Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿಯಲ್ಲಿ ತರಕಾರಿ ಮಾರುಕಟ್ಟೆ ಸಂಕೀರ್ಣಕ್ಕೆ ಸಿಎಂ ಶಂಕುಸ್ಥಾಪನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಕಲಬುರಗಿಯಲ್ಲಿ ತರಕಾರಿ ಮಾರುಕಟ್ಟೆ ಸಂಕೀರ್ಣಕ್ಕೆ ಸಿಎಂ ಶಂಕುಸ್ಥಾಪನೆ

Kalaburagi

ಕಲಬುರಗಿಯಲ್ಲಿ ತರಕಾರಿ ಮಾರುಕಟ್ಟೆ ಸಂಕೀರ್ಣಕ್ಕೆ ಸಿಎಂ ಶಂಕುಸ್ಥಾಪನೆ

Public TV
Last updated: July 10, 2021 4:40 pm
Public TV
Share
2 Min Read
glb cm
SHARE

ಕಲಬುರಗಿ: ಅನ್ನದಾತರ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ನಗರದ ಎಂ.ಎಸ್.ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ಅನುದಾನದಡಿ, 2 ಎಕರೆ ಪ್ರದೇಶದಲ್ಲಿ ಸುಮಾರು 26.30 ಕೋಟಿ ರೂ. ವೆಚ್ಚದಲ್ಲಿ ನೂತನ ಮಾದರಿಯ ತರಕಾರಿ ಮಾರುಕಟ್ಟೆ ಸಂಕೀರ್ಣಕ್ಕೆ ಶನಿವಾರ ಅಡಿಗಲ್ಲು ಹಾಕಿ ಅವರು ಮಾತನಾಡಿದರು.

cm bsy 2 4 medium

ಅನ್ನದಾತರ ಬೆಳೆಗೆ ಸೂಕ್ತ ಮಾರುಕಟ್ಟೆ ದೊರಕಬೇಕು ಎಂಬ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಹೆಚ್ಚಿನ ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಹೂವು ಬೆಳೆಗಾರರು ಹಾಗೂ ತರಕಾರಿ ಮಾರಾಟಗಾರರು ಸೂಕ್ತ ಮಾರುಕಟ್ಟೆ ಸಿಗದೆ ಕಷ್ಟ ಅನುಭವಿಸಿದ್ದರು. ಇದನ್ನರಿತ ಕೇಂದ್ರ ಸರ್ಕಾರ ದೂರದ ಪ್ರದೇಶದಲ್ಲಿಯೂ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡಲು ಸಾಗಾಣಿಕೆಗೆ ಕಿಸಾನ್ ರೈಲು ಯೋಜನೆ ಜಾರಿಗೆ ತಂದಿದ್ದು, ರೈತರಿಗೆ ತುಂಬಾ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 20 ಕೊಟಿ ರೂ. ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರದಿಂದ 6.30 ಕೋಟಿ ರೂ. ಹೀಗೆ ಒಟ್ಟು 26.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತರಕಾರಿ ಮಾರುಕಟ್ಟೆ ಸಂಕೀರ್ಣ ರಾಜ್ಯದ ಇತಿಹಾಸದಲ್ಲೇ ಮೊದಲ ಕಟ್ಟಡವಾಗಿದ್ದು, ತುಂಬಾ ಸಂತೋಷದಿಂದ ಅಡಿಗಲ್ಲು ನೆರವೇರಿಸಿದ್ದೇನೆ. ಈ ತರಹದ ಮಾದರಿ ತರಕಾರಿ ಮಾರುಕಟ್ಟೆ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ತರಲಾಗುವುದು ಎಂದರು.

glb cm bsy 1 medium

ನೂತನ ತರಕಾರಿ ಮಾರುಕಟ್ಟೆಯಿಂದ ಈ ಭಾಗದ ರೈತರ ಹಾಗೂ ಜನರ ಬಹುದಿನಗಳ ಕನಸು ನನಸಾಗಲಿದ್ದು, ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದ ಮತ್ತು ಮಳೆಗಾಲದಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದ ರೈತಾಪಿ ವರ್ಗಕ್ಕೆ ಇದರಿಂದ ನೆಮ್ಮದಿ ಸಿಕ್ಕಿದೆ. ರಸ್ತೆಯುದ್ದಕ್ಕೂ ಜನ ಗುಂಪಾಗಿ ಸೇರುವ ಕಾರಣ ಅಪಘಾತವಾಗುವ ಸಾಧ್ಯತೆಗಳನ್ನು ಮನಗಂಡು ನೂತನ ತರಕಾರಿ ಮಾರುಕಟ್ಟೆ ಸ್ಥಾಪಿಸಲಾಗುತ್ತಿದೆ. ಇದರಿಂದ ಪ್ರದೇಶದಲ್ಲಿನ ಮುಕ್ತ ಸಂಚಾರಕ್ಕೂ ಅನುವಾಗಲಿದೆ ಎಂದರು.

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ದೊರಕಿಸುವಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕೃಷಿ ನಮ್ಮ ಆದ್ಯತಾ ವಲಯವಾಗಿದ್ದು, ಕೃಷಿಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಿದೆ. ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‍ಗೆ ತಲಾ 10,000 ರೂ. ಗಳಂತೆ 20 ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ. ಅದೇ ರೀತಿ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಗರಿಷ್ಠ 1 ಹೆಕ್ಟೇರ್‍ಗೆ ತಲಾ 10,000 ರೂ. ಗಳಂತೆ 69,000 ಸಾವಿರ ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು.

cm bsy 2 3 medium

ಕಟ್ಟಡದ ವಿಶೇಷತೆ
ನೂತನ ತರಕಾರಿ ಮಾರುಕಟ್ಟೆ ಕಾಂಪ್ಲೆಕ್ಸ್ ಬೇಸ್‍ಮೆಂಟ್ ಮಹಡಿ, ನೆಲ ಮಹಡಿ ಹಾಗೂ ಮೊದಲನೇ ಮಹಡಿ ಒಳಗೊಂಡಿದೆ. ಬೇಸ್‍ಮೆಂಟ್ ಮಹಡಿಯಲ್ಲಿ ವಾಹನ ನಿಲುಗಡೆ, ಲಿಫ್ಟ್, ಸ್ಟೇರ್‍ಕೇಸ್, ಸಂಪ್ ಟ್ಯಾಂಕ್, ಎಲೆಕ್ಟ್ರೀಕಲ್ ಕೋಣೆ ಇರಲಿದೆ. ನೆಲ ಮಹಡಿಯಲ್ಲಿ 62 ಅಂಗಡಿಗಳು, ತರಕಾರಿ ಮಾರಾಟಕ್ಕೆ 192 ಮಳಿಗೆ, ಸಗಟು ವ್ಯಾಪಾರ ಹರಾಜು ಪ್ರಕ್ರಿಯೆಗೆ ಪ್ಲಾಟ್‍ಫಾರ್ಮ್, ಘನತ್ಯಾಜ್ಯ ಸಂಗ್ರಹಣೆಗೆ ಸ್ಥಳ, ಕೋಲ್ಟ್ ಸ್ಟೋರೇಜ್ ಕೋಣೆ ಹಾಗೂ ಶೌಚಾಲಯ ಇರಲಿವೆ. ಮೊದಲನೇ ಮಹಡಿಯಲ್ಲಿ 47 ಅಂಗಡಿಗಳು, ಇತರೆ ಕಾರ್ಯಾಲಯ, ಬ್ಯಾಂಕ್ ಇರಲಿದ್ದು, ಒಟ್ಟಾರೆ ಸಂಕೀರ್ಣದಲ್ಲಿ 301 ಅಂಗಡಿಗಳಿರಲಿವೆ ಎಂದು ಸಿ.ಎಂ. ಯಡಿಯೂರಪ್ಪನವರು ಹೇಳಿದ್ದಾರೆ.

TAGGED:CM BS YediyurappaKalaburagiPublic TVVegetable marketಕಲಬುರಗಿತರಕಾರಿ ಮಾರುಕಟ್ಟೆಪಬ್ಲಿಕ್ ಟಿವಿಸಿಎಂ ಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
10 minutes ago
Hailstones thunder and lightning heavy rain in Shivamogga 1
Districts

ಆಲಿಕಲ್ಲಿನ ರಾಶಿ, ಗುಡುಗು, ಸಿಡಿಲಿನ ನರ್ತನ – ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ

Public TV
By Public TV
40 minutes ago
PRAJWAL REVANNA
Bengaluru City

70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Public TV
By Public TV
56 minutes ago
Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
1 hour ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
1 hour ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?