕಥೆಗಳ ಚಿತ್ರಣ, ದೇಶದ ಸಂಸ್ಕೃತಿಗಳ ಚಿತ್ರಣಗಳನ್ನು ಈ ತೊಟ್ಟಿಲುಗಳುಗಳಲ್ಲಿ ಚಿತ್ರಿಸಲಾಗುತ್ತದೆ. ಅಲ್ಲದೆ ಈ ತೊಟ್ಟಿಲುಗಳ ಆಯಸ್ಸು ಸಹ ಹೆಚ್ಚು. ಅಚ್ಚಳಿಯದ ನೆನಪಾಗಿ ಉಳಿಯುತ್ತದೆ ಎಂಬ ಕಾರಣಕ್ಕೆ ಬಹುತೇಕ ಗಣ್ಯ ವ್ಯಕ್ತಿಗಳು ತಮ್ಮ ಪ್ರೀತಿ ಪಾತ್ರರ ಮಕ್ಕಳಿಗೆ ಕಲಘಟಗಿ ತೊಟ್ಟಿಲನ್ನು ನೀಡುತ್ತಾರೆ. ಅದೇ ರೀತಿ ಇದೀಗ ವನಿತಾ ಗುತ್ತಲ ಅವರು ಮೇಘನಾ ರಾಜ್ ಅವರಿಗೆ ಕಲಘಟಗಿ ತೊಟ್ಟಿಲನ್ನು ಮಾಡಿಸಿ ಜೂನಿಯರ್ ಚಿರುಗೆ ಉಡುಗೊರೆಯಾಗಿ ನೀಡಿದ್ದಾರೆ.

jr chiru meghana raj vanita guttal 2 15 e1605167328771

ಇನ್ನೂ ವಿಷೇಶವೆಂದರೆ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಮಗಳು ಐರಾಗೂ ಸ್ವತಃ ನಟ ಅಂಬರೀಷ್ ಅವರು ಕಲಘಟಗಿ ತೊಟ್ಟಿಲನ್ನು ಹೇಳಿ ಮಾಡಿಸಿ ಉಡುಗೊರೆಯಾಗಿ ನೀಡಿದ್ದರು. ಇದಾದ ಬಳಿಕ ಜನಾರ್ದನ ರೆಡ್ಡಿ ಮೊಮ್ಮಗಳಿಗೂ ಸಹ ವನಿತಾ ಗುತ್ತಲ್ ಅವರೇ ತೊಟ್ಟಿಲನ್ನು ಮಾಡಿಸಿ ನೀಡಿದ್ದರು. ಮಾತ್ರವಲ್ಲದೆ ರಾಜ್‍ಕುಮಾರ್ ಕುಟುಂಬವರೂ ಕಲಘಟಗಿ ತೊಟ್ಟಿಲನ್ನು ಕೊಳ್ಳುತ್ತಾರೆ. ಇದೀಗ ಜೂನಿಯರ್ ಚಿರುಗು ಸಹ ಇದೇ ರೀತಿಯ ತೊಟ್ಟಿಲನ್ನು ವನಿತಾ ಅವರೇ ಉಡುಗೊರೆಯಾಗಿ ನೀಡಿದ್ದಾರೆ.

yash daughter tottilu

ತೊಟ್ಟಿಲಿನ ವಿಶೇಷತೆ ಏನು?
ಕರಕುಶಲಕಾರರ ಕೈಚಳಕದಲ್ಲಿ ಮೂಡುವ ಈ ತೊಟ್ಟಿಲುಗಳಿಗೆ ಭಾರೀ ಬೇಡಿಕೆ ಇದ್ದು, ಕಲಘಟಗಿ ತೊಟ್ಟಿಲಿಗೆ 600 ವರ್ಷಗಳ ಇತಿಹಾಸವಿದೆ. ಇಲ್ಲಿ ಧಾರ್ಮಿಕವಾಗಿ ತೊಟ್ಟಿಲು ಮಾಡುತ್ತಾರೆ. ತೊಟ್ಟಲಿಗೆ ಧಾರ್ಮಿಕ ಕಥೆಗಳು, ಮುದ್ದು ಕೃಷ್ಣ ಆಟ, ಲೀಲೆಗಳು, ರಾಮಾಯಣದ ಪ್ರಸಂಗಗಳು ಹೀಗೆ ವಿವಿಧ ರೀತಿಯ ಚಿತ್ರಗಳನ್ನು ಬಿಡಿಸಲಾಗುತ್ತದೆ. ಈ ಬಣ್ಣಕ್ಕೆ 100 ವರ್ಷ ಗ್ಯಾರೆಂಟಿ ಇರುತ್ತದೆ. ಅಲ್ಲದೆ ತೊಟ್ಟಿಲಿಗೆ ಬಣ್ಣ ಹಚ್ಚುವಾಗ ಅವರು ಸಾಧಾರಣ ಬಣ್ಣ ಹಚ್ಚುವುದಿಲ್ಲ. ಗಿಡಮೂಲಿಕೆ ಬಣ್ಣಗಳನ್ನು ಲೇಪನ ಮಾಡಲಾಗುತ್ತದೆ. ಒಂದು ತೊಟ್ಟಿಲುಗಳನ್ನು ತಯಾರಿಸಲು ಸುಮಾರು 4-5 ತಿಂಗಳುಗಳ ಕಾಲ ಸಮಯ ಬೇಕಾಗುತ್ತದೆ.

megana sarja boy cradle

ತೊಟ್ಟಿಲಿನ ಬೆಲೆ ಎಷ್ಟು?
ಜೂನಿಯರ್ ಚಿರುಗೆ ಕಲಘಟಗಿಯ ಕರಕುಶಲಕರ್ಮಿ ಮಾರುತಿ ಬಡಿಗೇರ್ ತೊಟ್ಟಿಲು ತಯಾರಿಸಿ ಕೊಟ್ಟಿದ್ದಾರೆ. ಆರಂಭದಲ್ಲಿ ಒಂದು ತೊಟ್ಟಿಲಿಗೆ 1.10 ಲಕ್ಷ ರೂ. ಹೇಳಿದ್ದರು. ನಾನು ಮೇಘನಾ ಕುಟುಂಬಕ್ಕೆ ತೊಟ್ಟಿಲು ಕೊಡುತ್ತಿರುವುದು ತಿಳಿದು 15 ಸಾವಿರ ರೂ. ಕಡಿಮೆ ಮಾಡಿದರು. ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ತೊಂದರೆಯಾದಾಗ ಸಹಾಯ ಮಾಡುತ್ತೇವೆ. ಆದರೆ ಮೇಘನಾ ಅವರು ಇಷ್ಟು ಬೇಸರಗೊಂಡಿದ್ದಾರೆ. ಹೀಗಾಗಿ ಸಹಾಯ ಮಾಡಬೇಕು ಎಂದು ಈ ಕೆಲಸ ಮಾಡಲು ನಿರ್ಧರಿಸಿದೆವು ಎಂದು ವನಿತಾ ಮಾಹಿತಿ ನೀಡಿದ್ದಾರೆ.

jr chiru meghana raj vanita guttal 2 1 e1605167233275

ಉತ್ತರ ಕರ್ನಾಟಕ ಶೈಲಿಯಲ್ಲಿ ಸೀಮಂತ
ಸರ್ಜಾ ಕುಟುಂಬಸ್ಥರನ್ನು ಹೇಗೆ ಸಂಪರ್ಕಿಸಬೇಕು ಎಂದು ನಮಗೆ ತಿಳಿದಿರಲಿಲ್ಲ. ಬಳಿಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿರುವ ಉಮೇಶ್ ಬಣಕಾರ್ ಅವರು ನಮ್ಮ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನವರು ಹೀಗೆ ಅವರನ್ನು ಸಂಪರ್ಕಿಸಿ, ಬಳಿಕ ಪ್ರಮೀಳಾ ಅವರನ್ನು ಸಂಪರ್ಕಿಸಿದೆವು. ಆರಂಭದಲ್ಲಿ ಸೀಮಂತ ಮಾಡುತ್ತೇವೆ ಎಂದು ಕೇಳಿದಾಗ ಅಷ್ಟೇನು ಆಸಕ್ತಿ ತೋರಲಿಲ್ಲ. ಬಳಿಕ ನಾವು ಕಾರ್ಯಕ್ರಮ ಮಾಡಲು ಮುಂದಾದಾಗ ಚೆನ್ನಾಗಿ ಸ್ಪಂದಿಸಿದರು. ಉತ್ತರ ಕರ್ನಾಟಕ ಶೈಲಿಯಲ್ಲೇ ಸೀಮಂತ ಮಾಡಿದೆವು. ಮೇಘನಾ ನಾನ್ ವೆಜ್ ಊಟ ಎಂದರೆ ಹೆಚ್ಚು ಇಷ್ಟ ಎಂದರು ಆಗ ಅಡಿಗೆ ಮಾಡಿ ಎರಡು ದಿನ ಬಿಟ್ಟು ಊಟ ತಂದುಕೊಟ್ಟೆವು. ಬಳಿಕ ಹೆರಿಗೆ ಆದಮೇಲೆ ಸಹ ಉತ್ತರ ಕರ್ನಾಟಕ ಶೈಲಿಯ ಕೊಬ್ಬರಿಖಾರ, ಅವಳಿ ಬೀಜ, ಅರಿಶಿಣ, ಬೆಳ್ಳುಳ್ಳಿ ಹೀಗೆ ನಮ್ಮ ಉತ್ತರ ಕರ್ನಾಟಕ ಪದ್ಧತಿಯಂತೆ ಎಲ್ಲ ಪದಾರ್ಥಗಳನ್ನು ಮೇಘನಾ ಮನೆಯವರಿಗೆ ನೀಡಿದೆವು ಎಂದು ತಿಳಿಸಿದರು.

jr chiru meghana raj vanita guttal 2 9 e1605167280837

ಮಗುವನ್ನು ಸ್ನಾನ ಮಾಡಿಸಲು ನಮ್ಮ ಸದಸ್ಯರೊಬ್ಬರನ್ನು 10 ದಿನಗಳ ಕಾಲ ಮೇಘನಾ ಅವರ ಮನೆಯಲ್ಲಿಯೇ ಬಿಟ್ಟಿದ್ದೆವು. ಇದೀಗ ಮಗುವಿನ ನಾಮಕರಣಕ್ಕೆ 16 ಜನ ಸ್ತ್ರೀ ಸಂಘದ ಸದಸ್ಯರೆಲ್ಲ ಬಂದಿದ್ದೇವೆ. ಹುಟ್ಟಿದ ಮನಿ ಪುಟ್ಟ ಎಂದು ಹೇಳಿ ನಾನೇ ಮಗುವಿಗೆ ಹೆಸರಿಟ್ಟೆ ತುಂಬಾ ಖುಷಿಯಾಯಿತು ಎಂದು ವನಿತಾ ವಿವರಿಸಿದ್ದಾರೆ.

TAGGED:Junior ChiruKalaghatgi CradleMeghana RajPublic TVVanita Guttulಕಲಘಟಗಿ ತೊಟ್ಟಿಲುಜೂನಿಯರ್ ಚಿರುಪಬ್ಲಿಕ್ ಟಿವಿಮೇಘನಾ ರಾಜ್ವನಿತಾ ಗುತ್ತಲ್
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

Prabhu Chauhan
Bengaluru City

ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ – ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರನ ವಿರುದ್ಧ ದೂರು

Public TV
By Public TV
20 minutes ago
03 5
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-3

Public TV
By Public TV
7 hours ago
02 5
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-2

Public TV
By Public TV
7 hours ago
01 8
Big Bulletin

ಬಿಗ್‌ ಬುಲೆಟಿನ್‌ 17 July 2025 ಭಾಗ-1

Public TV
By Public TV
7 hours ago
Yadgir DYSP
Dakshina Kannada

ಡಿವೈಎಸ್‌ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್‌ಫರ್‌

Public TV
By Public TV
8 hours ago
Robert Vadra
Crime

ಶಿಕೋಹ್‌ಪುರ ಭೂ ವ್ಯವಹಾರ ಕೇಸ್‌ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್‌ಶೀಟ್

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?