ಕಲಬರುಗಿ: ಇಂದು 73ನೇಯ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಗರದ ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಾಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. 2013-14 ರಿಂದ 219-20ರ ವರೆಗೆ ಕೆಕೆಆರ್ ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ವಿಶೇಷ ಕೈಪಿಡಿಯನ್ನ ಸಿಎಂ ಬಿಡುಗಡೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದರು.
ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆಂದು ಅನ್ಕೊಂಡಿರಲಿಲ್ಲ. ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿ ವಿಭಾಗದಲ್ಲಿ ಸ್ವಾತಂತ್ರ್ಯ ಸಂಭ್ರಮ ಕಳೆಗಟ್ಟಿದೆ. ಬ್ರಿಟಿಷರಿಂದ ದೇಶಕ್ಕೆ ಆಗಸ್ಟ್ 15 ರಂದು ಸ್ವಾತಂತ್ರ್ಯ ದೊರೆತಿದ್ದರೆ ಅಂದಿನ ಹೈದ್ರಾಬಾದ್ ಕರ್ನಾಟಕ, ಈಗಿನ ಕಲ್ಯಾಣ ಕರ್ನಾಟಕಕ್ಕೆ ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ಸಿಕ್ಕಿತ್ತು. ಈ ಹಿನ್ನೆಲೆ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತದೆ. ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತದೆ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ @BSYBJP ರವರು ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. (1/3)#ಕಲ್ಯಾಣಕರ್ನಾಟಕ pic.twitter.com/8wPeuZVmS3
— CM of Karnataka (@CMofKarnataka) September 17, 2020
ಇನ್ನು ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಉಮೇಶ್ ಜಾದವ್, ಸಚಿವ ಆರ್.ಅಶೋಕ್, ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್, ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವರು ಕಲ್ಯಾಣ ಕರ್ನಾಟಕದ ಉತ್ಸವದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು, ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ @GovindKarjol, KKRDB ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, NEKSRTC ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ (2/3) pic.twitter.com/qAT5iear28
— CM of Karnataka (@CMofKarnataka) September 17, 2020